Categories: ರಾಜ್ಯ

ಗ್ಯಾರಂಟಿಗಳ ಲಾಭವನ್ನು ಯಾರಿಗೆ, ಹೇಗೆ ಕೊಡುತ್ತೇವೆ ಎಂದು ಹೇಳದೆ ಆದೇಶ ನೀಡುವ ನಾಟಕ-ಬಿಜೆಪಿ

ನೀಡಲು ಸಾಧ್ಯವಿಲ್ಲದ ಗ್ಯಾರಂಟಿಗಳನ್ನು ಮುಂದಿಟ್ಟು, ಜನತೆಯನ್ನು ವಂಚಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು ಈಗ ಸಾಬೀತಾಗಿದೆ. ಪ್ರಮಾಣವಚನ ಸ್ವೀಕರಿಸಿದ ಕೂಡಲೇ ಜಾರಿಗೆ ತರುತ್ತೇವೆ ಎಂದಿದ್ದ ಗ್ಯಾರಂಟಿಗಳ ಲಾಭವನ್ನು ಯಾರಿಗೆ ಮತ್ತು ಹೇಗೆ ಕೊಡುತ್ತೇವೆ ಎಂಬ ಯಾವುದೇ ವಿವರ ನೀಡದೆ ಸಿದ್ದರಾಮಯ್ಯ ಸರ್ಕಾರ ಆದೇಶ ನೀಡುವ ನಾಟಕವಾಡಿದೆ.

ಇವು ಕೊಡುವ ಗ್ಯಾರಂಟಿಗಳಲ್ಲ, ಬದಲಾಗಿ ಕೈ ಎತ್ತುವ ಗ್ಯಾರಂಟಿಗಳು ಎಂಬುದನ್ನು ಕಾಂಗ್ರೆಸ್‌ನ ನಾಯಕರ ಹಾವಭಾವಗಳೇ ಸುಸ್ಪಷ್ಟವಾಗಿ ತೋರಿಸಿದೆ.
ಈಡೇರಿಸಲಾಗದ ಗ್ಯಾರಂಟಿಗಳನ್ನು ಕೇಂದ್ರ ಸರ್ಕಾರದ ಮೇಲೆ ಹಾಕುವ ಉದ್ದೇಶದಿಂದ ಈಗ ಸಂಪನ್ಮೂಲ ಕ್ರೋಢೀಕರಣ ಎಂಬ ಸಬೂಬು ಹೇಳಲಾಗುತ್ತಿದೆಯಷ್ಟೆ.

ಗ್ಯಾರಂಟಿಗಳನ್ನು ದಾರಿಯಲ್ಲಿ ಹೋಗುವವರಿಗೆಲ್ಲಾ ಕೊಡಲಾಗುತ್ತದೆಯೇ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಈಗ ಕೇಳುತ್ತಿದ್ದಾರೆ.
ಚುನಾವಣೆಗೂ ಮುನ್ನ ಹಾದಿಯಲ್ಲಿ ಹೋಗುವವರಿಗೆಲ್ಲಾ ಗ್ಯಾರಂಟಿ ಕಾರ್ಡ್‌ ನೀಡಿ ಈಗ ಈ ಧಾಟಿಯಲ್ಲಿ ಮಾತನಾಡುತ್ತಿದ್ದಾರೆ. ಹಾಗಾದರೆ ದಾರಿಯಲ್ಲಿ ಹೋಗುವವರು ಕನ್ನಡಿಗರಲ್ಲವೇ? ಪ್ರಶ್ನೆ ಮಾಡಿದ ಬಿಜೆಪಿ.

ರಾಜ್ಯದ ಇತಿಹಾಸದಲ್ಲೇ ಅತಿಹೆಚ್ಚು ಸಾಲ ಮಾಡಿ ಅದರ ಹೊಣೆಯನ್ನು ಮುಂದಿನ ಸರ್ಕಾರಗಳ ಹೆಗಲಿಗೆ ಹಾಕಿದ ಅಪಕೀರ್ತಿ ಸಿದ್ದರಾಮಯ್ಯನವರದ್ದು.
ಈಗಿನ ಗ್ಯಾರಂಟಿಗಳೂ ಜನರ ಒಂದು ಜೇಬಿನಿಂದ ತೆಗೆದು ಇನ್ನೊಂದು ಜೇಬಿಗೆ ಹಾಕುವ ನಾಟಕ. ಅದರಲ್ಲೂ ಸೋರಿಕೆಯಾಗಿ ಕಾಂಗ್ರೆಸ್ಸಿಗರ ಜೇಬುಗಳು ತುಂಬಿ ತುಳುಕಲಿರುವುದು ಇವರ ಗ್ಯಾರಂಟಿಯ ಅಸಲೀಯತ್ತು ಎಂದು ಬಿಜೆಪಿಯು ತನ್ನ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ವಿಚಾರಕ್ಕೆ ಪ್ರತಿಕ್ರಿಯಿಸಿದೆ.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

4 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

5 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

14 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago