ಗೋವು ಭಾರತೀಯರಿಗೆ ತಾಯಿ ಸಮಾನ-ಸಂಕ್ರಾಂತಿ ಹಬ್ಬದಲ್ಲಿ ಗೋವನ್ನು ವಿಶೇಷವಾಗಿ ಪೂಜಿಸಲಾಗುತ್ತದೆ-ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆ ಅತ್ಯಂತ ಖಂಡನೀಯ- ಗೋಮಾತೆಯ ಕೆಚ್ಚಲು ಕತ್ತರಿಸಿದ ಪಾಪಿಗಳನ್ನು ಸರ್ಕಾರ ಈ ಕೂಡಲೇ ಬಂಧಿಸಬೇಕು- ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಗೋಮಾತೆಯ ಕೆಚ್ಚಲು ಕತ್ತರಿಸಿದ ಪಾಪಿಗಳನ್ನು ಸರ್ಕಾರ ಈ ಕೂಡಲೇ ಬಂಧಿಸಬೇಕು ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.

ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಮೇಲೆ ನಡೆದ ವಿಕೃತ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ವಿಕೃತಿ ಹೆಚ್ಚಾಗುತ್ತಲೇ ಇದೆ. ಚಾಮರಾಜಪೇಟೆಯ ಪಶು ಆಸ್ಪತ್ರೆಯನ್ನು ಎತ್ತಂಗಡಿ ಮಾಡುವ ಸಂಚು ಸರ್ಕಾರ ಬಂದಾಗಿನಿಂದಲೂ ನಡೆಯುತ್ತಿದೆ. ಪೊಲೀಸರು ಸಮಗ್ರವಾಗಿ ತನಿಖೆ ನಡೆಸಿ ಕಿಡಿಗೇಡಿಗಳ ವಿರುದ್ಧ ಕ್ರಮತೆಗೆದುಕೊಳ್ಳಬೇಕಿದೆ ಎಂದು ಆಗ್ರಹಿಸಿದ್ದಾರೆ.

ಗೋವು ಭಾರತೀಯರಿಗೆ ತಾಯಿ ಸಮಾನ. ಅದರಲ್ಲೂ ಸಂಕ್ರಾಂತಿ ಹಬ್ಬದಲ್ಲಿ ಗೋವನ್ನು ವಿಶೇಷವಾಗಿ ಪೂಜಿಸಲಾಗುತ್ತದೆ. ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುವಿನ ಕೆಚ್ಚಲು ಕೊಯ್ದು ಹಾಕುವ ಮೂಲಕ ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲು ಹಾಕಿವೆ. ಇಂತಹ ಜಿಹಾದಿ ಮನಸ್ಥಿತಿಯನ್ನು ನಮ್ಮ ರಾಜ್ಯ ಈವರೆಗೂ ಕಂಡಿರರಿಲ್ಲ ಎಂದಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ವೇಳೆ ಕರಸೇವಕರ ಮೇಲಿನ 30 ವರ್ಷದ ಹಳೇ ಕೇಸುಗಳು ರೀ ಓಪನ್ ಆಗುತ್ತವೆ. ಗಣೇಶ ಹಬ್ಬದ ಸಂದರ್ಭದಲ್ಲಿ ಕೋಮುದಳ್ಳುರಿ ನಡೆಯುತ್ತದೆ. ದಸರಾ ಹಬ್ಬದ ಸಂದರ್ಭದಲ್ಲಿ ದುರ್ಗಾಮತೆಯ ಮೆರವಣಿಗೆಯಲ್ಲಿ ಗಲಾಟೆ ಆಗುತ್ತದೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಪದೇ ಪದೇ ಈ ಕೋಮುಗಲಭೆಗಳು ಯಾಕೆ ನಡೆಯುತ್ತಿವೆ? ಕಾಂಗ್ರೆಸ್ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣದಿಂದ ಮತಾಂಧ ಶಕ್ತಿಗಳಿಗೆ ಕೊಂಬು ಬಂದಿದೆ. ಮೂಲಭೂತವಾದಿಗಳಿಗೆ ಕಾನೂನಿನ ಭಯವೇ ಇಲ್ಲದಂತಾಗಿದೆ ಎಂದು ಕಿಡಿಕಾರಿದ್ದಾರೆ.

ಚಾಮರಾಜಪೇಟೆಯಲ್ಲಿ ನಡೆದಿರುವ ಈ ಅಮಾನುಷ ಘಟನೆಯನ್ನ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ತುಷ್ಟೀಕರಣ ರಾಜಕಾರಣಕ್ಕಾಗಿ ಸಮಾಜದ ಶಾಂತಿ, ಸುವ್ಯವಸ್ಥೆಯನ್ನು ಬಲಿ ಕೊಡದೆ ಮತಾಂಧ ಶಕ್ತಿಗಳ ಹೆಡೆಮುರಿ ಕಟ್ಟುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

4 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

13 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

23 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago