ಗೋಮೂತ್ರ ತುಂಬಿದ ಗುಂಡಿಯಲ್ಲಿ ಬಿದ್ದು ತಂದೆ- ಮಗ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಗುರುವಾರ ಮಧ್ಯಾಹ್ನ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಗೌಡನಗಳ್ಳಿ ಗ್ರಾಮದಲ್ಲಿರುವ ಜಮೀನೊಂದರಲ್ಲಿ ನಡೆದಿದೆ.
ಗ್ರಾಮದ ಮಹಾಲಿಂಗಪ್ಪ (50), ಪುತ್ರ ಪೃಥ್ವಿ (25) ಮೃತ ದುರ್ದೈವಿಗಳು.
ಅಡಿಕೆ ಗಿಡಗಳಿಗೆ ಗೋಮೂತ್ರ ಹಾಕಲು ಜಮೀನಲ್ಲಿ ಗುಂಡಿಯನ್ನ ತೆಗಿಸಲಾಗಿತ್ತು. ಐದಕ್ಕೂ ಹೆಚ್ಚು ಅಡಿ ಆಳದ ಆ ಗುಂಡಿಯಲ್ಲಿ ಗೋಮೂತ್ರ ಶೇಖರಣೆಯಾಗಿತ್ತು. ಅಡಿಕೆ ಗಿಡಗಳಿಗೆ ಗುಂಡಿಯಿಂದ ಗೋಮೂತ್ರ ತುಂಬಿ ಹಾಕುವಾಗ ಮಹಾಲಿಂಗಪ್ಪ ಕಾಲು ಜಾರಿ ಬಿದ್ದಿದ್ದಾರೆ. ಗುಂಡಿಗೆ ಬಿದ್ದ ತನ್ನ ತಂದೆಯನ್ನ ರಕ್ಷಣೆಗೆ ಇಳಿದಿದ್ದ ಪುತ್ರನೂ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…
ನಟಿ ತ್ರಿಷಾ ಜತೆ ಅಫೇರ್ ಆರೋಪ, ಹೆಂಡ್ತಿ ಡಿವೋರ್ಸ್ ಗೆ ಅರ್ಜಿ ವಿಚಾರ, ವಿಪಕ್ಷಗಳ ಟೀಕಾ ಪ್ರಹಾರ, ಸೋಷಿಯಲ್ ಮೀಡಿಯಾದಲ್ಲಿ…