Categories: ಕೋಲಾರ

ಗೌರವ ಧನ ಹೆಚ್ಚಳ: ಖಾಯಂ ನೌಕರಿಗಾಗಿ ಅಂಗನವಾಡಿ ನೌಕರರ ಆಹೋರಾತ್ರಿ ಧರಣಿ

ಕೋಲಾರ: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರನ್ನು ಕಾಯಂ ಮಾಡಬೇಕು. ಗ್ರ್ಯಾಚ್ಯುಟಿ ಹಣ ಬಿಡುಗಡೆ, ಗೌರವಧನ 15 ಸಾವಿರಕ್ಕೆ ಹೆಚ್ಚಳ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮಂಗಳವಾರದಿಂದ ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮುಂದೆ ಅಂಗನವಾಡಿ ನೌಕರರು ಅಹೋರಾತ್ರಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಎನ್ ಅಂಜಲಮ್ಮ ಮಾತನಾಡಿ, ಅಂಗನವಾಡಿ ನೌಕರರು ನಿವೃತ್ತಿಯಾದವರಿಗೆ ಮಾಸಿಕ 10 ಸಾವಿರ ಪಿಂಚಣಿ ನೀಡಬೇಕು. ಎಲ್ಲ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಬೇಕು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರತ್ಯೇಕ ಇಲಾಖೆ ಆಗಬೇಕು. ಖಾಲಿ ಹುದ್ದೆಗಳಿಗೆ 3 ತಿಂಗಳೊಳಗೆ ನೇಮಕಾತಿ ಮಾಡಬೇಕು ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಖಾಯಂ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ‌ಜಿಲ್ಲಾ ಕಾರ್ಯದರ್ಶಿ ಕಲ್ಪನಾ ಮಾತನಾಡಿ, ನೌಕರರಿಗೆ ಕೂಡಲೇ ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಬೇಕು ಜೊತೆಗೆ ಎಲ್ಲಾ ನೌಕರರಿಗೆ ಅನ್ವಯಿಸಬೇಕು 2018 ರಿಂದ ಕೇಂದ್ರ ಸರ್ಕಾರ ಯಾವುದೇ ಗೌರವಧನ ಹೆಚ್ಚಳ ಮಾಡಿಲ್ಲವಾದ್ದರಿಂದ ಕೇಂದ್ರ ಸರ್ಕಾರ ಗೌರವಧನವನ್ನು 26 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು. 2023 ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದ 15ಸಾವಿರ ಗೌರವಧನ ಹೆಚ್ಚಿಸಬೇಕು. ನಿವೃತ್ತಿಯಾದವರಿಗೆ ಇಡಿಗಂಟು ಅಥವಾ ಎನ್.ಪಿ.ಎಸ್. ಹಣವನ್ನು 10 ಸಾವಿರ ಮಾಸಿಕ ಪಿಂಚಣಿಯನ್ನಾಗಿ ನೀಡಬೇಕು. ಅಂಗನವಾಡಿಗಳಲ್ಲೇ ಎಲ್ ಕೆ.ಜಿ. ಹಾಗು ಯು.ಕೆ.ಜಿ ತರಗತಿ ಆರಂಭಿಸಬೇಕು. ಐ.ಸಿ.ಡಿ.ಎಸ್.ಯೋಜನೆಗೆ ಪ್ರತ್ಯೇಕ ನಿರ್ದೇಶನಾಲಯ ಬೇಕು. ಸಾಮೂಹಿಕ ಆರೋಗ್ಯ ವಿಮೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯದರ್ಶಿ ಗಾಂಧಿನಗರ ಮಂಜುಳ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಕೊಡುವ ಪೂರಕ ಪೌಷ್ಟಿಕ ಆಹಾರಕ್ಕೆ ಜಿ.ಎಸ್.ಟಿ. ಹಾಕಬಾರದು ಘಟಕ ವೆಚ್ಚ ಹೆಚ್ಚಳಮಾಡಿ ಹಿಂದಿನಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೆನು ಅಂತಿಮಗೊಳ್ಳುವ ವ್ಯವಸ್ಥೆ ಜಾರಿಗೊಳಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ಖಾಲಿ ಹುದ್ದೆಗಳಿಗೆ ಮೂರು ತಿಂಗಳೊಳಗಾಗಿ ನೇಮಕಾತಿಯಾಗಬೇಕು ಇಲ್ಲದಿದಲ್ಲಿ ಅಧಿಕಾವಧಿ ವೇತನ (ಓವರ್ ಟೈಮ್) ಕೊಡಬೇಕು ಸಹಾಯಕಿ ಇಲ್ಲದ ಅಂಗನವಾಡಿ ಕೇಂದ್ರಗಳಲ್ಲಿ ಟೇಕ್ ಹೋಮ್ ಕೊಡಬೇಕು ಸಹಾಯಕಿಯನ್ನು ನೇಮಕಮಾಡಿಕೊಳ್ಳುವ ಅಧಿಕಾರ ಕಾರ್ಯಕರ್ತೆಗೆ ಕೊಡಬೇಕು. ಮಿನಿ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಕೇಂದ್ರಗಳನ್ನಾಗಿ ಪರಿವರ್ತಿಸು ವತನಕ ಸಹಾಯಕಿಯನ್ನು ಕೊಡಬೇಕು ಮತ್ತು ಪೂರ್ಣ ಕಾರ್ಯಕರ್ತೆಗೆ ಕೊಡುವಷ್ಟು ಗೌರವಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ, ಕಾರ್ಮಿಕ ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ಎಂ.ವಿಜಯಕೃಷ್ಣ, ಮಾತನಾಡಿದರು.

ನೇತೃತ್ವವನ್ನು ಸಂಘಟನೆಯ ಜಿಲ್ಲಾ ಖಜಾಂಚಿ ಸುಜಾತ, ತಾಲೂಕು ಖಜಾಂಚಿ ಲಕ್ಷ್ಮೀದೇವಿ, ಮುಖಂಡರಾದ ಮಮತ, ಪುಷ್ಪಾವತಿ, ವಸಂತ, ಇಂದ್ರಾಣಿ, ಶಶಿಕಲಾ, ಅಮುದಾ, ರತ್ನಮ್ಮ ಸೇರಿದಂತೆ ನೌಕರರು ವಹಿಸಿದ್ದರು

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

1 day ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

4 days ago