ಗೋವು ಭಾರತೀಯರಿಗೆ ತಾಯಿ ಸಮಾನ-ಸಂಕ್ರಾಂತಿ ಹಬ್ಬದಲ್ಲಿ ಗೋವನ್ನು ವಿಶೇಷವಾಗಿ ಪೂಜಿಸಲಾಗುತ್ತದೆ-ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆ ಅತ್ಯಂತ ಖಂಡನೀಯ- ಗೋಮಾತೆಯ ಕೆಚ್ಚಲು ಕತ್ತರಿಸಿದ ಪಾಪಿಗಳನ್ನು ಸರ್ಕಾರ ಈ ಕೂಡಲೇ ಬಂಧಿಸಬೇಕು- ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಗೋಮಾತೆಯ ಕೆಚ್ಚಲು ಕತ್ತರಿಸಿದ ಪಾಪಿಗಳನ್ನು ಸರ್ಕಾರ ಈ ಕೂಡಲೇ ಬಂಧಿಸಬೇಕು ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.

ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಮೇಲೆ ನಡೆದ ವಿಕೃತ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ವಿಕೃತಿ ಹೆಚ್ಚಾಗುತ್ತಲೇ ಇದೆ. ಚಾಮರಾಜಪೇಟೆಯ ಪಶು ಆಸ್ಪತ್ರೆಯನ್ನು ಎತ್ತಂಗಡಿ ಮಾಡುವ ಸಂಚು ಸರ್ಕಾರ ಬಂದಾಗಿನಿಂದಲೂ ನಡೆಯುತ್ತಿದೆ. ಪೊಲೀಸರು ಸಮಗ್ರವಾಗಿ ತನಿಖೆ ನಡೆಸಿ ಕಿಡಿಗೇಡಿಗಳ ವಿರುದ್ಧ ಕ್ರಮತೆಗೆದುಕೊಳ್ಳಬೇಕಿದೆ ಎಂದು ಆಗ್ರಹಿಸಿದ್ದಾರೆ.

ಗೋವು ಭಾರತೀಯರಿಗೆ ತಾಯಿ ಸಮಾನ. ಅದರಲ್ಲೂ ಸಂಕ್ರಾಂತಿ ಹಬ್ಬದಲ್ಲಿ ಗೋವನ್ನು ವಿಶೇಷವಾಗಿ ಪೂಜಿಸಲಾಗುತ್ತದೆ. ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುವಿನ ಕೆಚ್ಚಲು ಕೊಯ್ದು ಹಾಕುವ ಮೂಲಕ ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲು ಹಾಕಿವೆ. ಇಂತಹ ಜಿಹಾದಿ ಮನಸ್ಥಿತಿಯನ್ನು ನಮ್ಮ ರಾಜ್ಯ ಈವರೆಗೂ ಕಂಡಿರರಿಲ್ಲ ಎಂದಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ವೇಳೆ ಕರಸೇವಕರ ಮೇಲಿನ 30 ವರ್ಷದ ಹಳೇ ಕೇಸುಗಳು ರೀ ಓಪನ್ ಆಗುತ್ತವೆ. ಗಣೇಶ ಹಬ್ಬದ ಸಂದರ್ಭದಲ್ಲಿ ಕೋಮುದಳ್ಳುರಿ ನಡೆಯುತ್ತದೆ. ದಸರಾ ಹಬ್ಬದ ಸಂದರ್ಭದಲ್ಲಿ ದುರ್ಗಾಮತೆಯ ಮೆರವಣಿಗೆಯಲ್ಲಿ ಗಲಾಟೆ ಆಗುತ್ತದೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಪದೇ ಪದೇ ಈ ಕೋಮುಗಲಭೆಗಳು ಯಾಕೆ ನಡೆಯುತ್ತಿವೆ? ಕಾಂಗ್ರೆಸ್ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣದಿಂದ ಮತಾಂಧ ಶಕ್ತಿಗಳಿಗೆ ಕೊಂಬು ಬಂದಿದೆ. ಮೂಲಭೂತವಾದಿಗಳಿಗೆ ಕಾನೂನಿನ ಭಯವೇ ಇಲ್ಲದಂತಾಗಿದೆ ಎಂದು ಕಿಡಿಕಾರಿದ್ದಾರೆ.

ಚಾಮರಾಜಪೇಟೆಯಲ್ಲಿ ನಡೆದಿರುವ ಈ ಅಮಾನುಷ ಘಟನೆಯನ್ನ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ತುಷ್ಟೀಕರಣ ರಾಜಕಾರಣಕ್ಕಾಗಿ ಸಮಾಜದ ಶಾಂತಿ, ಸುವ್ಯವಸ್ಥೆಯನ್ನು ಬಲಿ ಕೊಡದೆ ಮತಾಂಧ ಶಕ್ತಿಗಳ ಹೆಡೆಮುರಿ ಕಟ್ಟುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

12 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

17 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

17 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

22 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago