ಗಣೇಶ ಹಬ್ಬ ಭಾರತದಲ್ಲಿ ಒಂದು ಪ್ರಮುಖವಾದಂತಹ ಹಬ್ಬ. ಈ ಬಾರಿಯ ಗೌರಿ-ಗಣೇಶ ಹಬ್ಬಕ್ಕೆ ಎರಡೇ ತಿಂಗಳು ಬಾಕಿ ಇದ್ದು, ಸದ್ದಿಲ್ಲದೇ ವಿವಿಧ ಆಕಾರಗಳ ಗೌರಿ-ಗಣೇಶ ಮೂರ್ತಿಗಳ ತಯಾರಿಕೆ ಭರ್ಜರಿಯಾಗಿ ನಡೆಯುತ್ತಿದೆ.
ಗಣೇಶ ಮೂರ್ತಿ ತಯಾರಕರು ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗಣಪತಿ-ಗೌರಿ ಮೂರ್ತಿ ಗಳನ್ನು ತಯಾರಿಸಲು ಮುಂದಾಗಿದ್ದಾರೆ ಎಂದು ಪರಿಸರ ಪ್ರೇಮಿಗಳು ಆರೋಪಿಸಿದ್ದಾರೆ.
ಪಿಒಪಿ ನೀರಿನಲ್ಲಿ ಕರಗದ ವಸ್ತು. ಇದರಿಂದ ಬಾವಿ, ಕೆರೆ, ಕುಂಟೆ, ಸರೋವರ, ನದಿ ನೀರು ಕಲುಷಿತಗೊಳ್ಳುತ್ತದೆ. ಇದರಿಂದ ವಿವಿಧೆಡೆ ಜೀವ ಹಾನಿಯೂ ಆಗಿದೆ. ಜನ ಜಾನುವಾರುಗಳ ಜೀವ ಉಳಿಸಲು ಮತ್ತು ರಕ್ಷಿಸಲು ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗಣಪತಿ, ಗೌರಿ ಮೂರ್ತಿಗಳನ್ನು ತಯಾರಿಸದಂತೆ, ದಾಸ್ತಾನು ಮತ್ತು ಮಾರಾಟ ಮಾಡದಂತೆ ಜನ ಜಾಗೃತಿ ಮತ್ತು ಕ್ರಮಗಳನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಕೈಗೊಂಡಿದ್ದರೂ ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗೌರಿ-ಗಣೇಶ ಮೂರ್ತಿಗಳ ತಯಾರಿಕೆ ಎಗ್ಗಿಲ್ಲದೇ ನಡೆಯುತ್ತಿದೆ ಎಂಬ ಕೂಗು ಕೇಳಿಬಂದಿದೆ.
ದೊಡ್ಡಬಳ್ಳಾಪುರ ತಾಲೂಕಿನ ಹೊರವಲಯದಲ್ಲಿರುವ ಮಾರಸಂದ್ರದಲ್ಲಿ ಗಣೇಶ ಮೂರ್ತಿ ತಯಾರಿಕೆಯ 9 ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಬಹುತೇಕ ಎಲ್ಲಾ ಘಟಕಗಳಲ್ಲಿ ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗೌರಿ-ಗಣೇಶ ಮೂರ್ತಿಗಳ ತಯಾರಿಕೆ ಎಗ್ಗಿಲ್ಲದೇ ನಡೆಯುತ್ತಿದೆ.
ಪರಿಸರ ಪ್ರೇಮಿಗಳ ಒತ್ತಡಕ್ಕೆ ಮಣಿದ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗಣೇಶ ಮೂರ್ತಿ ತಯಾರಿಕ ಘಟಕಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಪ್ಲಾಸ್ಟರ್ ಆಫ್ ಪ್ಯಾರೀಸ್, ಬಣ್ಣ ಲೇಪಿತ ಗಣೇಶ ಮೂರ್ತಿಗಳು ಪತ್ತೆಯಾಗಿದೆ, ಅಧಿಕಾರಿಗಳ ದಾಳಿಗೆ ಹೆದರಿದ ಇನ್ನೂಳಿದ 8 ಘಟಕಗಳು ಬಾಗಿಲು ಹಾಕಿ ಪರಾರಿಯಾಗಿದ್ದಾರೆ.
ಅಧಿಕಾರಿಗಳ ದಾಳಿ ಬಗ್ಗೆ ಮಾತನಾಡಿದ ಯುವ ಸಂಚಲನದ ಮುಖಂಡರಾದ ಚಿದಾನಂದ್ ಮೂರ್ತಿ, ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಬೇಸರವನ್ನ ವ್ಯಕ್ತಪಡಿಸಿದರು, ಕಳೆದ ವರ್ಷ ನಿಷೇಧಿಸಿದ ಮೂರ್ತಿಗಳನ್ನೇ ಈಗಲೂ ಮರು ತಯಾರಿಕೆ ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಆದರೆ, ಅಧಿಕಾರಿಗಳು ದಾಳಿ ವೇಳೆ ಹಳೆಯ ವಿಗ್ರಹಗಳು ಮಾತ್ರ ಪತ್ತೆಯಾಗಿದೆ ಎಂದು ಮಹಜರು ಬರೆದಿದ್ದಾರೆ. ಪರಿಸರವನ್ನ ಕಾಪಾಡಬೇಕಾದ ಜವಾಬ್ದಾರಿ ಹೊತ್ತ ಅಧಿಕಾರಿಗಳೇ ಪರಿಸರ ಮಾಲಿನ್ಯಕ್ಕೆ ಮುಂದಾಗಿರುವುದು ನಮ್ಮ ಸಮಾಜದ ದುರಂತ ಕಿಡಿಕಾರಿದರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ 1974ರ ಪ್ರಕಾರ ಕಲಂ 33(ಅ) ಕಾಯ್ದೆ ಪ್ರಕಾರ ರಾಜ್ಯದ ಕೆರೆಗಳಲ್ಲಿ ಹಾಗೂ ಇತರೆ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ , ಬಣ್ಣ ಲೇಪಿತ ವಿಗ್ರಹಗಳನ್ನು, ರಾಜ್ಯದ ಯಾವುದೇ ಜಲಗಳಲ್ಲಿ, ನದಿ, ಕಾಲುವೆ, ಬಾವಿಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಜಲ ಮಾಲಿನ್ಯ ತಡೆ ಮತ್ತು ನಿಯಂತ್ರಣ ಕಾಯ್ದೆ 1974ರ ಕಲಂ 45-1 ಅನ್ವಯ 10 ಸಾವಿರ ದಂಡವನ್ನು ಮತ್ತು ಜೈಲುವಾಸವನ್ನು ವಿಧಿಸುವ ಅವಕಾಶವಿರುತ್ತದೆ. ಅಲ್ಲದೆ ಕಡ್ಡಾಯವಾಗಿ ಗಣೇಶ ಮೂರ್ತಿಗಳು 5 ಅಡಿ ಎತ್ತರವನ್ನು ಮೀರಬಾರದೆಂದು ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ಬಂಧ ವಿಧಿಸಿದೆ ಎಂದರು.
ಈಗಾಗಲೇ ನಮ್ಮ ಜಲಮೂಲಗಳಿಗೆ ಆಗಿರುವ ಕಲುಷಿತ ಸಾಕು. ಇನ್ನಾದರೂ ಸ್ಥಳೀಯ ಆಡಳಿತ ವ್ಯವಸ್ಥೆ ಎಚ್ಚೆತ್ತುಕೊಂಡು ಈ ಬಾರಿ ಪರಿಸರ ಸ್ನೇಹಿಯಾಗಿ ಗಣೇಶ ಹಬ್ಬ ಜರಗುವಂತೆ ಕ್ರಮವಹಿಸಬೇಕು ಯಾವುದೇ ಕಾರಣಕ್ಕೂ ವಿಷಕಾರಿ ರಸಾಯನಿಕ ಬಣ್ಣಗಳನ್ನು ಬಳಸಿರುವ, ಹುಲ್ಲು ಮತ್ತು ಬಿದಿರು ಕಡ್ಡಿಗಳಿಂದ ಗಣೇಶ ಮೂರ್ತಿಗಳನ್ನು ಮಾಡಿರುವ ಗಣೇಶಗಳನ್ನು ತಯಾರು ಮಾಡದಂತೆ ಹಾಗೂ ಕೂರಿಸದಂತೆ ತಡೆಗಟ್ಟಬೇಕು. ಒಂದು ವೇಳೆ ಕಾನೂನು ಉಲ್ಲಂಘನೆ ಮಾಡಿದರೆ ಶಿಸ್ತು ಕ್ರಮ ಕೈಗೊಂಡು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕೆಂದು ಮನವಿ ಮಾಡಿದರು.
ಒಟ್ಟಾರೆ, ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು, ಜೇಡಿ ಮಣ್ಣು ಅಥವಾ ಮಣ್ಣಿನಿಂದ ತಯಾರಿಸಿದ ಬಣ್ಣ ರಹಿತ ಗಣೇಶ ಮೂರ್ತಿಯನ್ನು ಖರೀದಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಆದಷ್ಟೂ ಮನೆಗಳಲ್ಲಿ ಅರಿಶಿಣ ಮಿಶ್ರಿತ ಗೋಧಿ ಹಿಟ್ಟಿನಿಂದ ಮಾಡಿದ ಪುಟ್ಟ ಗಣೇಶನನ್ನು ಪ್ರತಿಷ್ಠಾಪಿಸಬೇಕು. ಮನೆಯಲ್ಲೇ ಬಕೆಟ್ನಲ್ಲಿ ವಿಸರ್ಜಿಸಿದರೆ ಉತ್ತಮ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…