ಗೌರಿ ಗಣೇಶ ಹಬ್ಬ, ಈದ್ ಮಿಲಾದ್‌ಗೆ ಡಿಜೆ ಸಿಸ್ಟಂ ಬಳಕೆ ನಿಷೇಧ….!- ಡಿಜೆ ಬಳಸಿದರೆ ಸೂಕ್ತ ಕಾನೂನು ಕ್ರಮ ಫಿಕ್ಸ್- ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಎಚ್ಚರಿಕೆ

ಅದ್ಧೂರಿ ಗಣೇಶೋತ್ಸವಕ್ಕೆ ದೊಡ್ಡಬಳ್ಳಾಪುರ ಸಜ್ಜಾಗಿದೆ. ಗಣಪನ ಆರಾಧನೆಗೆ ಕೌಂಟ್‌ಡೌನ್ ಶುರುವಾಗಿದೆ. ಈಗಾಗಲೇ ಗಣಪನ ಮೂರ್ತಿಗಳ ಮಾರಾಟ ಜೋರಾಗಿದೆ.

ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್‌ಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಿಸಲಾಗಿದೆ. ಒಂದು ವೇಳೆ ಡಿಜೆ ಸಿಸ್ಟಂ ಬಳಕೆ ಮಾಡುವುದು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಎಚ್ಚರಿಸಿದ್ದಾರೆ….

ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡಿಜೆ ಸಿಸ್ಟಂ ಮಾಲೀಕರ ಸಭೆ ಕರೆದು ಮಾತನಾಡಿದ ಅವರು,‌ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಡಿಜೆ ಸಿಸ್ಟಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ದೊಡ್ಡಬಳ್ಳಾಪುರದಲ್ಲಿ ಡಿಜೆ ಸಿಸ್ಟಂಗಳ ಬಳಕೆಯನ್ನು ನಿಷೇಧಿಸಲಾಗಿದೆ ಎಂದರು.

ಗೌರಿ–ಗಣೇಶ ಹಬ್ಬ, ಈದ್ ಮಿಲಾದ್‌ ಮೆರವಣಿಗೆ ಮತ್ತು ಸಾರ್ವಜನಿಕ ಸಮಾರಂಭಗಳಲ್ಲಿ ಡಿಸ್ಕ್ ಜಾಕಿ (ಡಿಜೆ) ಹಾಗೂ ಸೌಂಡ್ ಸಿಸ್ಟಮ್‌ ಬಳಕೆ ನಿಷೇಧಿಸಿ ಬೆಂಗಳೂರು ಪೊಲೀಸರು ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

‘ಸಾರ್ವಜನಿಕ ಕಾರ್ಯಕ್ರಮದಲ್ಲಿ ಸೌಂಡ್ ಸಿಸ್ಟಮ್ ಮತ್ತು ಡಿಜೆ ನಿರ್ಬಂಧಿಸಿ ಬೆಂಗಳೂರು ಪೊಲೀಸರು ಹೊರಡಿಸಿರುವ ಸುತ್ತೋಲೆಯಲ್ಲಿ ಯಾವುದೇ ಲೋಪಗಳಿಲ್ಲ. ವಸತಿ ಪ್ರದೇಶದಲ್ಲಿ ಹಗಲು ವೇಳೆ 55 ಡೆಸಿಬಲ್ ಮತ್ತು ರಾತ್ರಿ ವೇಳೆ 45 ಡೆಸಿಬಲ್ ಶಬ್ಧದ ಮಟ್ಟ ನಿಗದಿಪಡಿಸಲಾಗಿದೆ. ಆದ್ದರಿಂದ, ಸಾರ್ವಜನಿಕ ಪ್ರದೇಶಗಳಲ್ಲಿ ಹೆಚ್ಚು ಸದ್ದು ಮಾಡುವ ಡಿಜೆ ಮತ್ತು ಸೌಂಡ್ ಸಿಸ್ಟಮ್‌ನ ಬಳಕೆಯನ್ನು ಒಪ್ಪಿಕೊಳ್ಳುವುದು ನ್ಯಾಯಾಲಯಕ್ಕೆ ಕಷ್ಟ ಎಂದು ಹೈಕೋರ್ಟ್ ತಿಳಿಸಿದೆ ಎಂದು ಹೇಳಿದರು.

ಆದ್ದರಿಂದ ಗಣೇಶೋತ್ಸವವು ಶಾಂತಿಯುತವಾಗಿ ನಡೆಯಲು, ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗದಂತೆ ತಡೆಯಲು, ಸಾರ್ವಜನಿಕರು, ವಯಸ್ಕರ, ಮಕ್ಕಳ ಆರೋಗ್ಯ ಹಾಗೂ ನೆಮ್ಮದಿಗೆ ಭಂಗ ಉಂಟಾಗಬಾರದು ಎಂಬ ಕಾರಣಕ್ಕೆ ಪೊಲೀಸ್ ಕಾಯ್ದೆ-1963 ಕಲಂ 35, 36ರ ಅನ್ವಯ ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ  ಮಾಡಲಾಗಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

4 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

14 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

14 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

1 day ago