Categories: ಕೋಲಾರ

ಗ್ಯಾರಂಟಿಗಳಿಗೆ ಪರಿಶಿಷ್ಟರ ಅನುದಾನ ಬಳಕೆ ಸರ್ಕಾರದ ನಿರ್ಧಾರಕ್ಕೆ ಡಿಎಚ್ಎಸ್ ಆಕ್ರೋಶ

ಕೋಲಾರ: ರಾಜ್ಯದಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ (ಟಿಎಸ್‌ಪಿ) ಹಣವನ್ನು ಸರಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ಬಳಸಿರುವ ನಿರ್ಧಾರವನ್ನು ಖಂಡಿಸಿ ಶುಕ್ರವಾರ ದಲಿತ ಹಕ್ಕುಗಳ ಸಮಿತಿ ನೇತೃತ್ವದಲ್ಲಿ ನಗರದ ತಹಶಿಲ್ದಾರ್ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು,

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಮುಖಂಡ ಕೆ.ವಿ ಮಂಜುನಾಥ್ ಮಾತನಾಡಿ ರಾಜ್ಯದಲ್ಲಿ ದಲಿತರ ಅಭಿವೃದ್ಧಿಗಾಗಿ ಬಳಕೆಯಾಗಬೇಕಾದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿಯ ಸುಮಾರು ಎರಡೂವರೆ ಲಕ್ಷ ಕೋಟಿಗೂ ಹೆಚ್ಚು ಅನುದಾನವನ್ನು ಬೇರೆ ಕಾರ್ಯಕ್ರಮಗಳಿಗೆ ದುರ್ಬಳಕೆ ಮಾಡಿಕೊಂಡಿದ್ದಾರೆ ಇಷ್ಟೂ ಹಣವನ್ನು ಅರ್ಹ ದಲಿತರಿಗೆ ತಲುಪದೆ ಸರಕಾರ ಗ್ಯಾರಂಟಿಗಳ ಉದ್ದೇಶಕ್ಕೆ ಬಳಕೆಯಾಗಿದೆ. ಅದನ್ನು ತಡೆಗಟ್ಟಲೆಂದೇ ರಾಜ್ಯದ ಕಾಂಗ್ರೆಸ್‌ ಸರ್ಕಾರವು ಕಳೆದ ವರ್ಷ ಸಂಬಂಧಿತ ಕಾಯ್ದೆಗೆ ತಿದ್ದುಪಡಿ ತಂದಿದ್ದಾರೆ ಹೇಳಿಕೊಳ್ಳಲು ದಲಿತ ಪರವಾದ ಸರಕಾರ ಆದರೆ ದಲಿತರ ಕೋಟ್ಯಾಂತರ ಹಣವನ್ನು ಅನ್ಯ ಯೋಜನೆಗಳಿಗೆ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಅಧಿಕಾರ ನಡೆಸಿರುವ ಪ್ರತಿಯೊಂದು ಸರ್ಕಾರವು ದಲಿತರನ್ನು ಕೇವಲ ವೋಟ್ ಬ್ಯಾಂಕ್ ಮಾಡಿಕೊಂಡಿದೆ ಪ್ರತಿ ಹಂತದಲ್ಲೂ ದಲಿತರನ್ನು ವಂಚಿಸಿಕೊಂಡು ಬಂದಿದ್ದಾರೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸುವುದನ್ನು ಕೂಡಲೇ ತಡೆಯಬೇಕು ಸರಕಾರವೇ ಜಾರಿಗೆ ತಂದಿದ್ದ ದಲಿತರ ಅಭಿವೃದ್ಧಿ ಉದ್ದೇಶದ ನೀತಿಗಳನ್ನು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಉಲ್ಲಂಘಿಸಿದ್ದಾರೆ ಎಂದು ಸರಕಾರದ ನಡೆಯ ವಿರುದ್ದ ಟೀಕಿಸಿದರು.

ಈ ಸಂದರ್ಭದಲ್ಲಿ ಡಿಹೆಚ್ಎಸ್ ಸಂಘಟನೆಯ ಹಿರಿಯ ಮುಖಂಡ ಹನುಮಂತರಾಯ್ ಮಾತನಾಡಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿಯಲ್ಲಿ 39,121 ಕೋಟಿ ವೆಚ್ಚಕ್ಕೆ ಅನುಮೋದನೆ ನೀಡಿ ಅದರಲ್ಲಿ ಗ್ಯಾರಂಟಿ ಯೋಜನೆಗಳಿಗೆ 14,282 ಕೋಟಿಯನ್ನು ಬಳಸಲಾಗಿದೆ ಅದನ್ನು ಕೇವಲ ಪರಿಶಿಷ್ಟರಿಗೆ ನೀಡಲಾಗುತ್ತದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದರು ಆದರೆ ಇವತ್ತು ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವಂತಹ ವಂಚನೆ ಕೆಲಸವನ್ನು ಮಾಡಿದ್ದಾರೆ ಇದು ರಾಜ್ಯದ ದಲಿತರಿಗೆ ಮಾಡಿದ ದ್ರೋಹವಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆ ಉದ್ದೇಶಿಸಿ ಕೆಜಿಎಫ್ ಪಿಚ್ವಿಕಣ್ಣು ಮಾತನಾಡಿ ರಾಜ್ಯದಲ್ಲಿ ದಲಿತರ ಮೀಸಲಾತಿಯಲ್ಲಿ ಗೆದ್ದ ಸಚಿವರು ಮತ್ತು ಶಾಸಕರು ಸರ್ಕಾರದ ಈ ತೀರ್ಮಾನಕ್ಕೆ ಮೌನವಹಿಸಿರುವುದು ವಿಷಾದನೀಯವಾಗಿದೆ ಸರ್ಕಾರವು ಈ ಹಣವನ್ನು ಅನ್ಯ ಉದ್ದೇಶಕ್ಕೆ ಬಳುವುದನ್ನು ತಕ್ಷಣವೇ ತಡೆಹಿಡಿಯಬೇಕು. 10 ವರ್ಷಗಳಲ್ಲಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿಗೆ ಎಷ್ಟು ಹಣ ನೀಡಲಾಗಿತ್ತು ಮತ್ತು ಅದರಲ್ಲಿ ಈ ಯೋಜನೆಗಳಿಗೇ ಎಷ್ಟು ಹಣ ಬಳಕೆಯಾಗಿದೆ ಎಂಬುದನ್ನು ಪರಿಶೀಲಿಸಲು ಸಮಿತಿ ರಚಿಸಬೇಕು ಹಾಗೂ ಮೌಲ್ಯಮಾಪನ ನಡೆಸಬೇಕು ಎಂದು ಆಗ್ರಹಿಸಿದರು

ಪ್ರತಿಭಟನೆಯ ನೇತೃತ್ವವನ್ನು ದಲಿತ ಹಕ್ಕುಗಳ ಸಮಿತಿಯ ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ಪಿ.ಶ್ರೀನಿವಾಸ್, ಅಶೋಕ್, ಗಂಗಮ್ಮ, ವಿ.ನಾರಾಯಣರೆಡ್ಡಿ, ಯಲ್ಲಪ್ಪ, ವೇಣುಗೋಪಾಲ್, ವಿಜಯಕೃಷ್ಣ, ಭೀಮರಾಜ್, ನವೀನ್ ಕುಮಾರ್, ಮಂಜುಳ, ಟಿ.ಹೆಚ್ ಅಂಜಲಪ್ಪ, ನಾರಾಯಣಪ್ಪ, ಭಾಸ್ಕರನ್, ಮುಂತಾದವರು ಇದ್ದರು

Ramesh Babu

Journalist

Recent Posts

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

5 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

8 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

10 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

12 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

12 hours ago

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

19 hours ago