Categories: ರಾಜ್ಯ

ಗ್ಯಾರಂಟಿಗಳ ಲಾಭವನ್ನು ಯಾರಿಗೆ, ಹೇಗೆ ಕೊಡುತ್ತೇವೆ ಎಂದು ಹೇಳದೆ ಆದೇಶ ನೀಡುವ ನಾಟಕ-ಬಿಜೆಪಿ

ನೀಡಲು ಸಾಧ್ಯವಿಲ್ಲದ ಗ್ಯಾರಂಟಿಗಳನ್ನು ಮುಂದಿಟ್ಟು, ಜನತೆಯನ್ನು ವಂಚಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು ಈಗ ಸಾಬೀತಾಗಿದೆ. ಪ್ರಮಾಣವಚನ ಸ್ವೀಕರಿಸಿದ ಕೂಡಲೇ ಜಾರಿಗೆ ತರುತ್ತೇವೆ ಎಂದಿದ್ದ ಗ್ಯಾರಂಟಿಗಳ ಲಾಭವನ್ನು ಯಾರಿಗೆ ಮತ್ತು ಹೇಗೆ ಕೊಡುತ್ತೇವೆ ಎಂಬ ಯಾವುದೇ ವಿವರ ನೀಡದೆ ಸಿದ್ದರಾಮಯ್ಯ ಸರ್ಕಾರ ಆದೇಶ ನೀಡುವ ನಾಟಕವಾಡಿದೆ.

ಇವು ಕೊಡುವ ಗ್ಯಾರಂಟಿಗಳಲ್ಲ, ಬದಲಾಗಿ ಕೈ ಎತ್ತುವ ಗ್ಯಾರಂಟಿಗಳು ಎಂಬುದನ್ನು ಕಾಂಗ್ರೆಸ್‌ನ ನಾಯಕರ ಹಾವಭಾವಗಳೇ ಸುಸ್ಪಷ್ಟವಾಗಿ ತೋರಿಸಿದೆ.
ಈಡೇರಿಸಲಾಗದ ಗ್ಯಾರಂಟಿಗಳನ್ನು ಕೇಂದ್ರ ಸರ್ಕಾರದ ಮೇಲೆ ಹಾಕುವ ಉದ್ದೇಶದಿಂದ ಈಗ ಸಂಪನ್ಮೂಲ ಕ್ರೋಢೀಕರಣ ಎಂಬ ಸಬೂಬು ಹೇಳಲಾಗುತ್ತಿದೆಯಷ್ಟೆ.

ಗ್ಯಾರಂಟಿಗಳನ್ನು ದಾರಿಯಲ್ಲಿ ಹೋಗುವವರಿಗೆಲ್ಲಾ ಕೊಡಲಾಗುತ್ತದೆಯೇ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಈಗ ಕೇಳುತ್ತಿದ್ದಾರೆ.
ಚುನಾವಣೆಗೂ ಮುನ್ನ ಹಾದಿಯಲ್ಲಿ ಹೋಗುವವರಿಗೆಲ್ಲಾ ಗ್ಯಾರಂಟಿ ಕಾರ್ಡ್‌ ನೀಡಿ ಈಗ ಈ ಧಾಟಿಯಲ್ಲಿ ಮಾತನಾಡುತ್ತಿದ್ದಾರೆ. ಹಾಗಾದರೆ ದಾರಿಯಲ್ಲಿ ಹೋಗುವವರು ಕನ್ನಡಿಗರಲ್ಲವೇ? ಪ್ರಶ್ನೆ ಮಾಡಿದ ಬಿಜೆಪಿ.

ರಾಜ್ಯದ ಇತಿಹಾಸದಲ್ಲೇ ಅತಿಹೆಚ್ಚು ಸಾಲ ಮಾಡಿ ಅದರ ಹೊಣೆಯನ್ನು ಮುಂದಿನ ಸರ್ಕಾರಗಳ ಹೆಗಲಿಗೆ ಹಾಕಿದ ಅಪಕೀರ್ತಿ ಸಿದ್ದರಾಮಯ್ಯನವರದ್ದು.
ಈಗಿನ ಗ್ಯಾರಂಟಿಗಳೂ ಜನರ ಒಂದು ಜೇಬಿನಿಂದ ತೆಗೆದು ಇನ್ನೊಂದು ಜೇಬಿಗೆ ಹಾಕುವ ನಾಟಕ. ಅದರಲ್ಲೂ ಸೋರಿಕೆಯಾಗಿ ಕಾಂಗ್ರೆಸ್ಸಿಗರ ಜೇಬುಗಳು ತುಂಬಿ ತುಳುಕಲಿರುವುದು ಇವರ ಗ್ಯಾರಂಟಿಯ ಅಸಲೀಯತ್ತು ಎಂದು ಬಿಜೆಪಿಯು ತನ್ನ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ವಿಚಾರಕ್ಕೆ ಪ್ರತಿಕ್ರಿಯಿಸಿದೆ.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

1 hour ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

2 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

4 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

4 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

14 hours ago