ಗೋವು ಭಾರತೀಯರಿಗೆ ತಾಯಿ ಸಮಾನ-ಸಂಕ್ರಾಂತಿ ಹಬ್ಬದಲ್ಲಿ ಗೋವನ್ನು ವಿಶೇಷವಾಗಿ ಪೂಜಿಸಲಾಗುತ್ತದೆ-ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆ ಅತ್ಯಂತ ಖಂಡನೀಯ- ಗೋಮಾತೆಯ ಕೆಚ್ಚಲು ಕತ್ತರಿಸಿದ ಪಾಪಿಗಳನ್ನು ಸರ್ಕಾರ ಈ ಕೂಡಲೇ ಬಂಧಿಸಬೇಕು- ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಗೋಮಾತೆಯ ಕೆಚ್ಚಲು ಕತ್ತರಿಸಿದ ಪಾಪಿಗಳನ್ನು ಸರ್ಕಾರ ಈ ಕೂಡಲೇ ಬಂಧಿಸಬೇಕು ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.

ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಮೇಲೆ ನಡೆದ ವಿಕೃತ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ವಿಕೃತಿ ಹೆಚ್ಚಾಗುತ್ತಲೇ ಇದೆ. ಚಾಮರಾಜಪೇಟೆಯ ಪಶು ಆಸ್ಪತ್ರೆಯನ್ನು ಎತ್ತಂಗಡಿ ಮಾಡುವ ಸಂಚು ಸರ್ಕಾರ ಬಂದಾಗಿನಿಂದಲೂ ನಡೆಯುತ್ತಿದೆ. ಪೊಲೀಸರು ಸಮಗ್ರವಾಗಿ ತನಿಖೆ ನಡೆಸಿ ಕಿಡಿಗೇಡಿಗಳ ವಿರುದ್ಧ ಕ್ರಮತೆಗೆದುಕೊಳ್ಳಬೇಕಿದೆ ಎಂದು ಆಗ್ರಹಿಸಿದ್ದಾರೆ.

ಗೋವು ಭಾರತೀಯರಿಗೆ ತಾಯಿ ಸಮಾನ. ಅದರಲ್ಲೂ ಸಂಕ್ರಾಂತಿ ಹಬ್ಬದಲ್ಲಿ ಗೋವನ್ನು ವಿಶೇಷವಾಗಿ ಪೂಜಿಸಲಾಗುತ್ತದೆ. ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುವಿನ ಕೆಚ್ಚಲು ಕೊಯ್ದು ಹಾಕುವ ಮೂಲಕ ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲು ಹಾಕಿವೆ. ಇಂತಹ ಜಿಹಾದಿ ಮನಸ್ಥಿತಿಯನ್ನು ನಮ್ಮ ರಾಜ್ಯ ಈವರೆಗೂ ಕಂಡಿರರಿಲ್ಲ ಎಂದಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ವೇಳೆ ಕರಸೇವಕರ ಮೇಲಿನ 30 ವರ್ಷದ ಹಳೇ ಕೇಸುಗಳು ರೀ ಓಪನ್ ಆಗುತ್ತವೆ. ಗಣೇಶ ಹಬ್ಬದ ಸಂದರ್ಭದಲ್ಲಿ ಕೋಮುದಳ್ಳುರಿ ನಡೆಯುತ್ತದೆ. ದಸರಾ ಹಬ್ಬದ ಸಂದರ್ಭದಲ್ಲಿ ದುರ್ಗಾಮತೆಯ ಮೆರವಣಿಗೆಯಲ್ಲಿ ಗಲಾಟೆ ಆಗುತ್ತದೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಪದೇ ಪದೇ ಈ ಕೋಮುಗಲಭೆಗಳು ಯಾಕೆ ನಡೆಯುತ್ತಿವೆ? ಕಾಂಗ್ರೆಸ್ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣದಿಂದ ಮತಾಂಧ ಶಕ್ತಿಗಳಿಗೆ ಕೊಂಬು ಬಂದಿದೆ. ಮೂಲಭೂತವಾದಿಗಳಿಗೆ ಕಾನೂನಿನ ಭಯವೇ ಇಲ್ಲದಂತಾಗಿದೆ ಎಂದು ಕಿಡಿಕಾರಿದ್ದಾರೆ.

ಚಾಮರಾಜಪೇಟೆಯಲ್ಲಿ ನಡೆದಿರುವ ಈ ಅಮಾನುಷ ಘಟನೆಯನ್ನ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ತುಷ್ಟೀಕರಣ ರಾಜಕಾರಣಕ್ಕಾಗಿ ಸಮಾಜದ ಶಾಂತಿ, ಸುವ್ಯವಸ್ಥೆಯನ್ನು ಬಲಿ ಕೊಡದೆ ಮತಾಂಧ ಶಕ್ತಿಗಳ ಹೆಡೆಮುರಿ ಕಟ್ಟುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

1 day ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

4 days ago