ಗೌರಿ ಗಣೇಶ ಹಬ್ಬ, ಈದ್ ಮಿಲಾದ್‌ಗೆ ಡಿಜೆ ಸಿಸ್ಟಂ ಬಳಕೆ ನಿಷೇಧ….!- ಡಿಜೆ ಬಳಸಿದರೆ ಸೂಕ್ತ ಕಾನೂನು ಕ್ರಮ ಫಿಕ್ಸ್- ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಎಚ್ಚರಿಕೆ

ಅದ್ಧೂರಿ ಗಣೇಶೋತ್ಸವಕ್ಕೆ ದೊಡ್ಡಬಳ್ಳಾಪುರ ಸಜ್ಜಾಗಿದೆ. ಗಣಪನ ಆರಾಧನೆಗೆ ಕೌಂಟ್‌ಡೌನ್ ಶುರುವಾಗಿದೆ. ಈಗಾಗಲೇ ಗಣಪನ ಮೂರ್ತಿಗಳ ಮಾರಾಟ ಜೋರಾಗಿದೆ.

ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್‌ಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಿಸಲಾಗಿದೆ. ಒಂದು ವೇಳೆ ಡಿಜೆ ಸಿಸ್ಟಂ ಬಳಕೆ ಮಾಡುವುದು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಎಚ್ಚರಿಸಿದ್ದಾರೆ….

ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡಿಜೆ ಸಿಸ್ಟಂ ಮಾಲೀಕರ ಸಭೆ ಕರೆದು ಮಾತನಾಡಿದ ಅವರು,‌ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಡಿಜೆ ಸಿಸ್ಟಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ದೊಡ್ಡಬಳ್ಳಾಪುರದಲ್ಲಿ ಡಿಜೆ ಸಿಸ್ಟಂಗಳ ಬಳಕೆಯನ್ನು ನಿಷೇಧಿಸಲಾಗಿದೆ ಎಂದರು.

ಗೌರಿ–ಗಣೇಶ ಹಬ್ಬ, ಈದ್ ಮಿಲಾದ್‌ ಮೆರವಣಿಗೆ ಮತ್ತು ಸಾರ್ವಜನಿಕ ಸಮಾರಂಭಗಳಲ್ಲಿ ಡಿಸ್ಕ್ ಜಾಕಿ (ಡಿಜೆ) ಹಾಗೂ ಸೌಂಡ್ ಸಿಸ್ಟಮ್‌ ಬಳಕೆ ನಿಷೇಧಿಸಿ ಬೆಂಗಳೂರು ಪೊಲೀಸರು ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

‘ಸಾರ್ವಜನಿಕ ಕಾರ್ಯಕ್ರಮದಲ್ಲಿ ಸೌಂಡ್ ಸಿಸ್ಟಮ್ ಮತ್ತು ಡಿಜೆ ನಿರ್ಬಂಧಿಸಿ ಬೆಂಗಳೂರು ಪೊಲೀಸರು ಹೊರಡಿಸಿರುವ ಸುತ್ತೋಲೆಯಲ್ಲಿ ಯಾವುದೇ ಲೋಪಗಳಿಲ್ಲ. ವಸತಿ ಪ್ರದೇಶದಲ್ಲಿ ಹಗಲು ವೇಳೆ 55 ಡೆಸಿಬಲ್ ಮತ್ತು ರಾತ್ರಿ ವೇಳೆ 45 ಡೆಸಿಬಲ್ ಶಬ್ಧದ ಮಟ್ಟ ನಿಗದಿಪಡಿಸಲಾಗಿದೆ. ಆದ್ದರಿಂದ, ಸಾರ್ವಜನಿಕ ಪ್ರದೇಶಗಳಲ್ಲಿ ಹೆಚ್ಚು ಸದ್ದು ಮಾಡುವ ಡಿಜೆ ಮತ್ತು ಸೌಂಡ್ ಸಿಸ್ಟಮ್‌ನ ಬಳಕೆಯನ್ನು ಒಪ್ಪಿಕೊಳ್ಳುವುದು ನ್ಯಾಯಾಲಯಕ್ಕೆ ಕಷ್ಟ ಎಂದು ಹೈಕೋರ್ಟ್ ತಿಳಿಸಿದೆ ಎಂದು ಹೇಳಿದರು.

ಆದ್ದರಿಂದ ಗಣೇಶೋತ್ಸವವು ಶಾಂತಿಯುತವಾಗಿ ನಡೆಯಲು, ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗದಂತೆ ತಡೆಯಲು, ಸಾರ್ವಜನಿಕರು, ವಯಸ್ಕರ, ಮಕ್ಕಳ ಆರೋಗ್ಯ ಹಾಗೂ ನೆಮ್ಮದಿಗೆ ಭಂಗ ಉಂಟಾಗಬಾರದು ಎಂಬ ಕಾರಣಕ್ಕೆ ಪೊಲೀಸ್ ಕಾಯ್ದೆ-1963 ಕಲಂ 35, 36ರ ಅನ್ವಯ ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ  ಮಾಡಲಾಗಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

31 minutes ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

2 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

2 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

2 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

5 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

8 hours ago