ಗಣೇಶ ಹಬ್ಬ ಭಾರತದಲ್ಲಿ ಒಂದು ಪ್ರಮುಖವಾದಂತಹ ಹಬ್ಬ. ಈ ಬಾರಿಯ ಗೌರಿ-ಗಣೇಶ ಹಬ್ಬಕ್ಕೆ ಎರಡೇ ತಿಂಗಳು ಬಾಕಿ ಇದ್ದು, ಸದ್ದಿಲ್ಲದೇ ವಿವಿಧ ಆಕಾರಗಳ ಗೌರಿ-ಗಣೇಶ ಮೂರ್ತಿಗಳ ತಯಾರಿಕೆ ಭರ್ಜರಿಯಾಗಿ ನಡೆಯುತ್ತಿದೆ.
ಗಣೇಶ ಮೂರ್ತಿ ತಯಾರಕರು ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗಣಪತಿ-ಗೌರಿ ಮೂರ್ತಿ ಗಳನ್ನು ತಯಾರಿಸಲು ಮುಂದಾಗಿದ್ದಾರೆ ಎಂದು ಪರಿಸರ ಪ್ರೇಮಿಗಳು ಆರೋಪಿಸಿದ್ದಾರೆ.
ಪಿಒಪಿ ನೀರಿನಲ್ಲಿ ಕರಗದ ವಸ್ತು. ಇದರಿಂದ ಬಾವಿ, ಕೆರೆ, ಕುಂಟೆ, ಸರೋವರ, ನದಿ ನೀರು ಕಲುಷಿತಗೊಳ್ಳುತ್ತದೆ. ಇದರಿಂದ ವಿವಿಧೆಡೆ ಜೀವ ಹಾನಿಯೂ ಆಗಿದೆ. ಜನ ಜಾನುವಾರುಗಳ ಜೀವ ಉಳಿಸಲು ಮತ್ತು ರಕ್ಷಿಸಲು ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗಣಪತಿ, ಗೌರಿ ಮೂರ್ತಿಗಳನ್ನು ತಯಾರಿಸದಂತೆ, ದಾಸ್ತಾನು ಮತ್ತು ಮಾರಾಟ ಮಾಡದಂತೆ ಜನ ಜಾಗೃತಿ ಮತ್ತು ಕ್ರಮಗಳನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಕೈಗೊಂಡಿದ್ದರೂ ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗೌರಿ-ಗಣೇಶ ಮೂರ್ತಿಗಳ ತಯಾರಿಕೆ ಎಗ್ಗಿಲ್ಲದೇ ನಡೆಯುತ್ತಿದೆ ಎಂಬ ಕೂಗು ಕೇಳಿಬಂದಿದೆ.
ದೊಡ್ಡಬಳ್ಳಾಪುರ ತಾಲೂಕಿನ ಹೊರವಲಯದಲ್ಲಿರುವ ಮಾರಸಂದ್ರದಲ್ಲಿ ಗಣೇಶ ಮೂರ್ತಿ ತಯಾರಿಕೆಯ 9 ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಬಹುತೇಕ ಎಲ್ಲಾ ಘಟಕಗಳಲ್ಲಿ ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗೌರಿ-ಗಣೇಶ ಮೂರ್ತಿಗಳ ತಯಾರಿಕೆ ಎಗ್ಗಿಲ್ಲದೇ ನಡೆಯುತ್ತಿದೆ.
ಪರಿಸರ ಪ್ರೇಮಿಗಳ ಒತ್ತಡಕ್ಕೆ ಮಣಿದ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗಣೇಶ ಮೂರ್ತಿ ತಯಾರಿಕ ಘಟಕಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಪ್ಲಾಸ್ಟರ್ ಆಫ್ ಪ್ಯಾರೀಸ್, ಬಣ್ಣ ಲೇಪಿತ ಗಣೇಶ ಮೂರ್ತಿಗಳು ಪತ್ತೆಯಾಗಿದೆ, ಅಧಿಕಾರಿಗಳ ದಾಳಿಗೆ ಹೆದರಿದ ಇನ್ನೂಳಿದ 8 ಘಟಕಗಳು ಬಾಗಿಲು ಹಾಕಿ ಪರಾರಿಯಾಗಿದ್ದಾರೆ.
ಅಧಿಕಾರಿಗಳ ದಾಳಿ ಬಗ್ಗೆ ಮಾತನಾಡಿದ ಯುವ ಸಂಚಲನದ ಮುಖಂಡರಾದ ಚಿದಾನಂದ್ ಮೂರ್ತಿ, ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಬೇಸರವನ್ನ ವ್ಯಕ್ತಪಡಿಸಿದರು, ಕಳೆದ ವರ್ಷ ನಿಷೇಧಿಸಿದ ಮೂರ್ತಿಗಳನ್ನೇ ಈಗಲೂ ಮರು ತಯಾರಿಕೆ ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಆದರೆ, ಅಧಿಕಾರಿಗಳು ದಾಳಿ ವೇಳೆ ಹಳೆಯ ವಿಗ್ರಹಗಳು ಮಾತ್ರ ಪತ್ತೆಯಾಗಿದೆ ಎಂದು ಮಹಜರು ಬರೆದಿದ್ದಾರೆ. ಪರಿಸರವನ್ನ ಕಾಪಾಡಬೇಕಾದ ಜವಾಬ್ದಾರಿ ಹೊತ್ತ ಅಧಿಕಾರಿಗಳೇ ಪರಿಸರ ಮಾಲಿನ್ಯಕ್ಕೆ ಮುಂದಾಗಿರುವುದು ನಮ್ಮ ಸಮಾಜದ ದುರಂತ ಕಿಡಿಕಾರಿದರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ 1974ರ ಪ್ರಕಾರ ಕಲಂ 33(ಅ) ಕಾಯ್ದೆ ಪ್ರಕಾರ ರಾಜ್ಯದ ಕೆರೆಗಳಲ್ಲಿ ಹಾಗೂ ಇತರೆ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ , ಬಣ್ಣ ಲೇಪಿತ ವಿಗ್ರಹಗಳನ್ನು, ರಾಜ್ಯದ ಯಾವುದೇ ಜಲಗಳಲ್ಲಿ, ನದಿ, ಕಾಲುವೆ, ಬಾವಿಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಜಲ ಮಾಲಿನ್ಯ ತಡೆ ಮತ್ತು ನಿಯಂತ್ರಣ ಕಾಯ್ದೆ 1974ರ ಕಲಂ 45-1 ಅನ್ವಯ 10 ಸಾವಿರ ದಂಡವನ್ನು ಮತ್ತು ಜೈಲುವಾಸವನ್ನು ವಿಧಿಸುವ ಅವಕಾಶವಿರುತ್ತದೆ. ಅಲ್ಲದೆ ಕಡ್ಡಾಯವಾಗಿ ಗಣೇಶ ಮೂರ್ತಿಗಳು 5 ಅಡಿ ಎತ್ತರವನ್ನು ಮೀರಬಾರದೆಂದು ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ಬಂಧ ವಿಧಿಸಿದೆ ಎಂದರು.
ಈಗಾಗಲೇ ನಮ್ಮ ಜಲಮೂಲಗಳಿಗೆ ಆಗಿರುವ ಕಲುಷಿತ ಸಾಕು. ಇನ್ನಾದರೂ ಸ್ಥಳೀಯ ಆಡಳಿತ ವ್ಯವಸ್ಥೆ ಎಚ್ಚೆತ್ತುಕೊಂಡು ಈ ಬಾರಿ ಪರಿಸರ ಸ್ನೇಹಿಯಾಗಿ ಗಣೇಶ ಹಬ್ಬ ಜರಗುವಂತೆ ಕ್ರಮವಹಿಸಬೇಕು ಯಾವುದೇ ಕಾರಣಕ್ಕೂ ವಿಷಕಾರಿ ರಸಾಯನಿಕ ಬಣ್ಣಗಳನ್ನು ಬಳಸಿರುವ, ಹುಲ್ಲು ಮತ್ತು ಬಿದಿರು ಕಡ್ಡಿಗಳಿಂದ ಗಣೇಶ ಮೂರ್ತಿಗಳನ್ನು ಮಾಡಿರುವ ಗಣೇಶಗಳನ್ನು ತಯಾರು ಮಾಡದಂತೆ ಹಾಗೂ ಕೂರಿಸದಂತೆ ತಡೆಗಟ್ಟಬೇಕು. ಒಂದು ವೇಳೆ ಕಾನೂನು ಉಲ್ಲಂಘನೆ ಮಾಡಿದರೆ ಶಿಸ್ತು ಕ್ರಮ ಕೈಗೊಂಡು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕೆಂದು ಮನವಿ ಮಾಡಿದರು.
ಒಟ್ಟಾರೆ, ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು, ಜೇಡಿ ಮಣ್ಣು ಅಥವಾ ಮಣ್ಣಿನಿಂದ ತಯಾರಿಸಿದ ಬಣ್ಣ ರಹಿತ ಗಣೇಶ ಮೂರ್ತಿಯನ್ನು ಖರೀದಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಆದಷ್ಟೂ ಮನೆಗಳಲ್ಲಿ ಅರಿಶಿಣ ಮಿಶ್ರಿತ ಗೋಧಿ ಹಿಟ್ಟಿನಿಂದ ಮಾಡಿದ ಪುಟ್ಟ ಗಣೇಶನನ್ನು ಪ್ರತಿಷ್ಠಾಪಿಸಬೇಕು. ಮನೆಯಲ್ಲೇ ಬಕೆಟ್ನಲ್ಲಿ ವಿಸರ್ಜಿಸಿದರೆ ಉತ್ತಮ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…