ಗೌರಿ-ಗಣೇಶ ಹಬ್ಬಕ್ಕೆ ಎರಡೇ ತಿಂಗಳು ಬಾಕಿ: ಜೀವಜಲಕ್ಕೆ ಕುಂದುಂಟಾಗುವ ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗೌರಿ-ಗಣೇಶ ಮೂರ್ತಿಗಳನ್ನು ತಯಾರಿಸಲು ಮುಂದಾದ ತಯಾರಕರು: ಗಣೇಶ ಮೂರ್ತಿ ತಯಾರಿಕ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: ಪ್ಲಾಸ್ಟರ್ ಆಫ್ ಪ್ಯಾರೀಸ್, ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ತಯಾರಿಸದಂತೆ ಎಚ್ಚರಿಕೆ

ಗಣೇಶ ಹಬ್ಬ ಭಾರತದಲ್ಲಿ ಒಂದು ಪ್ರಮುಖವಾದಂತಹ ಹಬ್ಬ. ಈ ಬಾರಿಯ ಗೌರಿ-ಗಣೇಶ ಹಬ್ಬಕ್ಕೆ ಎರಡೇ ತಿಂಗಳು ಬಾಕಿ ಇದ್ದು, ಸದ್ದಿಲ್ಲದೇ ವಿವಿಧ ಆಕಾರಗಳ ಗೌರಿ-ಗಣೇಶ ಮೂರ್ತಿಗಳ ತಯಾರಿಕೆ ಭರ್ಜರಿಯಾಗಿ ನಡೆಯುತ್ತಿದೆ.

ಗಣೇಶ ಮೂರ್ತಿ ತಯಾರಕರು ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗಣಪತಿ-ಗೌರಿ ಮೂರ್ತಿ ಗಳನ್ನು ತಯಾರಿಸಲು ಮುಂದಾಗಿದ್ದಾರೆ ಎಂದು ಪರಿಸರ ಪ್ರೇಮಿಗಳು ಆರೋಪಿಸಿದ್ದಾರೆ.

ಪಿಒಪಿ ನೀರಿನಲ್ಲಿ ಕರಗದ ವಸ್ತು. ಇದರಿಂದ ಬಾವಿ, ಕೆರೆ, ಕುಂಟೆ, ಸರೋವರ, ನದಿ ನೀರು ಕಲುಷಿತಗೊಳ್ಳುತ್ತದೆ. ಇದರಿಂದ ವಿವಿಧೆಡೆ ಜೀವ ಹಾನಿಯೂ ಆಗಿದೆ. ಜನ ಜಾನುವಾರುಗಳ ಜೀವ ಉಳಿಸಲು ಮತ್ತು ರಕ್ಷಿಸಲು ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗಣಪತಿ, ಗೌರಿ ಮೂರ್ತಿಗಳನ್ನು ತಯಾರಿಸದಂತೆ, ದಾಸ್ತಾನು ಮತ್ತು ಮಾರಾಟ ಮಾಡದಂತೆ ಜನ ಜಾಗೃತಿ ಮತ್ತು ಕ್ರಮಗಳನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಕೈಗೊಂಡಿದ್ದರೂ ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗೌರಿ-ಗಣೇಶ ಮೂರ್ತಿಗಳ ತಯಾರಿಕೆ ಎಗ್ಗಿಲ್ಲದೇ ನಡೆಯುತ್ತಿದೆ ಎಂಬ ಕೂಗು ಕೇಳಿಬಂದಿದೆ.

ಜನರ ಭಕ್ತಿ, ಭಾವ ಸಂಪ್ರದಾಯಕ್ಕೆ ಚ್ಯುತಿ ಆಗದಂತೆ ಪರಿಸರ ಸ್ನೇಹಿ, ಮಣ್ಣಿನ ಗೌರಿ, ಗಣಪತಿಯನ್ನು ತಯಾರಿಸುವಂತೆ ತಯಾರಿಕರಿಗೆ ಕಳೆದ ಕೆಲವು ವರ್ಷಗಳಿಂದ ಸೂಚನೆ ನೀಡಲಾಗುತ್ತಿದೆ.

 

ದೊಡ್ಡಬಳ್ಳಾಪುರ ತಾಲೂಕಿನ ಹೊರವಲಯದಲ್ಲಿರುವ ಮಾರಸಂದ್ರದಲ್ಲಿ ಗಣೇಶ ಮೂರ್ತಿ ತಯಾರಿಕೆಯ 9 ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಬಹುತೇಕ ಎಲ್ಲಾ ಘಟಕಗಳಲ್ಲಿ ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗೌರಿ-ಗಣೇಶ ಮೂರ್ತಿಗಳ ತಯಾರಿಕೆ ಎಗ್ಗಿಲ್ಲದೇ ನಡೆಯುತ್ತಿದೆ.

ಪರಿಸರ ಪ್ರೇಮಿಗಳ ಒತ್ತಡಕ್ಕೆ ಮಣಿದ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗಣೇಶ ಮೂರ್ತಿ ತಯಾರಿಕ ಘಟಕಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಪ್ಲಾಸ್ಟರ್ ಆಫ್ ಪ್ಯಾರೀಸ್, ಬಣ್ಣ ಲೇಪಿತ ಗಣೇಶ ಮೂರ್ತಿಗಳು ಪತ್ತೆಯಾಗಿದೆ, ಅಧಿಕಾರಿಗಳ ದಾಳಿಗೆ ಹೆದರಿದ ಇನ್ನೂಳಿದ 8 ಘಟಕಗಳು ಬಾಗಿಲು ಹಾಕಿ ಪರಾರಿಯಾಗಿದ್ದಾರೆ.

