ಕೋಲಾರ: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರನ್ನು ಕಾಯಂ ಮಾಡಬೇಕು. ಗ್ರ್ಯಾಚ್ಯುಟಿ ಹಣ ಬಿಡುಗಡೆ, ಗೌರವಧನ 15 ಸಾವಿರಕ್ಕೆ ಹೆಚ್ಚಳ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮಂಗಳವಾರದಿಂದ ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮುಂದೆ ಅಂಗನವಾಡಿ ನೌಕರರು ಅಹೋರಾತ್ರಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಎನ್ ಅಂಜಲಮ್ಮ ಮಾತನಾಡಿ, ಅಂಗನವಾಡಿ ನೌಕರರು ನಿವೃತ್ತಿಯಾದವರಿಗೆ ಮಾಸಿಕ 10 ಸಾವಿರ ಪಿಂಚಣಿ ನೀಡಬೇಕು. ಎಲ್ಲ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಎಲ್ಕೆಜಿ, ಯುಕೆಜಿ ಪ್ರಾರಂಭಿಸಬೇಕು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರತ್ಯೇಕ ಇಲಾಖೆ ಆಗಬೇಕು. ಖಾಲಿ ಹುದ್ದೆಗಳಿಗೆ 3 ತಿಂಗಳೊಳಗೆ ನೇಮಕಾತಿ ಮಾಡಬೇಕು ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಖಾಯಂ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಕಲ್ಪನಾ ಮಾತನಾಡಿ, ನೌಕರರಿಗೆ ಕೂಡಲೇ ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಬೇಕು ಜೊತೆಗೆ ಎಲ್ಲಾ ನೌಕರರಿಗೆ ಅನ್ವಯಿಸಬೇಕು 2018 ರಿಂದ ಕೇಂದ್ರ ಸರ್ಕಾರ ಯಾವುದೇ ಗೌರವಧನ ಹೆಚ್ಚಳ ಮಾಡಿಲ್ಲವಾದ್ದರಿಂದ ಕೇಂದ್ರ ಸರ್ಕಾರ ಗೌರವಧನವನ್ನು 26 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು. 2023 ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದ 15ಸಾವಿರ ಗೌರವಧನ ಹೆಚ್ಚಿಸಬೇಕು. ನಿವೃತ್ತಿಯಾದವರಿಗೆ ಇಡಿಗಂಟು ಅಥವಾ ಎನ್.ಪಿ.ಎಸ್. ಹಣವನ್ನು 10 ಸಾವಿರ ಮಾಸಿಕ ಪಿಂಚಣಿಯನ್ನಾಗಿ ನೀಡಬೇಕು. ಅಂಗನವಾಡಿಗಳಲ್ಲೇ ಎಲ್ ಕೆ.ಜಿ. ಹಾಗು ಯು.ಕೆ.ಜಿ ತರಗತಿ ಆರಂಭಿಸಬೇಕು. ಐ.ಸಿ.ಡಿ.ಎಸ್.ಯೋಜನೆಗೆ ಪ್ರತ್ಯೇಕ ನಿರ್ದೇಶನಾಲಯ ಬೇಕು. ಸಾಮೂಹಿಕ ಆರೋಗ್ಯ ವಿಮೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ತಾಲೂಕು ಕಾರ್ಯದರ್ಶಿ ಗಾಂಧಿನಗರ ಮಂಜುಳ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಕೊಡುವ ಪೂರಕ ಪೌಷ್ಟಿಕ ಆಹಾರಕ್ಕೆ ಜಿ.ಎಸ್.ಟಿ. ಹಾಕಬಾರದು ಘಟಕ ವೆಚ್ಚ ಹೆಚ್ಚಳಮಾಡಿ ಹಿಂದಿನಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೆನು ಅಂತಿಮಗೊಳ್ಳುವ ವ್ಯವಸ್ಥೆ ಜಾರಿಗೊಳಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ಖಾಲಿ ಹುದ್ದೆಗಳಿಗೆ ಮೂರು ತಿಂಗಳೊಳಗಾಗಿ ನೇಮಕಾತಿಯಾಗಬೇಕು ಇಲ್ಲದಿದಲ್ಲಿ ಅಧಿಕಾವಧಿ ವೇತನ (ಓವರ್ ಟೈಮ್) ಕೊಡಬೇಕು ಸಹಾಯಕಿ ಇಲ್ಲದ ಅಂಗನವಾಡಿ ಕೇಂದ್ರಗಳಲ್ಲಿ ಟೇಕ್ ಹೋಮ್ ಕೊಡಬೇಕು ಸಹಾಯಕಿಯನ್ನು ನೇಮಕಮಾಡಿಕೊಳ್ಳುವ ಅಧಿಕಾರ ಕಾರ್ಯಕರ್ತೆಗೆ ಕೊಡಬೇಕು. ಮಿನಿ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಕೇಂದ್ರಗಳನ್ನಾಗಿ ಪರಿವರ್ತಿಸು ವತನಕ ಸಹಾಯಕಿಯನ್ನು ಕೊಡಬೇಕು ಮತ್ತು ಪೂರ್ಣ ಕಾರ್ಯಕರ್ತೆಗೆ ಕೊಡುವಷ್ಟು ಗೌರವಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ, ಕಾರ್ಮಿಕ ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ಎಂ.ವಿಜಯಕೃಷ್ಣ, ಮಾತನಾಡಿದರು.
ನೇತೃತ್ವವನ್ನು ಸಂಘಟನೆಯ ಜಿಲ್ಲಾ ಖಜಾಂಚಿ ಸುಜಾತ, ತಾಲೂಕು ಖಜಾಂಚಿ ಲಕ್ಷ್ಮೀದೇವಿ, ಮುಖಂಡರಾದ ಮಮತ, ಪುಷ್ಪಾವತಿ, ವಸಂತ, ಇಂದ್ರಾಣಿ, ಶಶಿಕಲಾ, ಅಮುದಾ, ರತ್ನಮ್ಮ ಸೇರಿದಂತೆ ನೌಕರರು ವಹಿಸಿದ್ದರು
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…