ನಾಡಿನೆಲ್ಲೆಡೆ ಅದ್ಧೂರಿ ಗೌರಿ ಗಣೇಶ ಹಬ್ಬ ಆಚರಣೆ ಹಿನ್ನೆಲೆ, ತಾಲೂಕಿನಲ್ಲಿ ಸಾರ್ವಜನಿಕರು ಶ್ರದ್ಧಾಭಕ್ತಿಯಿಂದ ಹಾಗೂ ಯಾವುದೇ ಆತಂಕವಿಲ್ಲದೆ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ರೂಟ್ ಮಾರ್ಚ್ ನಡೆಸುವ ಮೂಲಕ ಪೊಲೀಸ್ ತಂಡ ಸಾರ್ವಜನಿಕರಿಗೆ ರಕ್ಷಣೆ ಜೊತೆಗೆ ತಾಲೂಕಿನ ಶಾಂತಿ ಸುವ್ಯವಸ್ಥೆ ಕಾಪಾಡುವ ಭರವಸೆ ನೀಡಲಾಯಿತು.
ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಭಕ್ತಿಪೂರ್ವಕವಾಗಿ ನಡೆಸುವ ನಿಟ್ಟಿನಲ್ಲಿ ಈ ವಿಶೇಷ ಪಥ ಸಂಚಲನವನ್ನ ಆಯೋಜನೆ ಮಾಡಲಾಗಿತ್ತು.
ರೂಟ್ ಮಾರ್ಚ್ ನಲ್ಲಿ ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ ಪಿ ರವಿ.ಪಿ ಸೇರಿದಂತೆ ನಗರ, ಗ್ರಾಮಾಂತರ, ಹೊಸಹಳ್ಳಿ, ದೊಡ್ಡಬೆಳವಂಗಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಗಳು, ಸಿಬ್ಬಂದಿ ಶಿಸ್ತಿನಿಂದ ಹೆಜ್ಜೆಹಾಕಿದರು.