ಅಧಿಕಾರಿಗಳ ದಾಳಿ ಬಗ್ಗೆ ಮಾತನಾಡಿದ ಯುವ ಸಂಚಲನದ ಮುಖಂಡರಾದ ಚಿದಾನಂದ್ ಮೂರ್ತಿ, ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಬೇಸರವನ್ನ ವ್ಯಕ್ತಪಡಿಸಿದರು, ಕಳೆದ ವರ್ಷ ನಿಷೇಧಿಸಿದ ಮೂರ್ತಿಗಳನ್ನೇ ಈಗಲೂ ಮರು ತಯಾರಿಕೆ ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಆದರೆ, ಅಧಿಕಾರಿಗಳು ದಾಳಿ ವೇಳೆ ಹಳೆಯ ವಿಗ್ರಹಗಳು ಮಾತ್ರ ಪತ್ತೆಯಾಗಿದೆ ಎಂದು ಮಹಜರು ಬರೆದಿದ್ದಾರೆ. ಪರಿಸರವನ್ನ ಕಾಪಾಡಬೇಕಾದ ಜವಾಬ್ದಾರಿ ಹೊತ್ತ ಅಧಿಕಾರಿಗಳೇ ಪರಿಸರ ಮಾಲಿನ್ಯಕ್ಕೆ ಮುಂದಾಗಿರುವುದು ನಮ್ಮ ಸಮಾಜದ ದುರಂತ ಕಿಡಿಕಾರಿದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ 1974ರ ಪ್ರಕಾರ ಕಲಂ 33(ಅ) ಕಾಯ್ದೆ ಪ್ರಕಾರ ರಾಜ್ಯದ ಕೆರೆಗಳಲ್ಲಿ ಹಾಗೂ ಇತರೆ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ , ಬಣ್ಣ ಲೇಪಿತ ವಿಗ್ರಹಗಳನ್ನು, ರಾಜ್ಯದ ಯಾವುದೇ ಜಲಗಳಲ್ಲಿ, ನದಿ, ಕಾಲುವೆ, ಬಾವಿಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಜಲ ಮಾಲಿನ್ಯ ತಡೆ ಮತ್ತು ನಿಯಂತ್ರಣ ಕಾಯ್ದೆ 1974ರ ಕಲಂ 45-1 ಅನ್ವಯ 10 ಸಾವಿರ ದಂಡವನ್ನು ಮತ್ತು ಜೈಲುವಾಸವನ್ನು ವಿಧಿಸುವ ಅವಕಾಶವಿರುತ್ತದೆ. ಅಲ್ಲದೆ ಕಡ್ಡಾಯವಾಗಿ ಗಣೇಶ ಮೂರ್ತಿಗಳು 5 ಅಡಿ ಎತ್ತರವನ್ನು ಮೀರಬಾರದೆಂದು ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ಬಂಧ ವಿಧಿಸಿದೆ ಎಂದರು.

ಈಗಾಗಲೇ ನಮ್ಮ ಜಲಮೂಲಗಳಿಗೆ ಆಗಿರುವ ಕಲುಷಿತ ಸಾಕು. ಇನ್ನಾದರೂ ಸ್ಥಳೀಯ ಆಡಳಿತ ವ್ಯವಸ್ಥೆ ಎಚ್ಚೆತ್ತುಕೊಂಡು ಈ ಬಾರಿ ಪರಿಸರ ಸ್ನೇಹಿಯಾಗಿ ಗಣೇಶ ಹಬ್ಬ ಜರಗುವಂತೆ ಕ್ರಮವಹಿಸಬೇಕು‌ ಯಾವುದೇ ಕಾರಣಕ್ಕೂ ವಿಷಕಾರಿ ರಸಾಯನಿಕ ಬಣ್ಣಗಳನ್ನು ಬಳಸಿರುವ, ಹುಲ್ಲು ಮತ್ತು ಬಿದಿರು ಕಡ್ಡಿಗಳಿಂದ ಗಣೇಶ ಮೂರ್ತಿಗಳನ್ನು ಮಾಡಿರುವ ಗಣೇಶಗಳನ್ನು ತಯಾರು ಮಾಡದಂತೆ ಹಾಗೂ ಕೂರಿಸದಂತೆ ತಡೆಗಟ್ಟಬೇಕು. ಒಂದು ವೇಳೆ ಕಾನೂನು ಉಲ್ಲಂಘನೆ ಮಾಡಿದರೆ ಶಿಸ್ತು ಕ್ರಮ ಕೈಗೊಂಡು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕೆಂದು ಮನವಿ ಮಾಡಿದರು.

ಒಟ್ಟಾರೆ, ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು, ಜೇಡಿ ಮಣ್ಣು ಅಥವಾ ಮಣ್ಣಿನಿಂದ ತಯಾರಿಸಿದ ಬಣ್ಣ ರಹಿತ ಗಣೇಶ ಮೂರ್ತಿಯನ್ನು ಖರೀದಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಆದಷ್ಟೂ ಮನೆಗಳಲ್ಲಿ ಅರಿಶಿಣ ಮಿಶ್ರಿತ ಗೋಧಿ ಹಿಟ್ಟಿನಿಂದ ಮಾಡಿದ ಪುಟ್ಟ ಗಣೇಶನನ್ನು ಪ್ರತಿಷ್ಠಾಪಿಸಬೇಕು. ಮನೆಯಲ್ಲೇ ಬಕೆಟ್‌ನಲ್ಲಿ ವಿಸರ್ಜಿಸಿದರೆ ಉತ್ತಮ.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

9 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

10 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

18 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago