Categories: ಕೋಲಾರ

ಗೌರವ ಧನ ಹೆಚ್ಚಳ: ಖಾಯಂ ನೌಕರಿಗಾಗಿ ಅಂಗನವಾಡಿ ನೌಕರರ ಆಹೋರಾತ್ರಿ ಧರಣಿ

ಕೋಲಾರ: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರನ್ನು ಕಾಯಂ ಮಾಡಬೇಕು. ಗ್ರ್ಯಾಚ್ಯುಟಿ ಹಣ ಬಿಡುಗಡೆ, ಗೌರವಧನ 15 ಸಾವಿರಕ್ಕೆ ಹೆಚ್ಚಳ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮಂಗಳವಾರದಿಂದ ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮುಂದೆ ಅಂಗನವಾಡಿ ನೌಕರರು ಅಹೋರಾತ್ರಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಎನ್ ಅಂಜಲಮ್ಮ ಮಾತನಾಡಿ, ಅಂಗನವಾಡಿ ನೌಕರರು ನಿವೃತ್ತಿಯಾದವರಿಗೆ ಮಾಸಿಕ 10 ಸಾವಿರ ಪಿಂಚಣಿ ನೀಡಬೇಕು. ಎಲ್ಲ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಬೇಕು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರತ್ಯೇಕ ಇಲಾಖೆ ಆಗಬೇಕು. ಖಾಲಿ ಹುದ್ದೆಗಳಿಗೆ 3 ತಿಂಗಳೊಳಗೆ ನೇಮಕಾತಿ ಮಾಡಬೇಕು ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಖಾಯಂ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ‌ಜಿಲ್ಲಾ ಕಾರ್ಯದರ್ಶಿ ಕಲ್ಪನಾ ಮಾತನಾಡಿ, ನೌಕರರಿಗೆ ಕೂಡಲೇ ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಬೇಕು ಜೊತೆಗೆ ಎಲ್ಲಾ ನೌಕರರಿಗೆ ಅನ್ವಯಿಸಬೇಕು 2018 ರಿಂದ ಕೇಂದ್ರ ಸರ್ಕಾರ ಯಾವುದೇ ಗೌರವಧನ ಹೆಚ್ಚಳ ಮಾಡಿಲ್ಲವಾದ್ದರಿಂದ ಕೇಂದ್ರ ಸರ್ಕಾರ ಗೌರವಧನವನ್ನು 26 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು. 2023 ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದ 15ಸಾವಿರ ಗೌರವಧನ ಹೆಚ್ಚಿಸಬೇಕು. ನಿವೃತ್ತಿಯಾದವರಿಗೆ ಇಡಿಗಂಟು ಅಥವಾ ಎನ್.ಪಿ.ಎಸ್. ಹಣವನ್ನು 10 ಸಾವಿರ ಮಾಸಿಕ ಪಿಂಚಣಿಯನ್ನಾಗಿ ನೀಡಬೇಕು. ಅಂಗನವಾಡಿಗಳಲ್ಲೇ ಎಲ್ ಕೆ.ಜಿ. ಹಾಗು ಯು.ಕೆ.ಜಿ ತರಗತಿ ಆರಂಭಿಸಬೇಕು. ಐ.ಸಿ.ಡಿ.ಎಸ್.ಯೋಜನೆಗೆ ಪ್ರತ್ಯೇಕ ನಿರ್ದೇಶನಾಲಯ ಬೇಕು. ಸಾಮೂಹಿಕ ಆರೋಗ್ಯ ವಿಮೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯದರ್ಶಿ ಗಾಂಧಿನಗರ ಮಂಜುಳ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಕೊಡುವ ಪೂರಕ ಪೌಷ್ಟಿಕ ಆಹಾರಕ್ಕೆ ಜಿ.ಎಸ್.ಟಿ. ಹಾಕಬಾರದು ಘಟಕ ವೆಚ್ಚ ಹೆಚ್ಚಳಮಾಡಿ ಹಿಂದಿನಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೆನು ಅಂತಿಮಗೊಳ್ಳುವ ವ್ಯವಸ್ಥೆ ಜಾರಿಗೊಳಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ಖಾಲಿ ಹುದ್ದೆಗಳಿಗೆ ಮೂರು ತಿಂಗಳೊಳಗಾಗಿ ನೇಮಕಾತಿಯಾಗಬೇಕು ಇಲ್ಲದಿದಲ್ಲಿ ಅಧಿಕಾವಧಿ ವೇತನ (ಓವರ್ ಟೈಮ್) ಕೊಡಬೇಕು ಸಹಾಯಕಿ ಇಲ್ಲದ ಅಂಗನವಾಡಿ ಕೇಂದ್ರಗಳಲ್ಲಿ ಟೇಕ್ ಹೋಮ್ ಕೊಡಬೇಕು ಸಹಾಯಕಿಯನ್ನು ನೇಮಕಮಾಡಿಕೊಳ್ಳುವ ಅಧಿಕಾರ ಕಾರ್ಯಕರ್ತೆಗೆ ಕೊಡಬೇಕು. ಮಿನಿ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಕೇಂದ್ರಗಳನ್ನಾಗಿ ಪರಿವರ್ತಿಸು ವತನಕ ಸಹಾಯಕಿಯನ್ನು ಕೊಡಬೇಕು ಮತ್ತು ಪೂರ್ಣ ಕಾರ್ಯಕರ್ತೆಗೆ ಕೊಡುವಷ್ಟು ಗೌರವಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ, ಕಾರ್ಮಿಕ ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ಎಂ.ವಿಜಯಕೃಷ್ಣ, ಮಾತನಾಡಿದರು.

ನೇತೃತ್ವವನ್ನು ಸಂಘಟನೆಯ ಜಿಲ್ಲಾ ಖಜಾಂಚಿ ಸುಜಾತ, ತಾಲೂಕು ಖಜಾಂಚಿ ಲಕ್ಷ್ಮೀದೇವಿ, ಮುಖಂಡರಾದ ಮಮತ, ಪುಷ್ಪಾವತಿ, ವಸಂತ, ಇಂದ್ರಾಣಿ, ಶಶಿಕಲಾ, ಅಮುದಾ, ರತ್ನಮ್ಮ ಸೇರಿದಂತೆ ನೌಕರರು ವಹಿಸಿದ್ದರು

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

11 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

11 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

12 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

13 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

15 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

22 hours ago