Categories: ಕೋಲಾರ

ಗೌರವ ಧನ ಹೆಚ್ಚಳ: ಖಾಯಂ ನೌಕರಿಗಾಗಿ ಅಂಗನವಾಡಿ ನೌಕರರ ಆಹೋರಾತ್ರಿ ಧರಣಿ

ಕೋಲಾರ: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರನ್ನು ಕಾಯಂ ಮಾಡಬೇಕು. ಗ್ರ್ಯಾಚ್ಯುಟಿ ಹಣ ಬಿಡುಗಡೆ, ಗೌರವಧನ 15 ಸಾವಿರಕ್ಕೆ ಹೆಚ್ಚಳ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮಂಗಳವಾರದಿಂದ ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮುಂದೆ ಅಂಗನವಾಡಿ ನೌಕರರು ಅಹೋರಾತ್ರಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಎನ್ ಅಂಜಲಮ್ಮ ಮಾತನಾಡಿ, ಅಂಗನವಾಡಿ ನೌಕರರು ನಿವೃತ್ತಿಯಾದವರಿಗೆ ಮಾಸಿಕ 10 ಸಾವಿರ ಪಿಂಚಣಿ ನೀಡಬೇಕು. ಎಲ್ಲ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಬೇಕು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರತ್ಯೇಕ ಇಲಾಖೆ ಆಗಬೇಕು. ಖಾಲಿ ಹುದ್ದೆಗಳಿಗೆ 3 ತಿಂಗಳೊಳಗೆ ನೇಮಕಾತಿ ಮಾಡಬೇಕು ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಖಾಯಂ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ‌ಜಿಲ್ಲಾ ಕಾರ್ಯದರ್ಶಿ ಕಲ್ಪನಾ ಮಾತನಾಡಿ, ನೌಕರರಿಗೆ ಕೂಡಲೇ ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಬೇಕು ಜೊತೆಗೆ ಎಲ್ಲಾ ನೌಕರರಿಗೆ ಅನ್ವಯಿಸಬೇಕು 2018 ರಿಂದ ಕೇಂದ್ರ ಸರ್ಕಾರ ಯಾವುದೇ ಗೌರವಧನ ಹೆಚ್ಚಳ ಮಾಡಿಲ್ಲವಾದ್ದರಿಂದ ಕೇಂದ್ರ ಸರ್ಕಾರ ಗೌರವಧನವನ್ನು 26 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು. 2023 ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದ 15ಸಾವಿರ ಗೌರವಧನ ಹೆಚ್ಚಿಸಬೇಕು. ನಿವೃತ್ತಿಯಾದವರಿಗೆ ಇಡಿಗಂಟು ಅಥವಾ ಎನ್.ಪಿ.ಎಸ್. ಹಣವನ್ನು 10 ಸಾವಿರ ಮಾಸಿಕ ಪಿಂಚಣಿಯನ್ನಾಗಿ ನೀಡಬೇಕು. ಅಂಗನವಾಡಿಗಳಲ್ಲೇ ಎಲ್ ಕೆ.ಜಿ. ಹಾಗು ಯು.ಕೆ.ಜಿ ತರಗತಿ ಆರಂಭಿಸಬೇಕು. ಐ.ಸಿ.ಡಿ.ಎಸ್.ಯೋಜನೆಗೆ ಪ್ರತ್ಯೇಕ ನಿರ್ದೇಶನಾಲಯ ಬೇಕು. ಸಾಮೂಹಿಕ ಆರೋಗ್ಯ ವಿಮೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯದರ್ಶಿ ಗಾಂಧಿನಗರ ಮಂಜುಳ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಕೊಡುವ ಪೂರಕ ಪೌಷ್ಟಿಕ ಆಹಾರಕ್ಕೆ ಜಿ.ಎಸ್.ಟಿ. ಹಾಕಬಾರದು ಘಟಕ ವೆಚ್ಚ ಹೆಚ್ಚಳಮಾಡಿ ಹಿಂದಿನಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೆನು ಅಂತಿಮಗೊಳ್ಳುವ ವ್ಯವಸ್ಥೆ ಜಾರಿಗೊಳಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ಖಾಲಿ ಹುದ್ದೆಗಳಿಗೆ ಮೂರು ತಿಂಗಳೊಳಗಾಗಿ ನೇಮಕಾತಿಯಾಗಬೇಕು ಇಲ್ಲದಿದಲ್ಲಿ ಅಧಿಕಾವಧಿ ವೇತನ (ಓವರ್ ಟೈಮ್) ಕೊಡಬೇಕು ಸಹಾಯಕಿ ಇಲ್ಲದ ಅಂಗನವಾಡಿ ಕೇಂದ್ರಗಳಲ್ಲಿ ಟೇಕ್ ಹೋಮ್ ಕೊಡಬೇಕು ಸಹಾಯಕಿಯನ್ನು ನೇಮಕಮಾಡಿಕೊಳ್ಳುವ ಅಧಿಕಾರ ಕಾರ್ಯಕರ್ತೆಗೆ ಕೊಡಬೇಕು. ಮಿನಿ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಕೇಂದ್ರಗಳನ್ನಾಗಿ ಪರಿವರ್ತಿಸು ವತನಕ ಸಹಾಯಕಿಯನ್ನು ಕೊಡಬೇಕು ಮತ್ತು ಪೂರ್ಣ ಕಾರ್ಯಕರ್ತೆಗೆ ಕೊಡುವಷ್ಟು ಗೌರವಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ, ಕಾರ್ಮಿಕ ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ಎಂ.ವಿಜಯಕೃಷ್ಣ, ಮಾತನಾಡಿದರು.

ನೇತೃತ್ವವನ್ನು ಸಂಘಟನೆಯ ಜಿಲ್ಲಾ ಖಜಾಂಚಿ ಸುಜಾತ, ತಾಲೂಕು ಖಜಾಂಚಿ ಲಕ್ಷ್ಮೀದೇವಿ, ಮುಖಂಡರಾದ ಮಮತ, ಪುಷ್ಪಾವತಿ, ವಸಂತ, ಇಂದ್ರಾಣಿ, ಶಶಿಕಲಾ, ಅಮುದಾ, ರತ್ನಮ್ಮ ಸೇರಿದಂತೆ ನೌಕರರು ವಹಿಸಿದ್ದರು

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

12 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

16 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

23 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago