‘ಗ್ಯಾರಂಟಿಗಳಿಗೆ ಪ್ರಚಾರ ಜಾಸ್ತಿ, ಅಭಿವೃದ್ದಿಗೆ ಹಣ ನಾಸ್ತಿ’- ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್ ಡಿಕೆ ಕಿಡಿ

ಪೊಳ್ಳು ಗ್ಯಾರಂಟಿಗಳ ಮೂಲಕ ದೀಪಾವಳಿ ಹೊತ್ತಿಗೆ ರಾಜ್ಯವನ್ನು ದಿವಾಳಿ ಅಂಚಿಗೆ ನೂಕಿರುವ ಕಾಂಗ್ರೆಸ್ ಸರಕಾರ, ರೈತರ ಮೇಲೆಯೂ ವಕ್ರದೃಷ್ಟಿ ಬೀರಿದೆ. ಬರ, ವಿದ್ಯುತ್ ಕ್ಷಾಮದಿಂದ ಕಂಗೆಟ್ಟು ಹೋಗಿರುವ ಅನ್ನದಾತರಿಗೆ ಮತ್ತೊಂದು ಬರೆ ಎಳೆದು, ತಾನು ರೈತದ್ರೋಹಿ ಎಂದು ಸಾಬೀತು ಮಾಡಿಕೊಂಡಿದೆ ಎಂದು ಕಾಂಗ್ರೆಸ್ ಸರ್ಕಾರ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

‘ಗ್ಯಾರಂಟಿಗಳಿಗೆ ಪ್ರಚಾರ ಜಾಸ್ತಿ, ಅಭಿವೃದ್ದಿಗೆ ಹಣ ನಾಸ್ತಿ’ ಎನ್ನುವ ಪರಿಸ್ಥಿತಿ ರಾಜ್ಯದಲ್ಲಿ ತಲೆದೋರಿದೆ. ರೈತರಿಗೆ ಹೊಸ ವಿದ್ಯುತ್ ಸಂಪರ್ಕಕ್ಕೆ ಕೊಡುತ್ತಿದ್ದ ಸಬ್ಸಿಡಿಗೆ ಕಾಂಗ್ರೆಸ್ ಸರಕಾರ ಕತ್ತರಿ ಹಾಕಿದೆ ಎನ್ನುವ ಸರಕಾರಿ ಆದೇಶ ನೋಡಿ ನನಗೆ ತೀವ್ರ ಆಘಾತ ಉಂಟಾಯಿತು. ಕೇಡುಗಾಲಕ್ಕೆ ಕೋಳಿಯು ಮೊಟ್ಟೆ ಬದಲು ಮರಿಯನ್ನೇ ಹಾಕಿತು ಎನ್ನುವ ಹಾಗೆ ಕಾಂಗ್ರೆಸ್ ಸರಕಾರ ಎರಡು ಕೈಗಳಿಂದಲೂ ರೈತರ ಮೇಲೆ ಮಣ್ಣು ಹಾಕುತ್ತಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುತ್ತಿದ್ದ ಅನ್ನದಾತರಿಗೆ ಇದುವರೆಗೆ ಟ್ರಾನ್ಸ್ ಫಾರ್ಮ್, ವಿದ್ಯುತ್ ಕಂಬ, ಅಲ್ಯುಮಿನಿಯಂ ತಂತಿ ಇತ್ಯಾದಿಗಳಿಗೆ ಸರಕಾರವೇ ಸಬ್ಸಿಡಿ ಕೊಡುತ್ತಿತ್ತು. ಚುನಾವಣೆಯಲ್ಲಿ ಮತಕ್ಕಾಗಿ ಯಾವ ಹಸ್ತ ರೈತರ ಪಾದ ಮುಟ್ಟಿ ಮತಯಾಚನೆ ಮಾಡಿತೋ, ಈಗ ಅದೇ ಹಸ್ತ ಅಧಿಕಾರ ಸಿಕ್ಕ ಮೇಲೆ ಅನ್ನದಾತನ ಕೊರಳಿಗೆ ಹಗ್ಗ ಬಿಗಿಯತೊಡಗಿದೆ! ಇದಕ್ಕಿಂತ ಪೈಶಾಚಿಕ ಮನಃಸ್ಥಿತಿ ಮತ್ತೊಂದು ಇರಲು ಸಾಧ್ಯವೇ? ಎಂದು ಹರಿಹಾಯ್ದಿದ್ದಾರೆ.

ತಮ್ಮ ಪಾಲಿನ 24,000 ರೂಪಾಯಿ ಭರಿಸುವುದಕ್ಕೇ ಇನ್ನಿಲ್ಲದ ಕಡುಕಷ್ಟ ಅನುಭವಿಸುತ್ತಿರುವ ರೈತರು, ಇನ್ನು ಮುಂದೆ ಪೂರ್ಣ ವೆಚ್ಚ ಭರಿಸಬೇಕು ಎಂದು ಸರಕಾರ ಆದೇಶ ಹೊರಡಿಸಿದೆ. ಕಟುಕರ ಕೈಗೆ ಕರ್ನಾಟಕ ಸಿಕ್ಕಿ ನರಳುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ಪುರಾವೆ ಬೇಕೆ? ಅಧಿಕಾರಕ್ಕೆ ಬಂದಾಗಿನಿಂದ ಸಮಾಧಿ ಸ್ಥಿತಿಯಲ್ಲಿರುವ ಈ ಸರಕಾರವು, ಇಂಥ ಜನದ್ರೋಹಿ ಕೃತ್ಯಗಳಲ್ಲಿ ಬಹಳ ಕ್ರಿಯಾಶೀಲವಾಗಿದೆ! ಎಂದು ಗುಡುಗಿದ್ದಾರೆ.

ಸರಕಾರ ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಲೇಬೇಕು. ಮೊದಲಿನಂತೆ ರೈತರಿಗೆ ಸಬ್ಸಿಡಿ ಕೊಡಬೇಕು. ಒಂದು ವೇಳೆ ಆದೇಶ ವಾಪಸ್ ಪಡೆಯದಿದ್ದರೆ ಜೆಡಿಎಸ್ ಪಕ್ಷ ಸದನದ ಒಳಗೆ, ಹೊರಗೆ ಹೋರಾಟಕ್ಕೆ ಇಳಿಯುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ಬಂಡವಾಳಶಾಹಿ ಮನಃಸ್ಥಿತಿಯ ಲಾಭಕೋರ ಪಕ್ಷ. ಕಸಾಯಿ ಸಂಸ್ಕೃತಿಯ ಕಟುಕ ಪಕ್ಷ. ಅದಕ್ಕೆ ಕರುಣೆ, ದಯೆ, ದಾಕ್ಷಿಣ್ಯ ಎನ್ನುವುದು ಇರುವುದಿಲ್ಲ. ಇಡೀ ಕರ್ನಾಟಕವನ್ನೇ ಎಟಿಎಂ ಮಾಡಿಕೊಂಡು ಲೂಟಿ ಮಾಡುತ್ತಿರುವ ಕಾಂಗ್ರೆಸ್ ಸರಕಾರ, ಈಗ ರೈತರನ್ನೂ ಕೊಳ್ಳೆ ಹೊಡೆಯುತ್ತಿದೆ. ಒಂದು ಕೈಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ರಾವಣರೂಪಿ ಕಾಂಗ್ರೆಸ್ ಸರಕಾರದ ಪಾಪದ ಕೊಡ ತುಂಬಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

7 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

8 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

10 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

10 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

11 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

12 hours ago