ಗೌರಿ -ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬ: ವಿವಿಧ ಠಾಣೆಗಳ ವ್ಯಾಪ್ತಿಯ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸ್ ರೂಟ್ ಮಾರ್ಚ್

ಗೌರಿ -ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿಯುತ ಹಬ್ಬ ಆಚರಣೆ, ಕಾನೂನು ಸುವ್ಯವಸ್ಥೆ ಹಾಗೂ ಪೊಲೀಸ್ ರಕ್ಷಣೆಯ ಕುರಿತಂತೆ ಜನತೆಗೆ ಜಾಗೃತಿ ಮೂಡಿಸುವ ಸಲುವಾಗಿ ದೊಡ್ಡಬಳ್ಳಾಪುರ ಉಪವಿಭಾಗದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸ್ಥಳಗಳಲ್ಲಿ ಇನ್ಸ್ ಪೆಕ್ಟರ್ ಗಳ ನೇತೃತ್ವದಲ್ಲಿಂದು ರೂಟ್ ಮಾರ್ಚ್ ಕೈಗೊಳ್ಳಲಾಯಿತು.

ಗಣೇಶ ಹಬ್ಬದ ಕಾರಣ ದೊಡ್ಡಬಳ್ಳಾಪುರ ನಗರ, ಗ್ರಾಮಾಂತರ,‌ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಸೇರಿದಂತೆ ವಿವಿಧ ಠಾಣಾ ಪೊಲೀಸರು ಸೂಕ್ಷ್ಮ ಸ್ಥಳಗಳಲ್ಲಿ ವಿಶೇಷ ಬಂದೋಬಸ್ತ್ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ಸಮಾಜದ ಶಾಂತಿ ಸೌಹಾರ್ದತೆ ಕಪಾಡುವ ಹಿನ್ನೆಲೆ ಮುಂಜಾಗ್ರತೆಯನ್ನು ಸಹ ವಹಿಸಿದ್ದಾರೆ. ಕೆಲ ಏರಿಯಾಗಳಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟು ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.

ಈಗಾಗಲೇ ಗಣೇಶ ಪ್ರತಿಷ್ಠಾಪನೆಯಿಂದ ಹಿಡಿದು ವಿಸರ್ಜನೆವರೆಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಲಾಗಿದೆ.

Ramesh Babu

Journalist

Recent Posts

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

11 hours ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

12 hours ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

13 hours ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

15 hours ago

ಶಿಷ್ಟಾಚಾರದ ಹೆಸರಲ್ಲಿ ವಾಗ್ಯುದ್ಧ: ಹಾಲಿ ಶಾಸಕ ಧೀರಜ್ ಮುನಿರಾಜು–ಮಾಜಿ ಶಾಸಕ ವೆಂಕಟರಮಣಯ್ಯ ನಡುವೆ ಬಹಿರಂಗ ಕಿತ್ತಾಟ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…

21 hours ago

ನಿಷೇಧದ ನಡುವೆಯೂ ಡಿಜೆ ಬಳಕೆ: ವಾಹನ ವಶ, ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…

1 day ago