ಗೌರಿ-ಗಣೇಶ ಹಬ್ಬಕ್ಕೆ ಎರಡೇ ತಿಂಗಳು ಬಾಕಿ: ಜೀವಜಲಕ್ಕೆ ಕುಂದುಂಟಾಗುವ ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗೌರಿ-ಗಣೇಶ ಮೂರ್ತಿಗಳನ್ನು ತಯಾರಿಸಲು ಮುಂದಾದ ತಯಾರಕರು: ಗಣೇಶ ಮೂರ್ತಿ ತಯಾರಿಕ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: ಪ್ಲಾಸ್ಟರ್ ಆಫ್ ಪ್ಯಾರೀಸ್, ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ತಯಾರಿಸದಂತೆ ಎಚ್ಚರಿಕೆ

ಗಣೇಶ ಹಬ್ಬ ಭಾರತದಲ್ಲಿ ಒಂದು ಪ್ರಮುಖವಾದಂತಹ ಹಬ್ಬ. ಈ ಬಾರಿಯ ಗೌರಿ-ಗಣೇಶ ಹಬ್ಬಕ್ಕೆ ಎರಡೇ ತಿಂಗಳು ಬಾಕಿ ಇದ್ದು, ಸದ್ದಿಲ್ಲದೇ ವಿವಿಧ ಆಕಾರಗಳ ಗೌರಿ-ಗಣೇಶ ಮೂರ್ತಿಗಳ ತಯಾರಿಕೆ ಭರ್ಜರಿಯಾಗಿ ನಡೆಯುತ್ತಿದೆ.

ಗಣೇಶ ಮೂರ್ತಿ ತಯಾರಕರು ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗಣಪತಿ-ಗೌರಿ ಮೂರ್ತಿ ಗಳನ್ನು ತಯಾರಿಸಲು ಮುಂದಾಗಿದ್ದಾರೆ ಎಂದು ಪರಿಸರ ಪ್ರೇಮಿಗಳು ಆರೋಪಿಸಿದ್ದಾರೆ.

ಪಿಒಪಿ ನೀರಿನಲ್ಲಿ ಕರಗದ ವಸ್ತು. ಇದರಿಂದ ಬಾವಿ, ಕೆರೆ, ಕುಂಟೆ, ಸರೋವರ, ನದಿ ನೀರು ಕಲುಷಿತಗೊಳ್ಳುತ್ತದೆ. ಇದರಿಂದ ವಿವಿಧೆಡೆ ಜೀವ ಹಾನಿಯೂ ಆಗಿದೆ. ಜನ ಜಾನುವಾರುಗಳ ಜೀವ ಉಳಿಸಲು ಮತ್ತು ರಕ್ಷಿಸಲು ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗಣಪತಿ, ಗೌರಿ ಮೂರ್ತಿಗಳನ್ನು ತಯಾರಿಸದಂತೆ, ದಾಸ್ತಾನು ಮತ್ತು ಮಾರಾಟ ಮಾಡದಂತೆ ಜನ ಜಾಗೃತಿ ಮತ್ತು ಕ್ರಮಗಳನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಕೈಗೊಂಡಿದ್ದರೂ ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗೌರಿ-ಗಣೇಶ ಮೂರ್ತಿಗಳ ತಯಾರಿಕೆ ಎಗ್ಗಿಲ್ಲದೇ ನಡೆಯುತ್ತಿದೆ ಎಂಬ ಕೂಗು ಕೇಳಿಬಂದಿದೆ.

ಜನರ ಭಕ್ತಿ, ಭಾವ ಸಂಪ್ರದಾಯಕ್ಕೆ ಚ್ಯುತಿ ಆಗದಂತೆ ಪರಿಸರ ಸ್ನೇಹಿ, ಮಣ್ಣಿನ ಗೌರಿ, ಗಣಪತಿಯನ್ನು ತಯಾರಿಸುವಂತೆ ತಯಾರಿಕರಿಗೆ ಕಳೆದ ಕೆಲವು ವರ್ಷಗಳಿಂದ ಸೂಚನೆ ನೀಡಲಾಗುತ್ತಿದೆ.

 

ದೊಡ್ಡಬಳ್ಳಾಪುರ ತಾಲೂಕಿನ ಹೊರವಲಯದಲ್ಲಿರುವ ಮಾರಸಂದ್ರದಲ್ಲಿ ಗಣೇಶ ಮೂರ್ತಿ ತಯಾರಿಕೆಯ 9 ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಬಹುತೇಕ ಎಲ್ಲಾ ಘಟಕಗಳಲ್ಲಿ ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗೌರಿ-ಗಣೇಶ ಮೂರ್ತಿಗಳ ತಯಾರಿಕೆ ಎಗ್ಗಿಲ್ಲದೇ ನಡೆಯುತ್ತಿದೆ.

ಪರಿಸರ ಪ್ರೇಮಿಗಳ ಒತ್ತಡಕ್ಕೆ ಮಣಿದ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗಣೇಶ ಮೂರ್ತಿ ತಯಾರಿಕ ಘಟಕಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಪ್ಲಾಸ್ಟರ್ ಆಫ್ ಪ್ಯಾರೀಸ್, ಬಣ್ಣ ಲೇಪಿತ ಗಣೇಶ ಮೂರ್ತಿಗಳು ಪತ್ತೆಯಾಗಿದೆ, ಅಧಿಕಾರಿಗಳ ದಾಳಿಗೆ ಹೆದರಿದ ಇನ್ನೂಳಿದ 8 ಘಟಕಗಳು ಬಾಗಿಲು ಹಾಕಿ ಪರಾರಿಯಾಗಿದ್ದಾರೆ.

