ಗೌರಿ ಗಣೇಶ ಹಬ್ಬ: ಗೌರಿ ಗಣೇಶ ಪ್ರತಿಷ್ಠಾಪನೆ-ವಿಸರ್ಜನೆಗೆ 21 ಷರತ್ತುಗಳ ಪಾಲನೆ ಕಡ್ಡಾಯ: ಪಾಲಿಸದೇ ಇದ್ದರೆ ಕಾನೂನು ಕ್ರಮ: ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ

ಗೌರಿ ಗಣೇಶ ಹಬ್ಬ ಆಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು, ಅಡೆತಡೆಗಳು ಉಂಟಾಗದಂತೆ ಪೊಲೀಸರು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಈ ಕೆಳಕಂಡ ಮಾರ್ಗಸೂಚಿಗಳಿಗೆ ಅನುಗುಣವಾಗಿ ಗೌರಿ ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಮಾಡಬೇಕಾಗಿ ಪೊಲೀಸ್ ಇಲಾಖೆ ಷರತ್ತುಗಳನ್ನ ವಿಧಿಸಿದೆ.

ಷರತ್ತುಗಳ ವಿವರ

1) ಖಾಸಗಿ / ಸರ್ಕಾರಿ ಜಾಗದಲ್ಲಿ ಪ್ರತಿಷ್ಠಾಪನೆ ಮಾಡಲು ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಿಂದ, ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆದು ಸದರಿ ಪತ್ರವನ್ನು ಹಾಜರುಪಡಿಸುವುದು ಮತ್ತು ಗಣೇಶ ಆಚರಣೆಯನ್ನು ಗರಿಷ್ಠ 5 ದಿನಗಳಿಗೆ ಹೆಚ್ಚು ದಿನ ಆಚರಿಸುವಂತಿಲ್ಲ.

2) ಪ್ರತಿಷ್ಠಾಪನೆ ಸ್ಥಳ ಖಾಸಗಿ ಮಾಲೀಕತ್ವಕ್ಕೊಳಪಟ್ಟಲ್ಲಿ ಸ್ಥಳದ ಮಾಲೀಕರಿಂದ ನಿರಾಪೇಕ್ಷಣಾ ಪತ್ರ ಪಡೆಯುವುದು.

3) ರಸ್ತೆ ಸಂಚಾರಕ್ಕೆ ಅಡಚಣೆಯಾಗದಂತೆ ಶಡ್ / ಪೂಜಾ ಸ್ಥಳ ನಿರ್ಮಿಸಿಕೊಳ್ಳುವುದು.

4) ಧ್ವನಿ ವರ್ಧಕ ಅನುಮತಿ ಪತ್ರ ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆದುಕೊಳ್ಳುವುದು.

5) ಬೆಸ್ಕಾಂ ಇಲಾಖೆಯಿಂದ ಅನುಮತಿ ಪತ್ರ ತಪ್ಪದೇ ಪಡೆಯುವುದು.

6) ಪ್ರತಿಷ್ಠಾಪನೆ ದಿನಾಂಕದಿಂದ ವಿಸರ್ಜನೆ ದಿನಾಂಕದವರೆಗೆ ಪ್ರತಿ ದಿನ ಹಗಲು / ರಾತ್ರಿ ಪಾಳೀಯ ಕಾವಲುಗಾರ ಮಂಡಳಿ / ಸಂಘದ ಸದಸ್ಯರ ಹೆಸರು, ವಿವರ, ಮೊಬೈಲ್‌ ಸಂಖ್ಯೆಗಳನ್ನು ನೀಡುವುದು.

7)ಯಾವುದೇ ಮನರಂಜನಾ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಹಾಗೂ ಡಿ.ಜೆ ಸೌಂಡ್ / ಧ್ವನಿವರ್ಧಕ ಬಳಸುವಂತಿಲ್ಲ.

8) ಮೆರವಣಿಗೆ ಮಾರ್ಗಗಳನ್ನು ಅನುಮತಿ ಪಡೆಯುವ ಸಮಯದಲ್ಲಿ ಸೂಚಿಸಿದಂತೆ ಹೋಗತಕ್ಕದ್ದು. ಯಾವುದೇ ಕಾರಣಕ್ಕೂ ಮಾರ್ಗ ಬದಲಾಯಿಸುವಂತಿಲ್ಲ.

9) ಮೆರವಣಿಗೆ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವುದು.

10) ಗಣೇಶ ವಿಸರ್ಜನೆಯನ್ನು ಸಂಜೆ 6:00 ಗಂಟೆಯೊಳಗೆ ಮಾಡತಕ್ಕದ್ದು.

11) ಗಣೇಶ ಮೆರವಣಿಗೆ ಹಾಗೂ ವಿಸರ್ಜನೆ ಸಮಯದಲ್ಲಿ ಮಧ್ಯ ಸೇವನೆ ಮಾಡಿ ಭಾಗವಹಿಸಬಾರದು.

12) ಗಣೇಶ ವಿಸರ್ಜನೆ ಸಮಯದಲ್ಲಿ ನುರಿತ 4 ಜನ ಈಜುಗಾರರನ್ನು ವಿಸರ್ಜಿಸಲು ನೇಮಕಮಾಡತಕ್ಕದ್ದು, ಈ ಈಜುಗಾರರೂ ಸಹ ಮಧ್ಯ ಸೇವನೆ ಮಾಡಬಾರದು.

13) ವಿಸರ್ಜನೆ ಸ್ಥಳ ಯಾವುದೆಂದು ಮುಂಚಿತವಾಗಿ ಗೊತ್ತು ಪಡಿಸತಕ್ಕದ್ದು.

14) ಗೌರಿ-ಗಣೇಶ ಹಬ್ಬದ ಸಲುವಾಗಿ ಯಾವುದೇ ಅನಾಹುತಗಳಿಗೆ ಅವಕಾಶ ನೀಡದಂತೆ ಆಚರಿಸತಕ್ಕದ್ದು

15) ಸ್ವಯಂ ಸೇವಕರ ಗುರುತಿನ ಚೀಟಿ / ಗುರುತಿನ ಯೂನಿಫಾರಂ ಧರಿಸತಕ್ಕದ್ದು.

16) ಕಾನೂನು-ಸುವ್ಯವಸ್ಥೆಗೆ ಯಾವುದೇ ರೀತಿಯಲ್ಲಿ ಭಂಗವನ್ನುಂಟು ಮಾಡದಂತೆ ಆಚರಿಸಬೇಕು.

17) ಗಣೇಶ ಹಬ್ಬವನ್ನು ಸರಳವಾಗಿ ಮತ್ತು ಭಕ್ತಿಪೂರ್ವಕವಾಗಿ ತಮ್ಮ ತಮ್ಮ ಮನೆಗಳಲ್ಲಿ ಹಾಗೂ ಖಾಸಗಿ/ಸರ್ಕಾರಿ/ಸಾರ್ವಜನಿಕ ಬಯಲು ಪ್ರದೇಶದಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸುವುದು.

18) ಗಣೇಶ ಮೂರ್ತಿಯನ್ನು ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಎತ್ತರ ಮೀರದಂತೆ ಹಾಗೂ ಮನೆಗಳಲ್ಲಿ 2 ಅಡಿ ಎತ್ತರ ಮೀರದಂತೆ ಪ್ರತಿಷ್ಠಾಪಿಸುವುದು.

19) ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿರ್ಸಜನೆ ಸಮಯದಲ್ಲಿ ಡಿ.ಜೆ ಗಳನ್ನು ಬಳಸಿ ಯಾವುದೇ ರೀತಿಯ ಮನರಂಜನೆ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ.

20) ಪೊಲೀಸ್‌ ಇಲಾಖೆಯೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕು ಹಾಗೂ ಪೊಲೀಸ್ ಇಲಾಖೆ ಆಗಿಂದ್ದಾಗ್ಗೆ ನೀಡುವ ಸಲಹೆ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.

21) ಯಾವುದಾದರೂ ಮಾಹಿತಿ ಇದ್ದಲ್ಲಿ ಅಥವಾ ತುರ್ತು ಸಂಧರ್ಭದಲ್ಲಿ ಕೂಡಲೇ 112 ಗೆ ಕರೆ ಮಾಡಿ ಮಾಹಿತಿ ನೀಡಲು ಸೂಚಿಸಿದೆ.

ಮೇಲ್ಕಂಡ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಿ ಗೌರಿ-ಗಣೇಶ ಹಬ್ಬವನ್ನು ಭಕ್ತಿಪೂರ್ವಕವಾಗಿ ಮತ್ತು ಶಾಂತಿಯುತವಾಗಿ ಆಚರಿಸಲು ಸೂಚಿಸಲಾಗಿದೆ. ಒಂದು ವೇಳೆ ಷರತ್ತುಗಳ ಉಲ್ಲಂಘನೆ ಕಂಡಬಂದಲ್ಲಿ ಇಲಾಖೆ ವತಿಯಿಂದ ನೀಡಿರುವ ಅನುಮತಿಯನ್ನ ರದ್ದುಪಡಿಸಿ, ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ ನೀಡಲಾಗಿದೆ.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

6 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago