ಗೌರಿ-ಗಣೇಶ ಹಬ್ಬಕ್ಕೆ ಎರಡೇ ತಿಂಗಳು ಬಾಕಿ: ಜೀವಜಲಕ್ಕೆ ಕುಂದುಂಟಾಗುವ ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗೌರಿ-ಗಣೇಶ ಮೂರ್ತಿಗಳನ್ನು ತಯಾರಿಸಲು ಮುಂದಾದ ತಯಾರಕರು: ಗಣೇಶ ಮೂರ್ತಿ ತಯಾರಿಕ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: ಪ್ಲಾಸ್ಟರ್ ಆಫ್ ಪ್ಯಾರೀಸ್, ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ತಯಾರಿಸದಂತೆ ಎಚ್ಚರಿಕೆ

ಗಣೇಶ ಹಬ್ಬ ಭಾರತದಲ್ಲಿ ಒಂದು ಪ್ರಮುಖವಾದಂತಹ ಹಬ್ಬ. ಈ ಬಾರಿಯ ಗೌರಿ-ಗಣೇಶ ಹಬ್ಬಕ್ಕೆ ಎರಡೇ ತಿಂಗಳು ಬಾಕಿ ಇದ್ದು, ಸದ್ದಿಲ್ಲದೇ ವಿವಿಧ ಆಕಾರಗಳ ಗೌರಿ-ಗಣೇಶ ಮೂರ್ತಿಗಳ ತಯಾರಿಕೆ ಭರ್ಜರಿಯಾಗಿ ನಡೆಯುತ್ತಿದೆ.

ಗಣೇಶ ಮೂರ್ತಿ ತಯಾರಕರು ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗಣಪತಿ-ಗೌರಿ ಮೂರ್ತಿ ಗಳನ್ನು ತಯಾರಿಸಲು ಮುಂದಾಗಿದ್ದಾರೆ ಎಂದು ಪರಿಸರ ಪ್ರೇಮಿಗಳು ಆರೋಪಿಸಿದ್ದಾರೆ.

ಪಿಒಪಿ ನೀರಿನಲ್ಲಿ ಕರಗದ ವಸ್ತು. ಇದರಿಂದ ಬಾವಿ, ಕೆರೆ, ಕುಂಟೆ, ಸರೋವರ, ನದಿ ನೀರು ಕಲುಷಿತಗೊಳ್ಳುತ್ತದೆ. ಇದರಿಂದ ವಿವಿಧೆಡೆ ಜೀವ ಹಾನಿಯೂ ಆಗಿದೆ. ಜನ ಜಾನುವಾರುಗಳ ಜೀವ ಉಳಿಸಲು ಮತ್ತು ರಕ್ಷಿಸಲು ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗಣಪತಿ, ಗೌರಿ ಮೂರ್ತಿಗಳನ್ನು ತಯಾರಿಸದಂತೆ, ದಾಸ್ತಾನು ಮತ್ತು ಮಾರಾಟ ಮಾಡದಂತೆ ಜನ ಜಾಗೃತಿ ಮತ್ತು ಕ್ರಮಗಳನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಕೈಗೊಂಡಿದ್ದರೂ ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗೌರಿ-ಗಣೇಶ ಮೂರ್ತಿಗಳ ತಯಾರಿಕೆ ಎಗ್ಗಿಲ್ಲದೇ ನಡೆಯುತ್ತಿದೆ ಎಂಬ ಕೂಗು ಕೇಳಿಬಂದಿದೆ.

ಜನರ ಭಕ್ತಿ, ಭಾವ ಸಂಪ್ರದಾಯಕ್ಕೆ ಚ್ಯುತಿ ಆಗದಂತೆ ಪರಿಸರ ಸ್ನೇಹಿ, ಮಣ್ಣಿನ ಗೌರಿ, ಗಣಪತಿಯನ್ನು ತಯಾರಿಸುವಂತೆ ತಯಾರಿಕರಿಗೆ ಕಳೆದ ಕೆಲವು ವರ್ಷಗಳಿಂದ ಸೂಚನೆ ನೀಡಲಾಗುತ್ತಿದೆ.

 

ದೊಡ್ಡಬಳ್ಳಾಪುರ ತಾಲೂಕಿನ ಹೊರವಲಯದಲ್ಲಿರುವ ಮಾರಸಂದ್ರದಲ್ಲಿ ಗಣೇಶ ಮೂರ್ತಿ ತಯಾರಿಕೆಯ 9 ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಬಹುತೇಕ ಎಲ್ಲಾ ಘಟಕಗಳಲ್ಲಿ ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗೌರಿ-ಗಣೇಶ ಮೂರ್ತಿಗಳ ತಯಾರಿಕೆ ಎಗ್ಗಿಲ್ಲದೇ ನಡೆಯುತ್ತಿದೆ.

ಪರಿಸರ ಪ್ರೇಮಿಗಳ ಒತ್ತಡಕ್ಕೆ ಮಣಿದ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗಣೇಶ ಮೂರ್ತಿ ತಯಾರಿಕ ಘಟಕಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಪ್ಲಾಸ್ಟರ್ ಆಫ್ ಪ್ಯಾರೀಸ್, ಬಣ್ಣ ಲೇಪಿತ ಗಣೇಶ ಮೂರ್ತಿಗಳು ಪತ್ತೆಯಾಗಿದೆ, ಅಧಿಕಾರಿಗಳ ದಾಳಿಗೆ ಹೆದರಿದ ಇನ್ನೂಳಿದ 8 ಘಟಕಗಳು ಬಾಗಿಲು ಹಾಕಿ ಪರಾರಿಯಾಗಿದ್ದಾರೆ.

