ಗೋವು ಭಾರತೀಯರಿಗೆ ತಾಯಿ ಸಮಾನ-ಸಂಕ್ರಾಂತಿ ಹಬ್ಬದಲ್ಲಿ ಗೋವನ್ನು ವಿಶೇಷವಾಗಿ ಪೂಜಿಸಲಾಗುತ್ತದೆ-ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆ ಅತ್ಯಂತ ಖಂಡನೀಯ- ಗೋಮಾತೆಯ ಕೆಚ್ಚಲು ಕತ್ತರಿಸಿದ ಪಾಪಿಗಳನ್ನು ಸರ್ಕಾರ ಈ ಕೂಡಲೇ ಬಂಧಿಸಬೇಕು- ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಗೋಮಾತೆಯ ಕೆಚ್ಚಲು ಕತ್ತರಿಸಿದ ಪಾಪಿಗಳನ್ನು ಸರ್ಕಾರ ಈ ಕೂಡಲೇ ಬಂಧಿಸಬೇಕು ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.

ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಮೇಲೆ ನಡೆದ ವಿಕೃತ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ವಿಕೃತಿ ಹೆಚ್ಚಾಗುತ್ತಲೇ ಇದೆ. ಚಾಮರಾಜಪೇಟೆಯ ಪಶು ಆಸ್ಪತ್ರೆಯನ್ನು ಎತ್ತಂಗಡಿ ಮಾಡುವ ಸಂಚು ಸರ್ಕಾರ ಬಂದಾಗಿನಿಂದಲೂ ನಡೆಯುತ್ತಿದೆ. ಪೊಲೀಸರು ಸಮಗ್ರವಾಗಿ ತನಿಖೆ ನಡೆಸಿ ಕಿಡಿಗೇಡಿಗಳ ವಿರುದ್ಧ ಕ್ರಮತೆಗೆದುಕೊಳ್ಳಬೇಕಿದೆ ಎಂದು ಆಗ್ರಹಿಸಿದ್ದಾರೆ.

ಗೋವು ಭಾರತೀಯರಿಗೆ ತಾಯಿ ಸಮಾನ. ಅದರಲ್ಲೂ ಸಂಕ್ರಾಂತಿ ಹಬ್ಬದಲ್ಲಿ ಗೋವನ್ನು ವಿಶೇಷವಾಗಿ ಪೂಜಿಸಲಾಗುತ್ತದೆ. ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುವಿನ ಕೆಚ್ಚಲು ಕೊಯ್ದು ಹಾಕುವ ಮೂಲಕ ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲು ಹಾಕಿವೆ. ಇಂತಹ ಜಿಹಾದಿ ಮನಸ್ಥಿತಿಯನ್ನು ನಮ್ಮ ರಾಜ್ಯ ಈವರೆಗೂ ಕಂಡಿರರಿಲ್ಲ ಎಂದಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ವೇಳೆ ಕರಸೇವಕರ ಮೇಲಿನ 30 ವರ್ಷದ ಹಳೇ ಕೇಸುಗಳು ರೀ ಓಪನ್ ಆಗುತ್ತವೆ. ಗಣೇಶ ಹಬ್ಬದ ಸಂದರ್ಭದಲ್ಲಿ ಕೋಮುದಳ್ಳುರಿ ನಡೆಯುತ್ತದೆ. ದಸರಾ ಹಬ್ಬದ ಸಂದರ್ಭದಲ್ಲಿ ದುರ್ಗಾಮತೆಯ ಮೆರವಣಿಗೆಯಲ್ಲಿ ಗಲಾಟೆ ಆಗುತ್ತದೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಪದೇ ಪದೇ ಈ ಕೋಮುಗಲಭೆಗಳು ಯಾಕೆ ನಡೆಯುತ್ತಿವೆ? ಕಾಂಗ್ರೆಸ್ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣದಿಂದ ಮತಾಂಧ ಶಕ್ತಿಗಳಿಗೆ ಕೊಂಬು ಬಂದಿದೆ. ಮೂಲಭೂತವಾದಿಗಳಿಗೆ ಕಾನೂನಿನ ಭಯವೇ ಇಲ್ಲದಂತಾಗಿದೆ ಎಂದು ಕಿಡಿಕಾರಿದ್ದಾರೆ.

ಚಾಮರಾಜಪೇಟೆಯಲ್ಲಿ ನಡೆದಿರುವ ಈ ಅಮಾನುಷ ಘಟನೆಯನ್ನ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ತುಷ್ಟೀಕರಣ ರಾಜಕಾರಣಕ್ಕಾಗಿ ಸಮಾಜದ ಶಾಂತಿ, ಸುವ್ಯವಸ್ಥೆಯನ್ನು ಬಲಿ ಕೊಡದೆ ಮತಾಂಧ ಶಕ್ತಿಗಳ ಹೆಡೆಮುರಿ ಕಟ್ಟುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

5 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

5 hours ago

ಹೊರಗುತ್ತಿಗೆ ನೇಮಕಾತಿಯಲ್ಲೂ ಎಸ್‌ಸಿ, ಎಸ್‌ಟಿಗೆ ಮೀಸಲಾತಿ ಕಡ್ಡಾಯ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…

5 hours ago

ಆತ್ರೇಯ ಆಯುರ್ವೇದ ಕಾಲೇಜಿಗೆ ಬೀಗ; 400 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ: ಪರ್ಯಾಯ ವ್ಯವಸ್ಥೆಗೆ ಆಗ್ರಹಿಸಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

  ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ…

5 hours ago

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶ ಅಸಂಬದ್ಧ: ಸುಪ್ರೀಂಕೋರ್ಟ್‌ ಮೆಟ್ಟಿಲೇರಲು ಸರ್ಕಾರದ ಚಿಂತನೆ – ಸಚಿವ ಚಲುವರಾಯಸ್ವಾಮಿ

ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ CWRC ನೀಡಿರುವ ಆದೇಶ ಅಸಂಬದ್ಧವಾಗಿದ್ದು, ಅತ್ಯಂತ ನೋವು ಹಾಗೂ…

11 hours ago

ಮೋರಿ ಬಳಿ ತ್ಯಾಜ್ಯ ರಾಶಿ; ದುರ್ವಾಸನೆ, ಸೊಳ್ಳೆ ಕಾಟಕ್ಕೆ ವಿನಾಯಕನಗರ ನಿವಾಸಿಗಳ ಪರದಾಟ

ದೊಡ್ಡಬಳ್ಳಾಪುರ: ನಗರದ ವಿನಾಯಕನಗರದ ಸರ್ಕಾರಿ ಪ್ರಾಥಮಿಕ ಶಾಲೆ ಸಮೀಪದಲ್ಲಿರುವ ರಾಜಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಮೋರಿ ಬಳಿ ತ್ಯಾಜ್ಯ ರಾಶಿ ಬಿದ್ದಿದ್ದು,…

14 hours ago