‘ಗ್ಯಾರಂಟಿಗಳಿಗೆ ಪ್ರಚಾರ ಜಾಸ್ತಿ, ಅಭಿವೃದ್ದಿಗೆ ಹಣ ನಾಸ್ತಿ’- ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್ ಡಿಕೆ ಕಿಡಿ

ಪೊಳ್ಳು ಗ್ಯಾರಂಟಿಗಳ ಮೂಲಕ ದೀಪಾವಳಿ ಹೊತ್ತಿಗೆ ರಾಜ್ಯವನ್ನು ದಿವಾಳಿ ಅಂಚಿಗೆ ನೂಕಿರುವ ಕಾಂಗ್ರೆಸ್ ಸರಕಾರ, ರೈತರ ಮೇಲೆಯೂ ವಕ್ರದೃಷ್ಟಿ ಬೀರಿದೆ. ಬರ, ವಿದ್ಯುತ್ ಕ್ಷಾಮದಿಂದ ಕಂಗೆಟ್ಟು ಹೋಗಿರುವ ಅನ್ನದಾತರಿಗೆ ಮತ್ತೊಂದು ಬರೆ ಎಳೆದು, ತಾನು ರೈತದ್ರೋಹಿ ಎಂದು ಸಾಬೀತು ಮಾಡಿಕೊಂಡಿದೆ ಎಂದು ಕಾಂಗ್ರೆಸ್ ಸರ್ಕಾರ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

‘ಗ್ಯಾರಂಟಿಗಳಿಗೆ ಪ್ರಚಾರ ಜಾಸ್ತಿ, ಅಭಿವೃದ್ದಿಗೆ ಹಣ ನಾಸ್ತಿ’ ಎನ್ನುವ ಪರಿಸ್ಥಿತಿ ರಾಜ್ಯದಲ್ಲಿ ತಲೆದೋರಿದೆ. ರೈತರಿಗೆ ಹೊಸ ವಿದ್ಯುತ್ ಸಂಪರ್ಕಕ್ಕೆ ಕೊಡುತ್ತಿದ್ದ ಸಬ್ಸಿಡಿಗೆ ಕಾಂಗ್ರೆಸ್ ಸರಕಾರ ಕತ್ತರಿ ಹಾಕಿದೆ ಎನ್ನುವ ಸರಕಾರಿ ಆದೇಶ ನೋಡಿ ನನಗೆ ತೀವ್ರ ಆಘಾತ ಉಂಟಾಯಿತು. ಕೇಡುಗಾಲಕ್ಕೆ ಕೋಳಿಯು ಮೊಟ್ಟೆ ಬದಲು ಮರಿಯನ್ನೇ ಹಾಕಿತು ಎನ್ನುವ ಹಾಗೆ ಕಾಂಗ್ರೆಸ್ ಸರಕಾರ ಎರಡು ಕೈಗಳಿಂದಲೂ ರೈತರ ಮೇಲೆ ಮಣ್ಣು ಹಾಕುತ್ತಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುತ್ತಿದ್ದ ಅನ್ನದಾತರಿಗೆ ಇದುವರೆಗೆ ಟ್ರಾನ್ಸ್ ಫಾರ್ಮ್, ವಿದ್ಯುತ್ ಕಂಬ, ಅಲ್ಯುಮಿನಿಯಂ ತಂತಿ ಇತ್ಯಾದಿಗಳಿಗೆ ಸರಕಾರವೇ ಸಬ್ಸಿಡಿ ಕೊಡುತ್ತಿತ್ತು. ಚುನಾವಣೆಯಲ್ಲಿ ಮತಕ್ಕಾಗಿ ಯಾವ ಹಸ್ತ ರೈತರ ಪಾದ ಮುಟ್ಟಿ ಮತಯಾಚನೆ ಮಾಡಿತೋ, ಈಗ ಅದೇ ಹಸ್ತ ಅಧಿಕಾರ ಸಿಕ್ಕ ಮೇಲೆ ಅನ್ನದಾತನ ಕೊರಳಿಗೆ ಹಗ್ಗ ಬಿಗಿಯತೊಡಗಿದೆ! ಇದಕ್ಕಿಂತ ಪೈಶಾಚಿಕ ಮನಃಸ್ಥಿತಿ ಮತ್ತೊಂದು ಇರಲು ಸಾಧ್ಯವೇ? ಎಂದು ಹರಿಹಾಯ್ದಿದ್ದಾರೆ.

ತಮ್ಮ ಪಾಲಿನ 24,000 ರೂಪಾಯಿ ಭರಿಸುವುದಕ್ಕೇ ಇನ್ನಿಲ್ಲದ ಕಡುಕಷ್ಟ ಅನುಭವಿಸುತ್ತಿರುವ ರೈತರು, ಇನ್ನು ಮುಂದೆ ಪೂರ್ಣ ವೆಚ್ಚ ಭರಿಸಬೇಕು ಎಂದು ಸರಕಾರ ಆದೇಶ ಹೊರಡಿಸಿದೆ. ಕಟುಕರ ಕೈಗೆ ಕರ್ನಾಟಕ ಸಿಕ್ಕಿ ನರಳುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ಪುರಾವೆ ಬೇಕೆ? ಅಧಿಕಾರಕ್ಕೆ ಬಂದಾಗಿನಿಂದ ಸಮಾಧಿ ಸ್ಥಿತಿಯಲ್ಲಿರುವ ಈ ಸರಕಾರವು, ಇಂಥ ಜನದ್ರೋಹಿ ಕೃತ್ಯಗಳಲ್ಲಿ ಬಹಳ ಕ್ರಿಯಾಶೀಲವಾಗಿದೆ! ಎಂದು ಗುಡುಗಿದ್ದಾರೆ.

ಸರಕಾರ ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಲೇಬೇಕು. ಮೊದಲಿನಂತೆ ರೈತರಿಗೆ ಸಬ್ಸಿಡಿ ಕೊಡಬೇಕು. ಒಂದು ವೇಳೆ ಆದೇಶ ವಾಪಸ್ ಪಡೆಯದಿದ್ದರೆ ಜೆಡಿಎಸ್ ಪಕ್ಷ ಸದನದ ಒಳಗೆ, ಹೊರಗೆ ಹೋರಾಟಕ್ಕೆ ಇಳಿಯುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ಬಂಡವಾಳಶಾಹಿ ಮನಃಸ್ಥಿತಿಯ ಲಾಭಕೋರ ಪಕ್ಷ. ಕಸಾಯಿ ಸಂಸ್ಕೃತಿಯ ಕಟುಕ ಪಕ್ಷ. ಅದಕ್ಕೆ ಕರುಣೆ, ದಯೆ, ದಾಕ್ಷಿಣ್ಯ ಎನ್ನುವುದು ಇರುವುದಿಲ್ಲ. ಇಡೀ ಕರ್ನಾಟಕವನ್ನೇ ಎಟಿಎಂ ಮಾಡಿಕೊಂಡು ಲೂಟಿ ಮಾಡುತ್ತಿರುವ ಕಾಂಗ್ರೆಸ್ ಸರಕಾರ, ಈಗ ರೈತರನ್ನೂ ಕೊಳ್ಳೆ ಹೊಡೆಯುತ್ತಿದೆ. ಒಂದು ಕೈಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ರಾವಣರೂಪಿ ಕಾಂಗ್ರೆಸ್ ಸರಕಾರದ ಪಾಪದ ಕೊಡ ತುಂಬಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

Ramesh Babu

Journalist

Recent Posts

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

6 minutes ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

59 minutes ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

2 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

4 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

9 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

12 hours ago