ಅಧಿಕಾರಿಗಳ ದಾಳಿ ಬಗ್ಗೆ ಮಾತನಾಡಿದ ಯುವ ಸಂಚಲನದ ಮುಖಂಡರಾದ ಚಿದಾನಂದ್ ಮೂರ್ತಿ, ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಬೇಸರವನ್ನ ವ್ಯಕ್ತಪಡಿಸಿದರು, ಕಳೆದ ವರ್ಷ ನಿಷೇಧಿಸಿದ ಮೂರ್ತಿಗಳನ್ನೇ ಈಗಲೂ ಮರು ತಯಾರಿಕೆ ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಆದರೆ, ಅಧಿಕಾರಿಗಳು ದಾಳಿ ವೇಳೆ ಹಳೆಯ ವಿಗ್ರಹಗಳು ಮಾತ್ರ ಪತ್ತೆಯಾಗಿದೆ ಎಂದು ಮಹಜರು ಬರೆದಿದ್ದಾರೆ. ಪರಿಸರವನ್ನ ಕಾಪಾಡಬೇಕಾದ ಜವಾಬ್ದಾರಿ ಹೊತ್ತ ಅಧಿಕಾರಿಗಳೇ ಪರಿಸರ ಮಾಲಿನ್ಯಕ್ಕೆ ಮುಂದಾಗಿರುವುದು ನಮ್ಮ ಸಮಾಜದ ದುರಂತ ಕಿಡಿಕಾರಿದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ 1974ರ ಪ್ರಕಾರ ಕಲಂ 33(ಅ) ಕಾಯ್ದೆ ಪ್ರಕಾರ ರಾಜ್ಯದ ಕೆರೆಗಳಲ್ಲಿ ಹಾಗೂ ಇತರೆ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ , ಬಣ್ಣ ಲೇಪಿತ ವಿಗ್ರಹಗಳನ್ನು, ರಾಜ್ಯದ ಯಾವುದೇ ಜಲಗಳಲ್ಲಿ, ನದಿ, ಕಾಲುವೆ, ಬಾವಿಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಜಲ ಮಾಲಿನ್ಯ ತಡೆ ಮತ್ತು ನಿಯಂತ್ರಣ ಕಾಯ್ದೆ 1974ರ ಕಲಂ 45-1 ಅನ್ವಯ 10 ಸಾವಿರ ದಂಡವನ್ನು ಮತ್ತು ಜೈಲುವಾಸವನ್ನು ವಿಧಿಸುವ ಅವಕಾಶವಿರುತ್ತದೆ. ಅಲ್ಲದೆ ಕಡ್ಡಾಯವಾಗಿ ಗಣೇಶ ಮೂರ್ತಿಗಳು 5 ಅಡಿ ಎತ್ತರವನ್ನು ಮೀರಬಾರದೆಂದು ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ಬಂಧ ವಿಧಿಸಿದೆ ಎಂದರು.

ಈಗಾಗಲೇ ನಮ್ಮ ಜಲಮೂಲಗಳಿಗೆ ಆಗಿರುವ ಕಲುಷಿತ ಸಾಕು. ಇನ್ನಾದರೂ ಸ್ಥಳೀಯ ಆಡಳಿತ ವ್ಯವಸ್ಥೆ ಎಚ್ಚೆತ್ತುಕೊಂಡು ಈ ಬಾರಿ ಪರಿಸರ ಸ್ನೇಹಿಯಾಗಿ ಗಣೇಶ ಹಬ್ಬ ಜರಗುವಂತೆ ಕ್ರಮವಹಿಸಬೇಕು‌ ಯಾವುದೇ ಕಾರಣಕ್ಕೂ ವಿಷಕಾರಿ ರಸಾಯನಿಕ ಬಣ್ಣಗಳನ್ನು ಬಳಸಿರುವ, ಹುಲ್ಲು ಮತ್ತು ಬಿದಿರು ಕಡ್ಡಿಗಳಿಂದ ಗಣೇಶ ಮೂರ್ತಿಗಳನ್ನು ಮಾಡಿರುವ ಗಣೇಶಗಳನ್ನು ತಯಾರು ಮಾಡದಂತೆ ಹಾಗೂ ಕೂರಿಸದಂತೆ ತಡೆಗಟ್ಟಬೇಕು. ಒಂದು ವೇಳೆ ಕಾನೂನು ಉಲ್ಲಂಘನೆ ಮಾಡಿದರೆ ಶಿಸ್ತು ಕ್ರಮ ಕೈಗೊಂಡು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕೆಂದು ಮನವಿ ಮಾಡಿದರು.

ಒಟ್ಟಾರೆ, ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು, ಜೇಡಿ ಮಣ್ಣು ಅಥವಾ ಮಣ್ಣಿನಿಂದ ತಯಾರಿಸಿದ ಬಣ್ಣ ರಹಿತ ಗಣೇಶ ಮೂರ್ತಿಯನ್ನು ಖರೀದಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಆದಷ್ಟೂ ಮನೆಗಳಲ್ಲಿ ಅರಿಶಿಣ ಮಿಶ್ರಿತ ಗೋಧಿ ಹಿಟ್ಟಿನಿಂದ ಮಾಡಿದ ಪುಟ್ಟ ಗಣೇಶನನ್ನು ಪ್ರತಿಷ್ಠಾಪಿಸಬೇಕು. ಮನೆಯಲ್ಲೇ ಬಕೆಟ್‌ನಲ್ಲಿ ವಿಸರ್ಜಿಸಿದರೆ ಉತ್ತಮ.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

21 minutes ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

8 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

9 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago