ಗೌರಿ ಗಣೇಶ, ಈದ್ ಮಿಲಾದ್ ಹಬ್ಬದ ಶಾಂತಿ ಸಭೆ: ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ- ಡಿಜೆ ಬಳಕೆಗೆ ಸರ್ಕಾರದ ಸುತ್ತೋಲೆ ಅಂತಿಮ- ಪಿಒಪಿ ಗಣಪ ಮೂರ್ತಿಗಳ ನಿಷೇಧ- ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಪಿಓಪಿ ಗಣೇಶ ಮೂರ್ತಿಗಳಿಗೆ ಕಡ್ಡಾಯವಾಗಿ ನಿಷೇಧ ಮಾಡಲಾಗಿದೆ. ಅಲ್ಲದೆ ಬಣ್ಣದ ಗಣಪಗಳನ್ನ ಬಳಸಬಾರದು, ಪರಿಸರ ಸ್ನೇಹಿ ಮಣ್ಣಿನ ಗಣಪಗಳಿಗೆ ಮಾತ್ರ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಹೇಳಿದರು.

ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಗೌರಿ ಗಣೇಶ, ಈದ್ ಮಿಲಾದ್ ಹಬ್ಬದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

ಗಣೇಶ ಪ್ರತಿಷ್ಠಾಪನೆಗೆ ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕು. ಸಿಂಗಲ್ ವಿಂಡೋ ಮೂಲಕ ಅನುಮತಿ ನೀಡಲಾಗುವುದು. ಅವಘಡಗಳು ಸಂಭವಿಸಿದರೆ ಮುಖ್ಯಸ್ಥರೆ ಜವಾಬ್ದಾರಿಯಾಗಿರುತ್ತಾರೆ. ಪರಿಸರಕ್ಕೆ ಧಕ್ಕೆಯಾಗದಂತೆ ವಿಸರ್ಜನೆ ಮಾಡಬೇಕು. ಡಿಜೆಗೆ ಸರ್ಕಾರದ ಸೂಚನೆಗಳ ಪ್ರಕಾರ ಅನುಮತಿ ಪಡೆಯಬೇಕು. ಪ್ರತಿವರ್ಷದಂತೆ ಸೌಹಾರ್ದಯುತವಾಗಿ ಹಬ್ಬವನ್ನು ಆಚರಿಸಬೇಕು. ಒಬ್ಬರ ಮನಸ್ಸಿಗೆ ನೋವಾಗದಂತೆ ಪ್ರೀತಿ, ವಿಶ್ವಾಸದಿಂದ ಹಬ್ಬಗಳನ್ನ ಆಚರಿಸಲು ಸೂಚನೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಮಾತನಾಡಿ, ಜಿಲ್ಲೆಯ ಜನರ ಸುರಕ್ಷತೆ ನಮಗೆ ಮುಖ್ಯ, ಆಚರಣೆಗಳು ಸಂತೋಷದಿಂದ ಕೂಡಿರಬೇಕು. ಸರ್ಕಾರದ ನಿಯಮಾನುಸರ ಆಚರಿಸುವುದು ಸೂಕ್ತವಾಗಿದೆ. ಪರಿಸರಕ್ಕೆ ಹಾನಿಯಾಗದ ಮಣ್ಣಿನ ಗಣಪಗಳನ್ನು ಬಳಸಬೇಕು. ಗಣೇಶ ವಿಸರ್ಜನೆಗಳನ್ನು ತಾಲ್ಲೂಕು ಪಂಚಾಯತಿ, ನಗರಸಭೆ, ಪುರಸಭೆಗಳಿಂದ ಗುರುತಿಸಿದ ಸ್ಥಳಗಳಲ್ಲಿಯೇ ವಿಸರ್ಜಿಸಬೇಕು. ಡಿಜೆ ವಿಚಾರದಲ್ಲಿ ಸರ್ಕಾರ ಹೊರಡಿಸಿರುವ ಸುತ್ತೋಲೆಯ ಅಂತಿಮ ಅದನ್ನು ಪಾಲಿಸಲೇಬೇಕು. ಗಣಪತಿ ಪ್ರತಿಷ್ಠಾಪಿಸಿರುವವರು ರಾಜಕೀಯಕ್ಕೆ ಅವಕಾಶ ನೀಡಬಾರದು ಎಂದು ತಿಳಿಸಿದರು.

ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಕಟೌಟ್, ಬಂಟ್ಟಿಂಗ್ಸ್, ಬ್ಯಾನರ್ ಗಳನ್ನು ರಸ್ತೆಗೆ ಅಡ್ಡಲಾಗಿ ಕಟ್ಟುವುದು, ವಿದ್ಯುತ್ ಕಂಬಗಳಿಗೆ, ಲೈನ್ ಗಳ ಮೇಲೆ ಕಟ್ಟಬಾರದು. ಪ್ರಚೋದನಕಾರಿ ಅಥವಾ ವಿವಾದಾತ್ಮಕ ಬ್ಯಾನರ್ಸ್, ಬಂಟಿಂಗ್ಸ್ ಗಳನ್ನು ಅಳವಡಿಸಬಾರದು ಎಂದರು.

ಹಬ್ಬದ ಸಮಯದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಹಬ್ಬಿಸುವುದು ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದನ್ನು ನಿರ್ಬಂಧಿಸಲಾಗಿದೆ. ಒಂದು ವೇಳೇ ಹಾಗೇನಾದರು ಮಾಡಿದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಸಭೆಯಲ್ಲಿ ಸೌಂಡ್ ಸಿಸ್ಟಂ ಮಾಲೀಕರು ಡಿಜೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಎಸ್ಪಿ ಬಾಬಾ ರಾಜ್ಯಾದ್ಯಂತ ಸರ್ಕಾರದ ಆದೇಶ ಇದೆ. ನಿರ್ದಿಷ್ಟವಾದ ಸೂಚನೆಗಳಿವೆ. ಅದರ ಪ್ರಕಾರ ಪಾಲನೆ ಮಾಡಬೇಕು ಎಂದರು.

ಈದ್ ಮಿಲಾದ್ ಕುರಿತಾಗಿ ತಾಲ್ಲೂಕಿನಲ್ಲಿ ಈವರೆಗೆ ಯಾವುದೇ ಅಹಿತಕರ ಘಟನೆ ನಡೆದ ಇತಿಹಾಸವಿಲ್ಲ. ಹಿಂದೂ-ಮುಸ್ಲಿಂ ಬಾಂಧವರು ಅಣ್ಣ ತಮ್ಮಂದಿರಂತೆ ಇದ್ದೇವೆ. ಈದ್ ಮೀಲಾದ್ ಹಬ್ಬದಂದು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಗುವುದು. ಸಿಹಿ ಹಂಚಿ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಮುಸ್ಲಿಂ ಸಮುದಾಯದ ಮುಖಂಡರು ತಿಳಿಸಿದರು.

ಪೌರಾಯುಕ್ತ ಕಾರ್ತಿಕೇಶ್ವರ ಮಾತನಾಡಿ, ನಗರ ವ್ಯಾಪ್ತಿಯಲ್ಲಿ ಗಣೇಶ ವಿಸರ್ಜನೆಗೆ ತಾತ್ಕಾಲಿಕವಾಗಿ ಹೊಂಡ ತೆರೆಯಲಾಗುವುದು. ಬೆಸ್ಕಾಂ, ಅಗ್ನಿಶಾಮಕ, ಪೊಲೀಸ್, ಇಲಾಖೆಗಳಿಂದ ಸಿಂಗಲ್ ವಿಂಡೋ ಸಿಸ್ಟಮ್ ಮೂಲಕ ಅನುಮತಿ ನೀಡಲಾಗುವುದು ಎಂದರು.

ಈ ವೇಳೆ ಉಪವಿಭಾಗಾಧಿಕಾರಿ ದುರ್ಗಾಶ್ರೀ, ತಹಶೀಲ್ದಾರ್  ವಿಭಾ ವಿದ್ಯಾ ರಾಠೊಡ್, ಡಿವೈಎಸ್ಪಿ ರವಿ.ಪಿ, ತಾಲ್ಲೂಕು ಪಂಚಾಯತಿ ಇಓ ಮಂಜುನಾಥ ಹರ್ತಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ಇನ್ಸ್ಪೆಕ್ಟರ್ ಗಳಾದ ಡಾ.ನವೀನ್ ಕುಮಾರ್ ಎಂ.ಬಿ, ಅಮರೇಶ್ ಗೌಡ, ಸಾಧಿಕ್ ಪಾಷಾ ಸೇರಿದಂತೆ ಮತ್ತಿತ್ತರರು ಇದ್ದರು.

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

10 hours ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

21 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

1 day ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

1 day ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

2 days ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

2 days ago