ಸರ್ಕಾರಿ ಗೋಮಾಳವನ್ನು ಒತ್ತುವರಿ ಮಾಡಿರುವ ಭೂಗಳ್ಳರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಎದುರು ಕರ್ನಾಟಕ ಭೀಮ್ ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಭೀಮ್ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮುನಿರಾಜ್, ತಾಲ್ಲೂಕಿನ ಕಸಬಾ ಹೋಬಳಿ, ಪಾಲನಜೋಗಹಳ್ಳಿ ಗ್ರಾಮದ ಸರ್ವೆ ನಂ.21ರಲ್ಲಿ, 18 ಎಕರೆ 20 ಗುಂಟೆ ಸಂಪೂರ್ಣ ಜಮೀನು ಗೋಮಾಳ ಎಂದು ಸರ್ಕಾರಿ ದಾಖಲೆಗಳಲ್ಲಿ ಸ್ಪಷ್ಟವಾಗಿ ದಾಖಲಾಗಿದೆ, ಅದರಲ್ಲಿ ರಂಗಮ್ಮ ಕೋಂ ವೆಂಕಟೇಶಯ್ಯ ಎಂಬುವರಿಗೆ ತಹಸೀಲ್ದಾರ್ ರ ಆದೇಶದಂತೆ ನಂಬರ್ 65/60-61 ರಂತ 2 ಎಕರೆ ಜಮೀನು ದರಖಾಸ್ತು ಮೂಲಕ ಮಂಜೂರಾಗಿದ್ದು, ಉಳಿಕೆ 16 ಎಕರೆ 20 ಗುಂಟೆ ಸರ್ಕಾರಿ ಜಮೀನು ಭೂಗಳ್ಳರು ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ಮೊಸ ಮಾಡಿದ್ದಾರೆ ಎಂದು ಆರೋಪಿಸಿದರು.
18 ಎಕರೆ ಭೂಮಿಯಲ್ಲಿ ಸುಮಾರು ಮೂರು ಎಕರೆಯಷ್ಟು ಭೂ ಪರಿವರ್ತನೆಯಾಗಿದ್ದು ಸದರಿ ಸ್ಥಳದಲ್ಲಿ 106 ನಿವೇಶನಗಳನ್ನು ವಿಂಗಡಿಸಿದ್ದಾರೆ, ಕೊಡಿಗೆಹಳ್ಳಿ ಪಂಚಾಯತಿ ವ್ಯಾಪ್ತಿಗೆ ಬರುವ ಈ ಸದರಿ ನಿವೇಶನಗಳಿಗೆ ಪಂಚಾಯಿತಿಯಲ್ಲಿ ಖಾತೆ ಸಹ ದಾಖಲಾಗಿಲ್ಲ, ಆದರೂ ನಕಲಿ ದಾಖಲೆ ಸೃಷ್ಟಿ ಮಾಡಿ ಮಾರಾಟ ಮಾಡಿ ಉಪ ನೊಂದಣಾಧಿಕಾರಿಗಳ ಕಚೇರಿಯಲ್ಲಿ ರಿಜಿಸ್ಟರ್ ಮಾಡಿಸುತ್ತಿದ್ದಾರೆ.
ಈ ಹಿಂದೆ ಅಧಿಕಾರಿಗಳಿಗೆ ಎರಡು ಬಾರಿ ಅಕ್ರಮ ಭೂ ಒತ್ತುವರಿ ಬಗ್ಗೆ ಮನವಿ ಸಲ್ಲಿಸಿದ್ದೇವೆ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ, ತಹಶಿಲ್ದಾರ್ ಮತ್ತು ಜಿಲ್ಲಾಧಿಕಾರಿಗಳು ಈ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ದಾಖಲಾತಿಗಳನ್ನು ಪರಿಶೀಲನೆ ನಡೆಸಿ ಕಾನೂನು ಉಲ್ಲಂಘಿಸಿರುವ ಅಧಿಕಾರಿಗಳು ಮತ್ತು ಭೂಗಳ್ಳರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಭೂಮಿಯನ್ನು ಭೂ ರಹಿತರಿಗೆ ಹಂಚಬೇಕೆಂದು ಒತ್ತಾಯಿಸಿದರು.
ಈ ವೇಳೆ ಕರ್ನಾಟಕ ಭೀಮ್ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಶಂಕರ್ ರಾಮಲಿಂಗಯ್ಯ, ಬೆಂ.ಗ್ರಾ. ಜಿಲ್ಲಾಧ್ಯಕ್ಷ ನಂಜೇಶ್, ಜಿಲ್ಲಾ ಕಾರ್ಯದರ್ಶಿ ಮಂಜುನಾಥ್, ತಾಲ್ಲೂಕು ಅಧ್ಯಕ್ಷ ದಾಳಪ್ಪ ದಲಿತ ಮುಖಂಡ ವೆಂಕಟೇಶ್ ಮುಂತಾದವರು ಉಪಸ್ಥಿತರಿದ್ದರು.
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…