ಗೌರಿ ಗಣೇಶ ಹಬ್ಬ: ಪಿ.ಒ.ಪಿ ಗಣೇಶ ವಿಗ್ರಹ ಮಾರಾಟ ಹಾಗೂ ಬಳಕೆ ನಿಷೇಧ- ಹಬ್ಬ ಶಾಂತಿಯುತವಾಗಿ ಆಚರಿಸುವುದಕ್ಕೆ ಎಲ್ಲರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ಪರಿಸರ ಮಾಲಿನ್ಯ ಉಂಟುಮಾಡುವ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಒ.ಪಿ) ನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಮಾರಾಟ ಮಾಡುವುದು ಹಾಗೂ ಬಳಕೆ ಮಾಡುವುದನ್ನು ನಿಷೇಧಿಸಲಾಗಿದೆ. ಸರ್ಕಾರದ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಎಚ್ಚರಿಸಿದರು.

ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಮಟ್ಟದ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ರಾಸಾಯನಿಕ ಬಣ್ಣ ಲೇಪಿತ ಪಿ.ಒ.ಪಿ ಗಣೇಶ ಮೂರ್ತಿಗಳನ್ನು ಬಳಸಬಾರದು. ಗಣೇಶ ಮೂರ್ತಿಯನ್ನು ಕೂರಿಸುವಾಗ ಪರಿಸರ ಸ್ನೇಹಿ ಜೇಡಿಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಮಾತ್ರ ಬಳಸಬೇಕು. ಅದೇರೀತಿ ಗಣೇಶ ವಿಗ್ರಹಗಳನ್ನು ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವಾಗ ಸೂಕ್ತ ಮುಂಜಾಗ್ರತಾ ಅಗತ್ಯ ಕೈಗೊಳ್ಳಬೇಕು. ಸಾಮೂಹಿಕವಾಗಿ ಗುರುತಿಸಿರುವ ಸ್ಥಳಗಳಲ್ಲಿ ವಿಸರ್ಜಿಸುವುದು ಉತ್ತಮ. ಯಾವುದೇ ಅನಾಹುತ-ಹಾನಿ ಸಂಭವಿಸದಂತೆ ಕ್ರಮ ವಹಿಸಬೇಕು ಎಂದರು.

ಹಬ್ಬದ ವೇಳೆ ಧ್ವನಿವರ್ಧಕ ಬಳಕೆ, ಶಾಮಿಯಾನ, ಮೆರವಣಿಗೆ ಮಾರ್ಗ, ಗಣೇಶ ಮೂರ್ತಿ ಕೂರಿಸುವುದು ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅನುಮತಿ ಪಡೆದುಕೊಳ್ಳಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಸಂಚಾರ ದಟ್ಟಣೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಕೂರಿಸಲು ಕಡ್ಡಾಯವಾಗಿ ಪೊಲೀಸ್ ಇಲಾಖೆ, ಬೆಸ್ಕಾಂ ಇಲಾಖೆ, ನಗರಸಭೆ, ಸ್ಥಳೀಯ ಸಂಸ್ಥೆಗಳು, ಅಗ್ನಿಶಾಮಕ ದಳ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆಯಬೇಕು. ಎಲ್ಲಾ ಇಲಾಖೆಗಳಿಂದ ಒಂದೇ ಸ್ಥಳದಲ್ಲಿ ಅನುಮತಿಯನ್ನು ಪಡೆಯುವ ಸಲುವಾಗಿ ತಾಲೂಕು ಮಟ್ಟದಲ್ಲಿ ಸಿಂಗಲ್ ವಿಂಡೋ ಪದ್ಧತಿಯನ್ನು ಅಳವಡಿಸಲಾಗಿದೆ ಎಂದರು. ಸೋಮವಾರದಿಂದ ಅನುಮತಿ ಪಡೆಯಲು ಅವಕಾಶ ಮಾಡಿಕೊಡಲಾಗುವುದು ಎಂದರು.

ಒಟ್ಟಾರೆ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಯಾವುದೇ ರೀತಿ ಕೋಮು ಗಲಭೆಯಾಗದಂತೆ, ಸೌಹಾರ್ದಯುತವಾಗಿ, ಶಾಂತಿಯುತವಾಗಿ, ಭಕ್ತಿಪೂರ್ವಕವಾಗಿ ಆಚರಣೆ ಮಾಡಬೇಕು ಎಂದು ಹೇಳಿದರು.

ನಂತರ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಅವರು ಮಾತನಾಡಿ, ಗಣೇಶ ಹಬ್ಬವನ್ನು ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ಆಚರಣೆ ಮಾಡಲು ಪೊಲೀಸ್ ಇಲಾಖೆ ಸಕಲ ಸಿದ್ಧತೆ ನಡೆಸಲಾಗಿದೆ ಎಂದರು.

ಧ್ವನಿವರ್ಧಕ ಬಳಕೆಗೆ ಪೊಲೀಸ್ ವೃತ್ತ ನಿರೀಕ್ಷಕರಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಸಮಿತಿ ವತಿಯಿಂದ ಸಿಡಿಮದ್ದು ಪಟಾಕಿ ಮುಂತಾದವುಗಳನ್ನು ಸಿಡಿಸುವಾಗ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಜಾಗರೂಕತೆ ವಹಿಸಬೇಕು. ಸಾರ್ವಜನಿಕರ ಓಡಾಟಕ್ಕೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಪೆಂಡಾಲ್ ನಿರ್ಮಿಸಬೇಕು, ಬಲವಂತವಾಗಿ ಚಂದಾ ವಸೂಲಿ ಮಾಡಬಾರದು, ಕಾರ್ಯಕ್ರಮದಲ್ಲಿ ಅಶ್ಲೀಲ ನೃತ್ಯಗಳು ಅಶ್ಲೀಲ ಹಾಡುಗಳಿಗೆ ಅವಕಾಶವಿಲ್ಲ ಎಂದು ತಿಳಿಸಿದರು.

ಗಣೇಶ ಮೂರ್ತಿಗಳ ವಿಸರ್ಜನೆಯ ಸಂದರ್ಭಗಳಲ್ಲಿ ಮದ್ಯ ಸೇವಿಸದ ಯುವಕರನ್ನು ಬಳಸಿಕೊಳ್ಳಬೇಕು. ಮೂರ್ತಿ ಪ್ರತಿಷ್ಠಾಪಿಸುವ ಸ್ಥಳದಲ್ಲಿ ಪೆಂಡಾಲ್ ಗಳನ್ನು ಹಾಕುವಾಗ ಕಡ್ಡಾಯವಾಗಿ ಅಗ್ನಿ ನಿರೋಧಕ ಸಾಮಾಗ್ರಿಗಳನ್ನು ಬಳಸಬೇಕು ಮತ್ತು ಅಗ್ನಿ ಶಾಮಕ ಇಲಾಖೆಯಿಂದ ಪರವಾನಿಗೆ ಪಡೆದುಕೊಳ್ಳಬೇಕೆಂದು ಸಭೆಯಲ್ಲಿ ಮನವಿ ಮಾಡಿದರು.

ಹಬ್ಬ ಆಚರಣೆಗಳು ಶಾಂತಿ, ಸಹಬಾಳ್ವೆ, ಸೌಹಾರ್ದತೆಯಿಂದ ಒಳಗೊಂಡಿರಬೇಕು. ಯಾರೂ ಸಹ ಕಾನೂನಿನ ಎಲ್ಲೆ ಮೀರಬಾರದು. ಒಂದು ವೇಳೆ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಘಟನೆಗಳಲ್ಲಿ ಭಾಗಿಯಾಗುವವರ ಮೇಲೆ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಎಚ್ಚರಿಸಿದರು.

ಈ ವೇಳೆ ಡಿವೈಎಸ್‌ಪಿ ಪಿ.ರವಿ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ನಗರಸಭೆ ಪೌರಾಯುಕ್ತಾ ಕಾರ್ತೀಕೇಶ್ವರ್, ನಗರ ಠಾಣೆ ಇನ್ಸ್ ಪೆಕ್ಟರ್ ಅಮರೇಶ್ ಗೌಡ, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ, ದೊಡ್ಡಬೆಳವಂಗಲ ಠಾಣಾ ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ, ಸೇರಿದಂತೆ ವಿವಿಧ ಠಾಣೆಗಳ ಇನ್ಸ್ ಪೆಕ್ಟರ್ ಗಳು, ಬೆಸ್ಕಾಂ ಅಧಿಕಾರಿಗಳು, ಅಗ್ನಿ ಶಾಮಕ ಇಲಾಖಾಧಿಕಾರಿಗಳು ಹಾಗೂ ಸಾರ್ವಜನಿಕತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

3 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

6 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

6 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

11 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

15 hours ago