Categories: ರಾಜ್ಯ

ಗೌರಿ ಗಣೇಶ ಹಬ್ಬ: ಕರಾರಸಾ ನಿಗಮದಿಂದ 1,200 ಹೆಚ್ಚುವರಿ ಬಸ್ ಗಳ ವ್ಯವಸ್ಥೆ

ವಾರಾಂತ್ಯ ಸೆ. 15, 16 ಹಾಗೂ ಸೆ.18ರಂದು ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು 1200 ಹೆಚ್ಚುವರಿ ಬಸ್ ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ ಕರಾರಸಾನಿ.

ಅದೇ ರೀತಿ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಬರಲು ಸೆ.18ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು.

ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ,

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.

ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಾಡಲಾಗುವುದು. ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಸಹ ಕಲ್ಪಿಸಲಾಗಿದೆ.

ಪ್ರಯಾಣಿಕರು ಬಸ್‌ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್ ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

ಇ-ಟಿಕೇಟ್ ಬುಕಿಂಗ್‌ನ್ನು Www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.

ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾವುವುದು. ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.

ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಎಂದು ಕರಾರಸಾನಿ ತಿಳಿಸಿದೆ.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

6 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

7 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

16 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago