Categories: ಕೋಲಾರ

ಗೌರವ ಧನ ಹೆಚ್ಚಳ: ಖಾಯಂ ನೌಕರಿಗಾಗಿ ಅಂಗನವಾಡಿ ನೌಕರರ ಆಹೋರಾತ್ರಿ ಧರಣಿ

ಕೋಲಾರ: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರನ್ನು ಕಾಯಂ ಮಾಡಬೇಕು. ಗ್ರ್ಯಾಚ್ಯುಟಿ ಹಣ ಬಿಡುಗಡೆ, ಗೌರವಧನ 15 ಸಾವಿರಕ್ಕೆ ಹೆಚ್ಚಳ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮಂಗಳವಾರದಿಂದ ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮುಂದೆ ಅಂಗನವಾಡಿ ನೌಕರರು ಅಹೋರಾತ್ರಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಎನ್ ಅಂಜಲಮ್ಮ ಮಾತನಾಡಿ, ಅಂಗನವಾಡಿ ನೌಕರರು ನಿವೃತ್ತಿಯಾದವರಿಗೆ ಮಾಸಿಕ 10 ಸಾವಿರ ಪಿಂಚಣಿ ನೀಡಬೇಕು. ಎಲ್ಲ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಬೇಕು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರತ್ಯೇಕ ಇಲಾಖೆ ಆಗಬೇಕು. ಖಾಲಿ ಹುದ್ದೆಗಳಿಗೆ 3 ತಿಂಗಳೊಳಗೆ ನೇಮಕಾತಿ ಮಾಡಬೇಕು ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಖಾಯಂ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ‌ಜಿಲ್ಲಾ ಕಾರ್ಯದರ್ಶಿ ಕಲ್ಪನಾ ಮಾತನಾಡಿ, ನೌಕರರಿಗೆ ಕೂಡಲೇ ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಬೇಕು ಜೊತೆಗೆ ಎಲ್ಲಾ ನೌಕರರಿಗೆ ಅನ್ವಯಿಸಬೇಕು 2018 ರಿಂದ ಕೇಂದ್ರ ಸರ್ಕಾರ ಯಾವುದೇ ಗೌರವಧನ ಹೆಚ್ಚಳ ಮಾಡಿಲ್ಲವಾದ್ದರಿಂದ ಕೇಂದ್ರ ಸರ್ಕಾರ ಗೌರವಧನವನ್ನು 26 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು. 2023 ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದ 15ಸಾವಿರ ಗೌರವಧನ ಹೆಚ್ಚಿಸಬೇಕು. ನಿವೃತ್ತಿಯಾದವರಿಗೆ ಇಡಿಗಂಟು ಅಥವಾ ಎನ್.ಪಿ.ಎಸ್. ಹಣವನ್ನು 10 ಸಾವಿರ ಮಾಸಿಕ ಪಿಂಚಣಿಯನ್ನಾಗಿ ನೀಡಬೇಕು. ಅಂಗನವಾಡಿಗಳಲ್ಲೇ ಎಲ್ ಕೆ.ಜಿ. ಹಾಗು ಯು.ಕೆ.ಜಿ ತರಗತಿ ಆರಂಭಿಸಬೇಕು. ಐ.ಸಿ.ಡಿ.ಎಸ್.ಯೋಜನೆಗೆ ಪ್ರತ್ಯೇಕ ನಿರ್ದೇಶನಾಲಯ ಬೇಕು. ಸಾಮೂಹಿಕ ಆರೋಗ್ಯ ವಿಮೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯದರ್ಶಿ ಗಾಂಧಿನಗರ ಮಂಜುಳ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಕೊಡುವ ಪೂರಕ ಪೌಷ್ಟಿಕ ಆಹಾರಕ್ಕೆ ಜಿ.ಎಸ್.ಟಿ. ಹಾಕಬಾರದು ಘಟಕ ವೆಚ್ಚ ಹೆಚ್ಚಳಮಾಡಿ ಹಿಂದಿನಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೆನು ಅಂತಿಮಗೊಳ್ಳುವ ವ್ಯವಸ್ಥೆ ಜಾರಿಗೊಳಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ಖಾಲಿ ಹುದ್ದೆಗಳಿಗೆ ಮೂರು ತಿಂಗಳೊಳಗಾಗಿ ನೇಮಕಾತಿಯಾಗಬೇಕು ಇಲ್ಲದಿದಲ್ಲಿ ಅಧಿಕಾವಧಿ ವೇತನ (ಓವರ್ ಟೈಮ್) ಕೊಡಬೇಕು ಸಹಾಯಕಿ ಇಲ್ಲದ ಅಂಗನವಾಡಿ ಕೇಂದ್ರಗಳಲ್ಲಿ ಟೇಕ್ ಹೋಮ್ ಕೊಡಬೇಕು ಸಹಾಯಕಿಯನ್ನು ನೇಮಕಮಾಡಿಕೊಳ್ಳುವ ಅಧಿಕಾರ ಕಾರ್ಯಕರ್ತೆಗೆ ಕೊಡಬೇಕು. ಮಿನಿ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಕೇಂದ್ರಗಳನ್ನಾಗಿ ಪರಿವರ್ತಿಸು ವತನಕ ಸಹಾಯಕಿಯನ್ನು ಕೊಡಬೇಕು ಮತ್ತು ಪೂರ್ಣ ಕಾರ್ಯಕರ್ತೆಗೆ ಕೊಡುವಷ್ಟು ಗೌರವಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ, ಕಾರ್ಮಿಕ ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ಎಂ.ವಿಜಯಕೃಷ್ಣ, ಮಾತನಾಡಿದರು.

ನೇತೃತ್ವವನ್ನು ಸಂಘಟನೆಯ ಜಿಲ್ಲಾ ಖಜಾಂಚಿ ಸುಜಾತ, ತಾಲೂಕು ಖಜಾಂಚಿ ಲಕ್ಷ್ಮೀದೇವಿ, ಮುಖಂಡರಾದ ಮಮತ, ಪುಷ್ಪಾವತಿ, ವಸಂತ, ಇಂದ್ರಾಣಿ, ಶಶಿಕಲಾ, ಅಮುದಾ, ರತ್ನಮ್ಮ ಸೇರಿದಂತೆ ನೌಕರರು ವಹಿಸಿದ್ದರು

Ramesh Babu

Journalist

Recent Posts

2026ರಲ್ಲಿ ‘ಸೂಪರ್ ಎಲ್ ನಿನೊ’ ಆತಂಕ: ಭಾರತಕ್ಕೆ ಕಡಿಮೆ ಮಳೆ, ಕೃಷಿ ಮತ್ತು ಜಲಮೂಲಗಳ ಮೇಲೆ ಗಂಭೀರ ಪರಿಣಾಮದ ಎಚ್ಚರಿಕೆ

ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…

4 hours ago

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

16 hours ago

ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…

16 hours ago

ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ- ಶಾಸಕಿ ನಯನಾ ಮೋಟಮ್ಮ

ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…

16 hours ago

ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಿ, ಎಲ್ಲರ ಸಹಮತದೊಂದಿಗೆ ಮುಂದುವರಿಯಬೇಕು- ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ…

16 hours ago

ಶಾಸಕ ಪ್ರದೀಪ್ ಈಶ್ವರ್ ವಿರುದ್ಧ  ಟಿ.ಎ. ಶರವಣ ವಾಗ್ದಾಳಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ವಿಧಾನ ಪರಿಷತ್ ಸದಸ್ಯ ಟಿ.ಎ.…

17 hours ago