ನೀಡಲು ಸಾಧ್ಯವಿಲ್ಲದ ಗ್ಯಾರಂಟಿಗಳನ್ನು ಮುಂದಿಟ್ಟು, ಜನತೆಯನ್ನು ವಂಚಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು ಈಗ ಸಾಬೀತಾಗಿದೆ. ಪ್ರಮಾಣವಚನ ಸ್ವೀಕರಿಸಿದ ಕೂಡಲೇ ಜಾರಿಗೆ ತರುತ್ತೇವೆ ಎಂದಿದ್ದ ಗ್ಯಾರಂಟಿಗಳ ಲಾಭವನ್ನು ಯಾರಿಗೆ ಮತ್ತು ಹೇಗೆ ಕೊಡುತ್ತೇವೆ ಎಂಬ ಯಾವುದೇ ವಿವರ ನೀಡದೆ ಸಿದ್ದರಾಮಯ್ಯ ಸರ್ಕಾರ ಆದೇಶ ನೀಡುವ ನಾಟಕವಾಡಿದೆ.
ಇವು ಕೊಡುವ ಗ್ಯಾರಂಟಿಗಳಲ್ಲ, ಬದಲಾಗಿ ಕೈ ಎತ್ತುವ ಗ್ಯಾರಂಟಿಗಳು ಎಂಬುದನ್ನು ಕಾಂಗ್ರೆಸ್ನ ನಾಯಕರ ಹಾವಭಾವಗಳೇ ಸುಸ್ಪಷ್ಟವಾಗಿ ತೋರಿಸಿದೆ.
ಈಡೇರಿಸಲಾಗದ ಗ್ಯಾರಂಟಿಗಳನ್ನು ಕೇಂದ್ರ ಸರ್ಕಾರದ ಮೇಲೆ ಹಾಕುವ ಉದ್ದೇಶದಿಂದ ಈಗ ಸಂಪನ್ಮೂಲ ಕ್ರೋಢೀಕರಣ ಎಂಬ ಸಬೂಬು ಹೇಳಲಾಗುತ್ತಿದೆಯಷ್ಟೆ.
ಗ್ಯಾರಂಟಿಗಳನ್ನು ದಾರಿಯಲ್ಲಿ ಹೋಗುವವರಿಗೆಲ್ಲಾ ಕೊಡಲಾಗುತ್ತದೆಯೇ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಈಗ ಕೇಳುತ್ತಿದ್ದಾರೆ.
ಚುನಾವಣೆಗೂ ಮುನ್ನ ಹಾದಿಯಲ್ಲಿ ಹೋಗುವವರಿಗೆಲ್ಲಾ ಗ್ಯಾರಂಟಿ ಕಾರ್ಡ್ ನೀಡಿ ಈಗ ಈ ಧಾಟಿಯಲ್ಲಿ ಮಾತನಾಡುತ್ತಿದ್ದಾರೆ. ಹಾಗಾದರೆ ದಾರಿಯಲ್ಲಿ ಹೋಗುವವರು ಕನ್ನಡಿಗರಲ್ಲವೇ? ಪ್ರಶ್ನೆ ಮಾಡಿದ ಬಿಜೆಪಿ.
ರಾಜ್ಯದ ಇತಿಹಾಸದಲ್ಲೇ ಅತಿಹೆಚ್ಚು ಸಾಲ ಮಾಡಿ ಅದರ ಹೊಣೆಯನ್ನು ಮುಂದಿನ ಸರ್ಕಾರಗಳ ಹೆಗಲಿಗೆ ಹಾಕಿದ ಅಪಕೀರ್ತಿ ಸಿದ್ದರಾಮಯ್ಯನವರದ್ದು.
ಈಗಿನ ಗ್ಯಾರಂಟಿಗಳೂ ಜನರ ಒಂದು ಜೇಬಿನಿಂದ ತೆಗೆದು ಇನ್ನೊಂದು ಜೇಬಿಗೆ ಹಾಕುವ ನಾಟಕ. ಅದರಲ್ಲೂ ಸೋರಿಕೆಯಾಗಿ ಕಾಂಗ್ರೆಸ್ಸಿಗರ ಜೇಬುಗಳು ತುಂಬಿ ತುಳುಕಲಿರುವುದು ಇವರ ಗ್ಯಾರಂಟಿಯ ಅಸಲೀಯತ್ತು ಎಂದು ಬಿಜೆಪಿಯು ತನ್ನ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ವಿಚಾರಕ್ಕೆ ಪ್ರತಿಕ್ರಿಯಿಸಿದೆ.
ಈ ಘಟನೆ ಸಂಬಂಧ ಲಾಯರ್ ಜಗದೀಶ್ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಜೊತೆಗೆ ಈ ಕುರಿತು ಪ್ರಥಮ್ ಜೊತೆ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…