ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಗೋಮಾತೆಯ ಕೆಚ್ಚಲು ಕತ್ತರಿಸಿದ ಪಾಪಿಗಳನ್ನು ಸರ್ಕಾರ ಈ ಕೂಡಲೇ ಬಂಧಿಸಬೇಕು ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.
ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಮೇಲೆ ನಡೆದ ವಿಕೃತ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ವಿಕೃತಿ ಹೆಚ್ಚಾಗುತ್ತಲೇ ಇದೆ. ಚಾಮರಾಜಪೇಟೆಯ ಪಶು ಆಸ್ಪತ್ರೆಯನ್ನು ಎತ್ತಂಗಡಿ ಮಾಡುವ ಸಂಚು ಸರ್ಕಾರ ಬಂದಾಗಿನಿಂದಲೂ ನಡೆಯುತ್ತಿದೆ. ಪೊಲೀಸರು ಸಮಗ್ರವಾಗಿ ತನಿಖೆ ನಡೆಸಿ ಕಿಡಿಗೇಡಿಗಳ ವಿರುದ್ಧ ಕ್ರಮತೆಗೆದುಕೊಳ್ಳಬೇಕಿದೆ ಎಂದು ಆಗ್ರಹಿಸಿದ್ದಾರೆ.
ಗೋವು ಭಾರತೀಯರಿಗೆ ತಾಯಿ ಸಮಾನ. ಅದರಲ್ಲೂ ಸಂಕ್ರಾಂತಿ ಹಬ್ಬದಲ್ಲಿ ಗೋವನ್ನು ವಿಶೇಷವಾಗಿ ಪೂಜಿಸಲಾಗುತ್ತದೆ. ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುವಿನ ಕೆಚ್ಚಲು ಕೊಯ್ದು ಹಾಕುವ ಮೂಲಕ ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲು ಹಾಕಿವೆ. ಇಂತಹ ಜಿಹಾದಿ ಮನಸ್ಥಿತಿಯನ್ನು ನಮ್ಮ ರಾಜ್ಯ ಈವರೆಗೂ ಕಂಡಿರರಿಲ್ಲ ಎಂದಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ವೇಳೆ ಕರಸೇವಕರ ಮೇಲಿನ 30 ವರ್ಷದ ಹಳೇ ಕೇಸುಗಳು ರೀ ಓಪನ್ ಆಗುತ್ತವೆ. ಗಣೇಶ ಹಬ್ಬದ ಸಂದರ್ಭದಲ್ಲಿ ಕೋಮುದಳ್ಳುರಿ ನಡೆಯುತ್ತದೆ. ದಸರಾ ಹಬ್ಬದ ಸಂದರ್ಭದಲ್ಲಿ ದುರ್ಗಾಮತೆಯ ಮೆರವಣಿಗೆಯಲ್ಲಿ ಗಲಾಟೆ ಆಗುತ್ತದೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಪದೇ ಪದೇ ಈ ಕೋಮುಗಲಭೆಗಳು ಯಾಕೆ ನಡೆಯುತ್ತಿವೆ? ಕಾಂಗ್ರೆಸ್ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣದಿಂದ ಮತಾಂಧ ಶಕ್ತಿಗಳಿಗೆ ಕೊಂಬು ಬಂದಿದೆ. ಮೂಲಭೂತವಾದಿಗಳಿಗೆ ಕಾನೂನಿನ ಭಯವೇ ಇಲ್ಲದಂತಾಗಿದೆ ಎಂದು ಕಿಡಿಕಾರಿದ್ದಾರೆ.
ಚಾಮರಾಜಪೇಟೆಯಲ್ಲಿ ನಡೆದಿರುವ ಈ ಅಮಾನುಷ ಘಟನೆಯನ್ನ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ತುಷ್ಟೀಕರಣ ರಾಜಕಾರಣಕ್ಕಾಗಿ ಸಮಾಜದ ಶಾಂತಿ, ಸುವ್ಯವಸ್ಥೆಯನ್ನು ಬಲಿ ಕೊಡದೆ ಮತಾಂಧ ಶಕ್ತಿಗಳ ಹೆಡೆಮುರಿ ಕಟ್ಟುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…
ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…
ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…
ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…
ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…