‘ಗ್ಯಾರಂಟಿಗಳಿಗೆ ಪ್ರಚಾರ ಜಾಸ್ತಿ, ಅಭಿವೃದ್ದಿಗೆ ಹಣ ನಾಸ್ತಿ’- ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್ ಡಿಕೆ ಕಿಡಿ

ಪೊಳ್ಳು ಗ್ಯಾರಂಟಿಗಳ ಮೂಲಕ ದೀಪಾವಳಿ ಹೊತ್ತಿಗೆ ರಾಜ್ಯವನ್ನು ದಿವಾಳಿ ಅಂಚಿಗೆ ನೂಕಿರುವ ಕಾಂಗ್ರೆಸ್ ಸರಕಾರ, ರೈತರ ಮೇಲೆಯೂ ವಕ್ರದೃಷ್ಟಿ ಬೀರಿದೆ. ಬರ, ವಿದ್ಯುತ್ ಕ್ಷಾಮದಿಂದ ಕಂಗೆಟ್ಟು ಹೋಗಿರುವ ಅನ್ನದಾತರಿಗೆ ಮತ್ತೊಂದು ಬರೆ ಎಳೆದು, ತಾನು ರೈತದ್ರೋಹಿ ಎಂದು ಸಾಬೀತು ಮಾಡಿಕೊಂಡಿದೆ ಎಂದು ಕಾಂಗ್ರೆಸ್ ಸರ್ಕಾರ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

‘ಗ್ಯಾರಂಟಿಗಳಿಗೆ ಪ್ರಚಾರ ಜಾಸ್ತಿ, ಅಭಿವೃದ್ದಿಗೆ ಹಣ ನಾಸ್ತಿ’ ಎನ್ನುವ ಪರಿಸ್ಥಿತಿ ರಾಜ್ಯದಲ್ಲಿ ತಲೆದೋರಿದೆ. ರೈತರಿಗೆ ಹೊಸ ವಿದ್ಯುತ್ ಸಂಪರ್ಕಕ್ಕೆ ಕೊಡುತ್ತಿದ್ದ ಸಬ್ಸಿಡಿಗೆ ಕಾಂಗ್ರೆಸ್ ಸರಕಾರ ಕತ್ತರಿ ಹಾಕಿದೆ ಎನ್ನುವ ಸರಕಾರಿ ಆದೇಶ ನೋಡಿ ನನಗೆ ತೀವ್ರ ಆಘಾತ ಉಂಟಾಯಿತು. ಕೇಡುಗಾಲಕ್ಕೆ ಕೋಳಿಯು ಮೊಟ್ಟೆ ಬದಲು ಮರಿಯನ್ನೇ ಹಾಕಿತು ಎನ್ನುವ ಹಾಗೆ ಕಾಂಗ್ರೆಸ್ ಸರಕಾರ ಎರಡು ಕೈಗಳಿಂದಲೂ ರೈತರ ಮೇಲೆ ಮಣ್ಣು ಹಾಕುತ್ತಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುತ್ತಿದ್ದ ಅನ್ನದಾತರಿಗೆ ಇದುವರೆಗೆ ಟ್ರಾನ್ಸ್ ಫಾರ್ಮ್, ವಿದ್ಯುತ್ ಕಂಬ, ಅಲ್ಯುಮಿನಿಯಂ ತಂತಿ ಇತ್ಯಾದಿಗಳಿಗೆ ಸರಕಾರವೇ ಸಬ್ಸಿಡಿ ಕೊಡುತ್ತಿತ್ತು. ಚುನಾವಣೆಯಲ್ಲಿ ಮತಕ್ಕಾಗಿ ಯಾವ ಹಸ್ತ ರೈತರ ಪಾದ ಮುಟ್ಟಿ ಮತಯಾಚನೆ ಮಾಡಿತೋ, ಈಗ ಅದೇ ಹಸ್ತ ಅಧಿಕಾರ ಸಿಕ್ಕ ಮೇಲೆ ಅನ್ನದಾತನ ಕೊರಳಿಗೆ ಹಗ್ಗ ಬಿಗಿಯತೊಡಗಿದೆ! ಇದಕ್ಕಿಂತ ಪೈಶಾಚಿಕ ಮನಃಸ್ಥಿತಿ ಮತ್ತೊಂದು ಇರಲು ಸಾಧ್ಯವೇ? ಎಂದು ಹರಿಹಾಯ್ದಿದ್ದಾರೆ.

ತಮ್ಮ ಪಾಲಿನ 24,000 ರೂಪಾಯಿ ಭರಿಸುವುದಕ್ಕೇ ಇನ್ನಿಲ್ಲದ ಕಡುಕಷ್ಟ ಅನುಭವಿಸುತ್ತಿರುವ ರೈತರು, ಇನ್ನು ಮುಂದೆ ಪೂರ್ಣ ವೆಚ್ಚ ಭರಿಸಬೇಕು ಎಂದು ಸರಕಾರ ಆದೇಶ ಹೊರಡಿಸಿದೆ. ಕಟುಕರ ಕೈಗೆ ಕರ್ನಾಟಕ ಸಿಕ್ಕಿ ನರಳುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ಪುರಾವೆ ಬೇಕೆ? ಅಧಿಕಾರಕ್ಕೆ ಬಂದಾಗಿನಿಂದ ಸಮಾಧಿ ಸ್ಥಿತಿಯಲ್ಲಿರುವ ಈ ಸರಕಾರವು, ಇಂಥ ಜನದ್ರೋಹಿ ಕೃತ್ಯಗಳಲ್ಲಿ ಬಹಳ ಕ್ರಿಯಾಶೀಲವಾಗಿದೆ! ಎಂದು ಗುಡುಗಿದ್ದಾರೆ.

ಸರಕಾರ ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಲೇಬೇಕು. ಮೊದಲಿನಂತೆ ರೈತರಿಗೆ ಸಬ್ಸಿಡಿ ಕೊಡಬೇಕು. ಒಂದು ವೇಳೆ ಆದೇಶ ವಾಪಸ್ ಪಡೆಯದಿದ್ದರೆ ಜೆಡಿಎಸ್ ಪಕ್ಷ ಸದನದ ಒಳಗೆ, ಹೊರಗೆ ಹೋರಾಟಕ್ಕೆ ಇಳಿಯುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ಬಂಡವಾಳಶಾಹಿ ಮನಃಸ್ಥಿತಿಯ ಲಾಭಕೋರ ಪಕ್ಷ. ಕಸಾಯಿ ಸಂಸ್ಕೃತಿಯ ಕಟುಕ ಪಕ್ಷ. ಅದಕ್ಕೆ ಕರುಣೆ, ದಯೆ, ದಾಕ್ಷಿಣ್ಯ ಎನ್ನುವುದು ಇರುವುದಿಲ್ಲ. ಇಡೀ ಕರ್ನಾಟಕವನ್ನೇ ಎಟಿಎಂ ಮಾಡಿಕೊಂಡು ಲೂಟಿ ಮಾಡುತ್ತಿರುವ ಕಾಂಗ್ರೆಸ್ ಸರಕಾರ, ಈಗ ರೈತರನ್ನೂ ಕೊಳ್ಳೆ ಹೊಡೆಯುತ್ತಿದೆ. ಒಂದು ಕೈಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ರಾವಣರೂಪಿ ಕಾಂಗ್ರೆಸ್ ಸರಕಾರದ ಪಾಪದ ಕೊಡ ತುಂಬಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

19 minutes ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

11 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

12 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

12 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

15 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

18 hours ago