ಅದ್ಧೂರಿ ಗಣೇಶೋತ್ಸವಕ್ಕೆ ದೊಡ್ಡಬಳ್ಳಾಪುರ ಸಜ್ಜಾಗಿದೆ. ಗಣಪನ ಆರಾಧನೆಗೆ ಕೌಂಟ್ಡೌನ್ ಶುರುವಾಗಿದೆ. ಈಗಾಗಲೇ ಗಣಪನ ಮೂರ್ತಿಗಳ ಮಾರಾಟ ಜೋರಾಗಿದೆ.
ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಿಸಲಾಗಿದೆ. ಒಂದು ವೇಳೆ ಡಿಜೆ ಸಿಸ್ಟಂ ಬಳಕೆ ಮಾಡುವುದು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಎಚ್ಚರಿಸಿದ್ದಾರೆ….
ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡಿಜೆ ಸಿಸ್ಟಂ ಮಾಲೀಕರ ಸಭೆ ಕರೆದು ಮಾತನಾಡಿದ ಅವರು, ಹಬ್ಬಗಳ ಆಚರಣೆ ಸಂದರ್ಭದಲ್ಲಿ ಡಿಜೆ ಸಿಸ್ಟಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ದೊಡ್ಡಬಳ್ಳಾಪುರದಲ್ಲಿ ಡಿಜೆ ಸಿಸ್ಟಂಗಳ ಬಳಕೆಯನ್ನು ನಿಷೇಧಿಸಲಾಗಿದೆ ಎಂದರು.
ಗೌರಿ–ಗಣೇಶ ಹಬ್ಬ, ಈದ್ ಮಿಲಾದ್ ಮೆರವಣಿಗೆ ಮತ್ತು ಸಾರ್ವಜನಿಕ ಸಮಾರಂಭಗಳಲ್ಲಿ ಡಿಸ್ಕ್ ಜಾಕಿ (ಡಿಜೆ) ಹಾಗೂ ಸೌಂಡ್ ಸಿಸ್ಟಮ್ ಬಳಕೆ ನಿಷೇಧಿಸಿ ಬೆಂಗಳೂರು ಪೊಲೀಸರು ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
‘ಸಾರ್ವಜನಿಕ ಕಾರ್ಯಕ್ರಮದಲ್ಲಿ ಸೌಂಡ್ ಸಿಸ್ಟಮ್ ಮತ್ತು ಡಿಜೆ ನಿರ್ಬಂಧಿಸಿ ಬೆಂಗಳೂರು ಪೊಲೀಸರು ಹೊರಡಿಸಿರುವ ಸುತ್ತೋಲೆಯಲ್ಲಿ ಯಾವುದೇ ಲೋಪಗಳಿಲ್ಲ. ವಸತಿ ಪ್ರದೇಶದಲ್ಲಿ ಹಗಲು ವೇಳೆ 55 ಡೆಸಿಬಲ್ ಮತ್ತು ರಾತ್ರಿ ವೇಳೆ 45 ಡೆಸಿಬಲ್ ಶಬ್ಧದ ಮಟ್ಟ ನಿಗದಿಪಡಿಸಲಾಗಿದೆ. ಆದ್ದರಿಂದ, ಸಾರ್ವಜನಿಕ ಪ್ರದೇಶಗಳಲ್ಲಿ ಹೆಚ್ಚು ಸದ್ದು ಮಾಡುವ ಡಿಜೆ ಮತ್ತು ಸೌಂಡ್ ಸಿಸ್ಟಮ್ನ ಬಳಕೆಯನ್ನು ಒಪ್ಪಿಕೊಳ್ಳುವುದು ನ್ಯಾಯಾಲಯಕ್ಕೆ ಕಷ್ಟ ಎಂದು ಹೈಕೋರ್ಟ್ ತಿಳಿಸಿದೆ ಎಂದು ಹೇಳಿದರು.
ಆದ್ದರಿಂದ ಗಣೇಶೋತ್ಸವವು ಶಾಂತಿಯುತವಾಗಿ ನಡೆಯಲು, ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗದಂತೆ ತಡೆಯಲು, ಸಾರ್ವಜನಿಕರು, ವಯಸ್ಕರ, ಮಕ್ಕಳ ಆರೋಗ್ಯ ಹಾಗೂ ನೆಮ್ಮದಿಗೆ ಭಂಗ ಉಂಟಾಗಬಾರದು ಎಂಬ ಕಾರಣಕ್ಕೆ ಪೊಲೀಸ್ ಕಾಯ್ದೆ-1963 ಕಲಂ 35, 36ರ ಅನ್ವಯ ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…