ಗೌರಿ-ಗಣೇಶ ಹಬ್ಬಕ್ಕೆ ಎರಡೇ ತಿಂಗಳು ಬಾಕಿ: ಜೀವಜಲಕ್ಕೆ ಕುಂದುಂಟಾಗುವ ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗೌರಿ-ಗಣೇಶ ಮೂರ್ತಿಗಳನ್ನು ತಯಾರಿಸಲು ಮುಂದಾದ ತಯಾರಕರು: ಗಣೇಶ ಮೂರ್ತಿ ತಯಾರಿಕ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: ಪ್ಲಾಸ್ಟರ್ ಆಫ್ ಪ್ಯಾರೀಸ್, ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ತಯಾರಿಸದಂತೆ ಎಚ್ಚರಿಕೆ

ಗಣೇಶ ಹಬ್ಬ ಭಾರತದಲ್ಲಿ ಒಂದು ಪ್ರಮುಖವಾದಂತಹ ಹಬ್ಬ. ಈ ಬಾರಿಯ ಗೌರಿ-ಗಣೇಶ ಹಬ್ಬಕ್ಕೆ ಎರಡೇ ತಿಂಗಳು ಬಾಕಿ ಇದ್ದು, ಸದ್ದಿಲ್ಲದೇ ವಿವಿಧ ಆಕಾರಗಳ ಗೌರಿ-ಗಣೇಶ ಮೂರ್ತಿಗಳ ತಯಾರಿಕೆ ಭರ್ಜರಿಯಾಗಿ ನಡೆಯುತ್ತಿದೆ.

ಗಣೇಶ ಮೂರ್ತಿ ತಯಾರಕರು ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗಣಪತಿ-ಗೌರಿ ಮೂರ್ತಿ ಗಳನ್ನು ತಯಾರಿಸಲು ಮುಂದಾಗಿದ್ದಾರೆ ಎಂದು ಪರಿಸರ ಪ್ರೇಮಿಗಳು ಆರೋಪಿಸಿದ್ದಾರೆ.

ಪಿಒಪಿ ನೀರಿನಲ್ಲಿ ಕರಗದ ವಸ್ತು. ಇದರಿಂದ ಬಾವಿ, ಕೆರೆ, ಕುಂಟೆ, ಸರೋವರ, ನದಿ ನೀರು ಕಲುಷಿತಗೊಳ್ಳುತ್ತದೆ. ಇದರಿಂದ ವಿವಿಧೆಡೆ ಜೀವ ಹಾನಿಯೂ ಆಗಿದೆ. ಜನ ಜಾನುವಾರುಗಳ ಜೀವ ಉಳಿಸಲು ಮತ್ತು ರಕ್ಷಿಸಲು ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗಣಪತಿ, ಗೌರಿ ಮೂರ್ತಿಗಳನ್ನು ತಯಾರಿಸದಂತೆ, ದಾಸ್ತಾನು ಮತ್ತು ಮಾರಾಟ ಮಾಡದಂತೆ ಜನ ಜಾಗೃತಿ ಮತ್ತು ಕ್ರಮಗಳನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಕೈಗೊಂಡಿದ್ದರೂ ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗೌರಿ-ಗಣೇಶ ಮೂರ್ತಿಗಳ ತಯಾರಿಕೆ ಎಗ್ಗಿಲ್ಲದೇ ನಡೆಯುತ್ತಿದೆ ಎಂಬ ಕೂಗು ಕೇಳಿಬಂದಿದೆ.

ಜನರ ಭಕ್ತಿ, ಭಾವ ಸಂಪ್ರದಾಯಕ್ಕೆ ಚ್ಯುತಿ ಆಗದಂತೆ ಪರಿಸರ ಸ್ನೇಹಿ, ಮಣ್ಣಿನ ಗೌರಿ, ಗಣಪತಿಯನ್ನು ತಯಾರಿಸುವಂತೆ ತಯಾರಿಕರಿಗೆ ಕಳೆದ ಕೆಲವು ವರ್ಷಗಳಿಂದ ಸೂಚನೆ ನೀಡಲಾಗುತ್ತಿದೆ.

 

ದೊಡ್ಡಬಳ್ಳಾಪುರ ತಾಲೂಕಿನ ಹೊರವಲಯದಲ್ಲಿರುವ ಮಾರಸಂದ್ರದಲ್ಲಿ ಗಣೇಶ ಮೂರ್ತಿ ತಯಾರಿಕೆಯ 9 ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಬಹುತೇಕ ಎಲ್ಲಾ ಘಟಕಗಳಲ್ಲಿ ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗೌರಿ-ಗಣೇಶ ಮೂರ್ತಿಗಳ ತಯಾರಿಕೆ ಎಗ್ಗಿಲ್ಲದೇ ನಡೆಯುತ್ತಿದೆ.

ಪರಿಸರ ಪ್ರೇಮಿಗಳ ಒತ್ತಡಕ್ಕೆ ಮಣಿದ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗಣೇಶ ಮೂರ್ತಿ ತಯಾರಿಕ ಘಟಕಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಪ್ಲಾಸ್ಟರ್ ಆಫ್ ಪ್ಯಾರೀಸ್, ಬಣ್ಣ ಲೇಪಿತ ಗಣೇಶ ಮೂರ್ತಿಗಳು ಪತ್ತೆಯಾಗಿದೆ, ಅಧಿಕಾರಿಗಳ ದಾಳಿಗೆ ಹೆದರಿದ ಇನ್ನೂಳಿದ 8 ಘಟಕಗಳು ಬಾಗಿಲು ಹಾಕಿ ಪರಾರಿಯಾಗಿದ್ದಾರೆ.

ಅಧಿಕಾರಿಗಳ ದಾಳಿ ಬಗ್ಗೆ ಮಾತನಾಡಿದ ಯುವ ಸಂಚಲನದ ಮುಖಂಡರಾದ ಚಿದಾನಂದ್ ಮೂರ್ತಿ, ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಬೇಸರವನ್ನ ವ್ಯಕ್ತಪಡಿಸಿದರು, ಕಳೆದ ವರ್ಷ ನಿಷೇಧಿಸಿದ ಮೂರ್ತಿಗಳನ್ನೇ ಈಗಲೂ ಮರು ತಯಾರಿಕೆ ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಆದರೆ, ಅಧಿಕಾರಿಗಳು ದಾಳಿ ವೇಳೆ ಹಳೆಯ ವಿಗ್ರಹಗಳು ಮಾತ್ರ ಪತ್ತೆಯಾಗಿದೆ ಎಂದು ಮಹಜರು ಬರೆದಿದ್ದಾರೆ. ಪರಿಸರವನ್ನ ಕಾಪಾಡಬೇಕಾದ ಜವಾಬ್ದಾರಿ ಹೊತ್ತ ಅಧಿಕಾರಿಗಳೇ ಪರಿಸರ ಮಾಲಿನ್ಯಕ್ಕೆ ಮುಂದಾಗಿರುವುದು ನಮ್ಮ ಸಮಾಜದ ದುರಂತ ಕಿಡಿಕಾರಿದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ 1974ರ ಪ್ರಕಾರ ಕಲಂ 33(ಅ) ಕಾಯ್ದೆ ಪ್ರಕಾರ ರಾಜ್ಯದ ಕೆರೆಗಳಲ್ಲಿ ಹಾಗೂ ಇತರೆ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ , ಬಣ್ಣ ಲೇಪಿತ ವಿಗ್ರಹಗಳನ್ನು, ರಾಜ್ಯದ ಯಾವುದೇ ಜಲಗಳಲ್ಲಿ, ನದಿ, ಕಾಲುವೆ, ಬಾವಿಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಜಲ ಮಾಲಿನ್ಯ ತಡೆ ಮತ್ತು ನಿಯಂತ್ರಣ ಕಾಯ್ದೆ 1974ರ ಕಲಂ 45-1 ಅನ್ವಯ 10 ಸಾವಿರ ದಂಡವನ್ನು ಮತ್ತು ಜೈಲುವಾಸವನ್ನು ವಿಧಿಸುವ ಅವಕಾಶವಿರುತ್ತದೆ. ಅಲ್ಲದೆ ಕಡ್ಡಾಯವಾಗಿ ಗಣೇಶ ಮೂರ್ತಿಗಳು 5 ಅಡಿ ಎತ್ತರವನ್ನು ಮೀರಬಾರದೆಂದು ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ಬಂಧ ವಿಧಿಸಿದೆ ಎಂದರು.

ಈಗಾಗಲೇ ನಮ್ಮ ಜಲಮೂಲಗಳಿಗೆ ಆಗಿರುವ ಕಲುಷಿತ ಸಾಕು. ಇನ್ನಾದರೂ ಸ್ಥಳೀಯ ಆಡಳಿತ ವ್ಯವಸ್ಥೆ ಎಚ್ಚೆತ್ತುಕೊಂಡು ಈ ಬಾರಿ ಪರಿಸರ ಸ್ನೇಹಿಯಾಗಿ ಗಣೇಶ ಹಬ್ಬ ಜರಗುವಂತೆ ಕ್ರಮವಹಿಸಬೇಕು‌ ಯಾವುದೇ ಕಾರಣಕ್ಕೂ ವಿಷಕಾರಿ ರಸಾಯನಿಕ ಬಣ್ಣಗಳನ್ನು ಬಳಸಿರುವ, ಹುಲ್ಲು ಮತ್ತು ಬಿದಿರು ಕಡ್ಡಿಗಳಿಂದ ಗಣೇಶ ಮೂರ್ತಿಗಳನ್ನು ಮಾಡಿರುವ ಗಣೇಶಗಳನ್ನು ತಯಾರು ಮಾಡದಂತೆ ಹಾಗೂ ಕೂರಿಸದಂತೆ ತಡೆಗಟ್ಟಬೇಕು. ಒಂದು ವೇಳೆ ಕಾನೂನು ಉಲ್ಲಂಘನೆ ಮಾಡಿದರೆ ಶಿಸ್ತು ಕ್ರಮ ಕೈಗೊಂಡು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕೆಂದು ಮನವಿ ಮಾಡಿದರು.

ಒಟ್ಟಾರೆ, ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು, ಜೇಡಿ ಮಣ್ಣು ಅಥವಾ ಮಣ್ಣಿನಿಂದ ತಯಾರಿಸಿದ ಬಣ್ಣ ರಹಿತ ಗಣೇಶ ಮೂರ್ತಿಯನ್ನು ಖರೀದಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಆದಷ್ಟೂ ಮನೆಗಳಲ್ಲಿ ಅರಿಶಿಣ ಮಿಶ್ರಿತ ಗೋಧಿ ಹಿಟ್ಟಿನಿಂದ ಮಾಡಿದ ಪುಟ್ಟ ಗಣೇಶನನ್ನು ಪ್ರತಿಷ್ಠಾಪಿಸಬೇಕು. ಮನೆಯಲ್ಲೇ ಬಕೆಟ್‌ನಲ್ಲಿ ವಿಸರ್ಜಿಸಿದರೆ ಉತ್ತಮ.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

2 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

2 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

10 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago