ವಾರಾಂತ್ಯ ಸೆ. 15, 16 ಹಾಗೂ ಸೆ.18ರಂದು ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು 1200 ಹೆಚ್ಚುವರಿ ಬಸ್ ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ ಕರಾರಸಾನಿ.
ಅದೇ ರೀತಿ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಬರಲು ಸೆ.18ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ,
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.
ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಾಡಲಾಗುವುದು. ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ.
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಸಹ ಕಲ್ಪಿಸಲಾಗಿದೆ.
ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್ ಅಪ್ ಪಾಯಿಂಟ್ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.
ಇ-ಟಿಕೇಟ್ ಬುಕಿಂಗ್ನ್ನು Www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.
ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕಿಂಗ್ ಕೌಂಟರ್ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾವುವುದು. ಹೋಗುವ & ಬರುವ ಪ್ರಯಾಣದ ಟಿಕೇಟ್ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.
ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.
ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್ಸೈಟ್ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಎಂದು ಕರಾರಸಾನಿ ತಿಳಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…