‘ಗ್ಯಾರಂಟಿಗಳಿಗೆ ಪ್ರಚಾರ ಜಾಸ್ತಿ, ಅಭಿವೃದ್ದಿಗೆ ಹಣ ನಾಸ್ತಿ’- ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್ ಡಿಕೆ ಕಿಡಿ

ಪೊಳ್ಳು ಗ್ಯಾರಂಟಿಗಳ ಮೂಲಕ ದೀಪಾವಳಿ ಹೊತ್ತಿಗೆ ರಾಜ್ಯವನ್ನು ದಿವಾಳಿ ಅಂಚಿಗೆ ನೂಕಿರುವ ಕಾಂಗ್ರೆಸ್ ಸರಕಾರ, ರೈತರ ಮೇಲೆಯೂ ವಕ್ರದೃಷ್ಟಿ ಬೀರಿದೆ. ಬರ, ವಿದ್ಯುತ್ ಕ್ಷಾಮದಿಂದ ಕಂಗೆಟ್ಟು ಹೋಗಿರುವ ಅನ್ನದಾತರಿಗೆ ಮತ್ತೊಂದು ಬರೆ ಎಳೆದು, ತಾನು ರೈತದ್ರೋಹಿ ಎಂದು ಸಾಬೀತು ಮಾಡಿಕೊಂಡಿದೆ ಎಂದು ಕಾಂಗ್ರೆಸ್ ಸರ್ಕಾರ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

‘ಗ್ಯಾರಂಟಿಗಳಿಗೆ ಪ್ರಚಾರ ಜಾಸ್ತಿ, ಅಭಿವೃದ್ದಿಗೆ ಹಣ ನಾಸ್ತಿ’ ಎನ್ನುವ ಪರಿಸ್ಥಿತಿ ರಾಜ್ಯದಲ್ಲಿ ತಲೆದೋರಿದೆ. ರೈತರಿಗೆ ಹೊಸ ವಿದ್ಯುತ್ ಸಂಪರ್ಕಕ್ಕೆ ಕೊಡುತ್ತಿದ್ದ ಸಬ್ಸಿಡಿಗೆ ಕಾಂಗ್ರೆಸ್ ಸರಕಾರ ಕತ್ತರಿ ಹಾಕಿದೆ ಎನ್ನುವ ಸರಕಾರಿ ಆದೇಶ ನೋಡಿ ನನಗೆ ತೀವ್ರ ಆಘಾತ ಉಂಟಾಯಿತು. ಕೇಡುಗಾಲಕ್ಕೆ ಕೋಳಿಯು ಮೊಟ್ಟೆ ಬದಲು ಮರಿಯನ್ನೇ ಹಾಕಿತು ಎನ್ನುವ ಹಾಗೆ ಕಾಂಗ್ರೆಸ್ ಸರಕಾರ ಎರಡು ಕೈಗಳಿಂದಲೂ ರೈತರ ಮೇಲೆ ಮಣ್ಣು ಹಾಕುತ್ತಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುತ್ತಿದ್ದ ಅನ್ನದಾತರಿಗೆ ಇದುವರೆಗೆ ಟ್ರಾನ್ಸ್ ಫಾರ್ಮ್, ವಿದ್ಯುತ್ ಕಂಬ, ಅಲ್ಯುಮಿನಿಯಂ ತಂತಿ ಇತ್ಯಾದಿಗಳಿಗೆ ಸರಕಾರವೇ ಸಬ್ಸಿಡಿ ಕೊಡುತ್ತಿತ್ತು. ಚುನಾವಣೆಯಲ್ಲಿ ಮತಕ್ಕಾಗಿ ಯಾವ ಹಸ್ತ ರೈತರ ಪಾದ ಮುಟ್ಟಿ ಮತಯಾಚನೆ ಮಾಡಿತೋ, ಈಗ ಅದೇ ಹಸ್ತ ಅಧಿಕಾರ ಸಿಕ್ಕ ಮೇಲೆ ಅನ್ನದಾತನ ಕೊರಳಿಗೆ ಹಗ್ಗ ಬಿಗಿಯತೊಡಗಿದೆ! ಇದಕ್ಕಿಂತ ಪೈಶಾಚಿಕ ಮನಃಸ್ಥಿತಿ ಮತ್ತೊಂದು ಇರಲು ಸಾಧ್ಯವೇ? ಎಂದು ಹರಿಹಾಯ್ದಿದ್ದಾರೆ.

ತಮ್ಮ ಪಾಲಿನ 24,000 ರೂಪಾಯಿ ಭರಿಸುವುದಕ್ಕೇ ಇನ್ನಿಲ್ಲದ ಕಡುಕಷ್ಟ ಅನುಭವಿಸುತ್ತಿರುವ ರೈತರು, ಇನ್ನು ಮುಂದೆ ಪೂರ್ಣ ವೆಚ್ಚ ಭರಿಸಬೇಕು ಎಂದು ಸರಕಾರ ಆದೇಶ ಹೊರಡಿಸಿದೆ. ಕಟುಕರ ಕೈಗೆ ಕರ್ನಾಟಕ ಸಿಕ್ಕಿ ನರಳುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ಪುರಾವೆ ಬೇಕೆ? ಅಧಿಕಾರಕ್ಕೆ ಬಂದಾಗಿನಿಂದ ಸಮಾಧಿ ಸ್ಥಿತಿಯಲ್ಲಿರುವ ಈ ಸರಕಾರವು, ಇಂಥ ಜನದ್ರೋಹಿ ಕೃತ್ಯಗಳಲ್ಲಿ ಬಹಳ ಕ್ರಿಯಾಶೀಲವಾಗಿದೆ! ಎಂದು ಗುಡುಗಿದ್ದಾರೆ.

ಸರಕಾರ ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಲೇಬೇಕು. ಮೊದಲಿನಂತೆ ರೈತರಿಗೆ ಸಬ್ಸಿಡಿ ಕೊಡಬೇಕು. ಒಂದು ವೇಳೆ ಆದೇಶ ವಾಪಸ್ ಪಡೆಯದಿದ್ದರೆ ಜೆಡಿಎಸ್ ಪಕ್ಷ ಸದನದ ಒಳಗೆ, ಹೊರಗೆ ಹೋರಾಟಕ್ಕೆ ಇಳಿಯುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ಬಂಡವಾಳಶಾಹಿ ಮನಃಸ್ಥಿತಿಯ ಲಾಭಕೋರ ಪಕ್ಷ. ಕಸಾಯಿ ಸಂಸ್ಕೃತಿಯ ಕಟುಕ ಪಕ್ಷ. ಅದಕ್ಕೆ ಕರುಣೆ, ದಯೆ, ದಾಕ್ಷಿಣ್ಯ ಎನ್ನುವುದು ಇರುವುದಿಲ್ಲ. ಇಡೀ ಕರ್ನಾಟಕವನ್ನೇ ಎಟಿಎಂ ಮಾಡಿಕೊಂಡು ಲೂಟಿ ಮಾಡುತ್ತಿರುವ ಕಾಂಗ್ರೆಸ್ ಸರಕಾರ, ಈಗ ರೈತರನ್ನೂ ಕೊಳ್ಳೆ ಹೊಡೆಯುತ್ತಿದೆ. ಒಂದು ಕೈಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ರಾವಣರೂಪಿ ಕಾಂಗ್ರೆಸ್ ಸರಕಾರದ ಪಾಪದ ಕೊಡ ತುಂಬಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

39 minutes ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

59 minutes ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

4 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

4 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

13 hours ago