ಅಧಿಕಾರಿಗಳ ದಾಳಿ ಬಗ್ಗೆ ಮಾತನಾಡಿದ ಯುವ ಸಂಚಲನದ ಮುಖಂಡರಾದ ಚಿದಾನಂದ್ ಮೂರ್ತಿ, ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಬೇಸರವನ್ನ ವ್ಯಕ್ತಪಡಿಸಿದರು, ಕಳೆದ ವರ್ಷ ನಿಷೇಧಿಸಿದ ಮೂರ್ತಿಗಳನ್ನೇ ಈಗಲೂ ಮರು ತಯಾರಿಕೆ ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಆದರೆ, ಅಧಿಕಾರಿಗಳು ದಾಳಿ ವೇಳೆ ಹಳೆಯ ವಿಗ್ರಹಗಳು ಮಾತ್ರ ಪತ್ತೆಯಾಗಿದೆ ಎಂದು ಮಹಜರು ಬರೆದಿದ್ದಾರೆ. ಪರಿಸರವನ್ನ ಕಾಪಾಡಬೇಕಾದ ಜವಾಬ್ದಾರಿ ಹೊತ್ತ ಅಧಿಕಾರಿಗಳೇ ಪರಿಸರ ಮಾಲಿನ್ಯಕ್ಕೆ ಮುಂದಾಗಿರುವುದು ನಮ್ಮ ಸಮಾಜದ ದುರಂತ ಕಿಡಿಕಾರಿದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ 1974ರ ಪ್ರಕಾರ ಕಲಂ 33(ಅ) ಕಾಯ್ದೆ ಪ್ರಕಾರ ರಾಜ್ಯದ ಕೆರೆಗಳಲ್ಲಿ ಹಾಗೂ ಇತರೆ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ , ಬಣ್ಣ ಲೇಪಿತ ವಿಗ್ರಹಗಳನ್ನು, ರಾಜ್ಯದ ಯಾವುದೇ ಜಲಗಳಲ್ಲಿ, ನದಿ, ಕಾಲುವೆ, ಬಾವಿಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಜಲ ಮಾಲಿನ್ಯ ತಡೆ ಮತ್ತು ನಿಯಂತ್ರಣ ಕಾಯ್ದೆ 1974ರ ಕಲಂ 45-1 ಅನ್ವಯ 10 ಸಾವಿರ ದಂಡವನ್ನು ಮತ್ತು ಜೈಲುವಾಸವನ್ನು ವಿಧಿಸುವ ಅವಕಾಶವಿರುತ್ತದೆ. ಅಲ್ಲದೆ ಕಡ್ಡಾಯವಾಗಿ ಗಣೇಶ ಮೂರ್ತಿಗಳು 5 ಅಡಿ ಎತ್ತರವನ್ನು ಮೀರಬಾರದೆಂದು ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ಬಂಧ ವಿಧಿಸಿದೆ ಎಂದರು.

ಈಗಾಗಲೇ ನಮ್ಮ ಜಲಮೂಲಗಳಿಗೆ ಆಗಿರುವ ಕಲುಷಿತ ಸಾಕು. ಇನ್ನಾದರೂ ಸ್ಥಳೀಯ ಆಡಳಿತ ವ್ಯವಸ್ಥೆ ಎಚ್ಚೆತ್ತುಕೊಂಡು ಈ ಬಾರಿ ಪರಿಸರ ಸ್ನೇಹಿಯಾಗಿ ಗಣೇಶ ಹಬ್ಬ ಜರಗುವಂತೆ ಕ್ರಮವಹಿಸಬೇಕು‌ ಯಾವುದೇ ಕಾರಣಕ್ಕೂ ವಿಷಕಾರಿ ರಸಾಯನಿಕ ಬಣ್ಣಗಳನ್ನು ಬಳಸಿರುವ, ಹುಲ್ಲು ಮತ್ತು ಬಿದಿರು ಕಡ್ಡಿಗಳಿಂದ ಗಣೇಶ ಮೂರ್ತಿಗಳನ್ನು ಮಾಡಿರುವ ಗಣೇಶಗಳನ್ನು ತಯಾರು ಮಾಡದಂತೆ ಹಾಗೂ ಕೂರಿಸದಂತೆ ತಡೆಗಟ್ಟಬೇಕು. ಒಂದು ವೇಳೆ ಕಾನೂನು ಉಲ್ಲಂಘನೆ ಮಾಡಿದರೆ ಶಿಸ್ತು ಕ್ರಮ ಕೈಗೊಂಡು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕೆಂದು ಮನವಿ ಮಾಡಿದರು.

ಒಟ್ಟಾರೆ, ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು, ಜೇಡಿ ಮಣ್ಣು ಅಥವಾ ಮಣ್ಣಿನಿಂದ ತಯಾರಿಸಿದ ಬಣ್ಣ ರಹಿತ ಗಣೇಶ ಮೂರ್ತಿಯನ್ನು ಖರೀದಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಆದಷ್ಟೂ ಮನೆಗಳಲ್ಲಿ ಅರಿಶಿಣ ಮಿಶ್ರಿತ ಗೋಧಿ ಹಿಟ್ಟಿನಿಂದ ಮಾಡಿದ ಪುಟ್ಟ ಗಣೇಶನನ್ನು ಪ್ರತಿಷ್ಠಾಪಿಸಬೇಕು. ಮನೆಯಲ್ಲೇ ಬಕೆಟ್‌ನಲ್ಲಿ ವಿಸರ್ಜಿಸಿದರೆ ಉತ್ತಮ.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

6 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

9 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

22 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

23 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago