Categories: ಕೋಲಾರ

ಗ್ಯಾರಂಟಿಗಳಿಗೆ ಪರಿಶಿಷ್ಟರ ಅನುದಾನ ಬಳಕೆ ಸರ್ಕಾರದ ನಿರ್ಧಾರಕ್ಕೆ ಡಿಎಚ್ಎಸ್ ಆಕ್ರೋಶ

ಕೋಲಾರ: ರಾಜ್ಯದಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ (ಟಿಎಸ್‌ಪಿ) ಹಣವನ್ನು ಸರಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ಬಳಸಿರುವ ನಿರ್ಧಾರವನ್ನು ಖಂಡಿಸಿ ಶುಕ್ರವಾರ ದಲಿತ ಹಕ್ಕುಗಳ ಸಮಿತಿ ನೇತೃತ್ವದಲ್ಲಿ ನಗರದ ತಹಶಿಲ್ದಾರ್ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು,

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಮುಖಂಡ ಕೆ.ವಿ ಮಂಜುನಾಥ್ ಮಾತನಾಡಿ ರಾಜ್ಯದಲ್ಲಿ ದಲಿತರ ಅಭಿವೃದ್ಧಿಗಾಗಿ ಬಳಕೆಯಾಗಬೇಕಾದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿಯ ಸುಮಾರು ಎರಡೂವರೆ ಲಕ್ಷ ಕೋಟಿಗೂ ಹೆಚ್ಚು ಅನುದಾನವನ್ನು ಬೇರೆ ಕಾರ್ಯಕ್ರಮಗಳಿಗೆ ದುರ್ಬಳಕೆ ಮಾಡಿಕೊಂಡಿದ್ದಾರೆ ಇಷ್ಟೂ ಹಣವನ್ನು ಅರ್ಹ ದಲಿತರಿಗೆ ತಲುಪದೆ ಸರಕಾರ ಗ್ಯಾರಂಟಿಗಳ ಉದ್ದೇಶಕ್ಕೆ ಬಳಕೆಯಾಗಿದೆ. ಅದನ್ನು ತಡೆಗಟ್ಟಲೆಂದೇ ರಾಜ್ಯದ ಕಾಂಗ್ರೆಸ್‌ ಸರ್ಕಾರವು ಕಳೆದ ವರ್ಷ ಸಂಬಂಧಿತ ಕಾಯ್ದೆಗೆ ತಿದ್ದುಪಡಿ ತಂದಿದ್ದಾರೆ ಹೇಳಿಕೊಳ್ಳಲು ದಲಿತ ಪರವಾದ ಸರಕಾರ ಆದರೆ ದಲಿತರ ಕೋಟ್ಯಾಂತರ ಹಣವನ್ನು ಅನ್ಯ ಯೋಜನೆಗಳಿಗೆ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಅಧಿಕಾರ ನಡೆಸಿರುವ ಪ್ರತಿಯೊಂದು ಸರ್ಕಾರವು ದಲಿತರನ್ನು ಕೇವಲ ವೋಟ್ ಬ್ಯಾಂಕ್ ಮಾಡಿಕೊಂಡಿದೆ ಪ್ರತಿ ಹಂತದಲ್ಲೂ ದಲಿತರನ್ನು ವಂಚಿಸಿಕೊಂಡು ಬಂದಿದ್ದಾರೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸುವುದನ್ನು ಕೂಡಲೇ ತಡೆಯಬೇಕು ಸರಕಾರವೇ ಜಾರಿಗೆ ತಂದಿದ್ದ ದಲಿತರ ಅಭಿವೃದ್ಧಿ ಉದ್ದೇಶದ ನೀತಿಗಳನ್ನು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಉಲ್ಲಂಘಿಸಿದ್ದಾರೆ ಎಂದು ಸರಕಾರದ ನಡೆಯ ವಿರುದ್ದ ಟೀಕಿಸಿದರು.

ಈ ಸಂದರ್ಭದಲ್ಲಿ ಡಿಹೆಚ್ಎಸ್ ಸಂಘಟನೆಯ ಹಿರಿಯ ಮುಖಂಡ ಹನುಮಂತರಾಯ್ ಮಾತನಾಡಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿಯಲ್ಲಿ 39,121 ಕೋಟಿ ವೆಚ್ಚಕ್ಕೆ ಅನುಮೋದನೆ ನೀಡಿ ಅದರಲ್ಲಿ ಗ್ಯಾರಂಟಿ ಯೋಜನೆಗಳಿಗೆ 14,282 ಕೋಟಿಯನ್ನು ಬಳಸಲಾಗಿದೆ ಅದನ್ನು ಕೇವಲ ಪರಿಶಿಷ್ಟರಿಗೆ ನೀಡಲಾಗುತ್ತದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದರು ಆದರೆ ಇವತ್ತು ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವಂತಹ ವಂಚನೆ ಕೆಲಸವನ್ನು ಮಾಡಿದ್ದಾರೆ ಇದು ರಾಜ್ಯದ ದಲಿತರಿಗೆ ಮಾಡಿದ ದ್ರೋಹವಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆ ಉದ್ದೇಶಿಸಿ ಕೆಜಿಎಫ್ ಪಿಚ್ವಿಕಣ್ಣು ಮಾತನಾಡಿ ರಾಜ್ಯದಲ್ಲಿ ದಲಿತರ ಮೀಸಲಾತಿಯಲ್ಲಿ ಗೆದ್ದ ಸಚಿವರು ಮತ್ತು ಶಾಸಕರು ಸರ್ಕಾರದ ಈ ತೀರ್ಮಾನಕ್ಕೆ ಮೌನವಹಿಸಿರುವುದು ವಿಷಾದನೀಯವಾಗಿದೆ ಸರ್ಕಾರವು ಈ ಹಣವನ್ನು ಅನ್ಯ ಉದ್ದೇಶಕ್ಕೆ ಬಳುವುದನ್ನು ತಕ್ಷಣವೇ ತಡೆಹಿಡಿಯಬೇಕು. 10 ವರ್ಷಗಳಲ್ಲಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿಗೆ ಎಷ್ಟು ಹಣ ನೀಡಲಾಗಿತ್ತು ಮತ್ತು ಅದರಲ್ಲಿ ಈ ಯೋಜನೆಗಳಿಗೇ ಎಷ್ಟು ಹಣ ಬಳಕೆಯಾಗಿದೆ ಎಂಬುದನ್ನು ಪರಿಶೀಲಿಸಲು ಸಮಿತಿ ರಚಿಸಬೇಕು ಹಾಗೂ ಮೌಲ್ಯಮಾಪನ ನಡೆಸಬೇಕು ಎಂದು ಆಗ್ರಹಿಸಿದರು

ಪ್ರತಿಭಟನೆಯ ನೇತೃತ್ವವನ್ನು ದಲಿತ ಹಕ್ಕುಗಳ ಸಮಿತಿಯ ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ಪಿ.ಶ್ರೀನಿವಾಸ್, ಅಶೋಕ್, ಗಂಗಮ್ಮ, ವಿ.ನಾರಾಯಣರೆಡ್ಡಿ, ಯಲ್ಲಪ್ಪ, ವೇಣುಗೋಪಾಲ್, ವಿಜಯಕೃಷ್ಣ, ಭೀಮರಾಜ್, ನವೀನ್ ಕುಮಾರ್, ಮಂಜುಳ, ಟಿ.ಹೆಚ್ ಅಂಜಲಪ್ಪ, ನಾರಾಯಣಪ್ಪ, ಭಾಸ್ಕರನ್, ಮುಂತಾದವರು ಇದ್ದರು

Ramesh Babu

Journalist

Recent Posts

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

52 minutes ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

59 minutes ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

3 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

6 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

7 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

10 hours ago