Categories: ಕೋಲಾರ

ಗ್ಯಾರಂಟಿಗಳಿಗೆ ಪರಿಶಿಷ್ಟರ ಅನುದಾನ ಬಳಕೆ ಸರ್ಕಾರದ ನಿರ್ಧಾರಕ್ಕೆ ಡಿಎಚ್ಎಸ್ ಆಕ್ರೋಶ

ಕೋಲಾರ: ರಾಜ್ಯದಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ (ಟಿಎಸ್‌ಪಿ) ಹಣವನ್ನು ಸರಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ಬಳಸಿರುವ ನಿರ್ಧಾರವನ್ನು ಖಂಡಿಸಿ ಶುಕ್ರವಾರ ದಲಿತ ಹಕ್ಕುಗಳ ಸಮಿತಿ ನೇತೃತ್ವದಲ್ಲಿ ನಗರದ ತಹಶಿಲ್ದಾರ್ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು,

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಮುಖಂಡ ಕೆ.ವಿ ಮಂಜುನಾಥ್ ಮಾತನಾಡಿ ರಾಜ್ಯದಲ್ಲಿ ದಲಿತರ ಅಭಿವೃದ್ಧಿಗಾಗಿ ಬಳಕೆಯಾಗಬೇಕಾದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿಯ ಸುಮಾರು ಎರಡೂವರೆ ಲಕ್ಷ ಕೋಟಿಗೂ ಹೆಚ್ಚು ಅನುದಾನವನ್ನು ಬೇರೆ ಕಾರ್ಯಕ್ರಮಗಳಿಗೆ ದುರ್ಬಳಕೆ ಮಾಡಿಕೊಂಡಿದ್ದಾರೆ ಇಷ್ಟೂ ಹಣವನ್ನು ಅರ್ಹ ದಲಿತರಿಗೆ ತಲುಪದೆ ಸರಕಾರ ಗ್ಯಾರಂಟಿಗಳ ಉದ್ದೇಶಕ್ಕೆ ಬಳಕೆಯಾಗಿದೆ. ಅದನ್ನು ತಡೆಗಟ್ಟಲೆಂದೇ ರಾಜ್ಯದ ಕಾಂಗ್ರೆಸ್‌ ಸರ್ಕಾರವು ಕಳೆದ ವರ್ಷ ಸಂಬಂಧಿತ ಕಾಯ್ದೆಗೆ ತಿದ್ದುಪಡಿ ತಂದಿದ್ದಾರೆ ಹೇಳಿಕೊಳ್ಳಲು ದಲಿತ ಪರವಾದ ಸರಕಾರ ಆದರೆ ದಲಿತರ ಕೋಟ್ಯಾಂತರ ಹಣವನ್ನು ಅನ್ಯ ಯೋಜನೆಗಳಿಗೆ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಅಧಿಕಾರ ನಡೆಸಿರುವ ಪ್ರತಿಯೊಂದು ಸರ್ಕಾರವು ದಲಿತರನ್ನು ಕೇವಲ ವೋಟ್ ಬ್ಯಾಂಕ್ ಮಾಡಿಕೊಂಡಿದೆ ಪ್ರತಿ ಹಂತದಲ್ಲೂ ದಲಿತರನ್ನು ವಂಚಿಸಿಕೊಂಡು ಬಂದಿದ್ದಾರೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸುವುದನ್ನು ಕೂಡಲೇ ತಡೆಯಬೇಕು ಸರಕಾರವೇ ಜಾರಿಗೆ ತಂದಿದ್ದ ದಲಿತರ ಅಭಿವೃದ್ಧಿ ಉದ್ದೇಶದ ನೀತಿಗಳನ್ನು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಉಲ್ಲಂಘಿಸಿದ್ದಾರೆ ಎಂದು ಸರಕಾರದ ನಡೆಯ ವಿರುದ್ದ ಟೀಕಿಸಿದರು.

ಈ ಸಂದರ್ಭದಲ್ಲಿ ಡಿಹೆಚ್ಎಸ್ ಸಂಘಟನೆಯ ಹಿರಿಯ ಮುಖಂಡ ಹನುಮಂತರಾಯ್ ಮಾತನಾಡಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿಯಲ್ಲಿ 39,121 ಕೋಟಿ ವೆಚ್ಚಕ್ಕೆ ಅನುಮೋದನೆ ನೀಡಿ ಅದರಲ್ಲಿ ಗ್ಯಾರಂಟಿ ಯೋಜನೆಗಳಿಗೆ 14,282 ಕೋಟಿಯನ್ನು ಬಳಸಲಾಗಿದೆ ಅದನ್ನು ಕೇವಲ ಪರಿಶಿಷ್ಟರಿಗೆ ನೀಡಲಾಗುತ್ತದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದರು ಆದರೆ ಇವತ್ತು ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವಂತಹ ವಂಚನೆ ಕೆಲಸವನ್ನು ಮಾಡಿದ್ದಾರೆ ಇದು ರಾಜ್ಯದ ದಲಿತರಿಗೆ ಮಾಡಿದ ದ್ರೋಹವಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆ ಉದ್ದೇಶಿಸಿ ಕೆಜಿಎಫ್ ಪಿಚ್ವಿಕಣ್ಣು ಮಾತನಾಡಿ ರಾಜ್ಯದಲ್ಲಿ ದಲಿತರ ಮೀಸಲಾತಿಯಲ್ಲಿ ಗೆದ್ದ ಸಚಿವರು ಮತ್ತು ಶಾಸಕರು ಸರ್ಕಾರದ ಈ ತೀರ್ಮಾನಕ್ಕೆ ಮೌನವಹಿಸಿರುವುದು ವಿಷಾದನೀಯವಾಗಿದೆ ಸರ್ಕಾರವು ಈ ಹಣವನ್ನು ಅನ್ಯ ಉದ್ದೇಶಕ್ಕೆ ಬಳುವುದನ್ನು ತಕ್ಷಣವೇ ತಡೆಹಿಡಿಯಬೇಕು. 10 ವರ್ಷಗಳಲ್ಲಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿಗೆ ಎಷ್ಟು ಹಣ ನೀಡಲಾಗಿತ್ತು ಮತ್ತು ಅದರಲ್ಲಿ ಈ ಯೋಜನೆಗಳಿಗೇ ಎಷ್ಟು ಹಣ ಬಳಕೆಯಾಗಿದೆ ಎಂಬುದನ್ನು ಪರಿಶೀಲಿಸಲು ಸಮಿತಿ ರಚಿಸಬೇಕು ಹಾಗೂ ಮೌಲ್ಯಮಾಪನ ನಡೆಸಬೇಕು ಎಂದು ಆಗ್ರಹಿಸಿದರು

ಪ್ರತಿಭಟನೆಯ ನೇತೃತ್ವವನ್ನು ದಲಿತ ಹಕ್ಕುಗಳ ಸಮಿತಿಯ ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ಪಿ.ಶ್ರೀನಿವಾಸ್, ಅಶೋಕ್, ಗಂಗಮ್ಮ, ವಿ.ನಾರಾಯಣರೆಡ್ಡಿ, ಯಲ್ಲಪ್ಪ, ವೇಣುಗೋಪಾಲ್, ವಿಜಯಕೃಷ್ಣ, ಭೀಮರಾಜ್, ನವೀನ್ ಕುಮಾರ್, ಮಂಜುಳ, ಟಿ.ಹೆಚ್ ಅಂಜಲಪ್ಪ, ನಾರಾಯಣಪ್ಪ, ಭಾಸ್ಕರನ್, ಮುಂತಾದವರು ಇದ್ದರು

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

4 hours ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

14 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

1 day ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

1 day ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

2 days ago