Categories: ರಾಜ್ಯ

ಗ್ಯಾರಂಟಿಗಳ ಲಾಭವನ್ನು ಯಾರಿಗೆ, ಹೇಗೆ ಕೊಡುತ್ತೇವೆ ಎಂದು ಹೇಳದೆ ಆದೇಶ ನೀಡುವ ನಾಟಕ-ಬಿಜೆಪಿ

ನೀಡಲು ಸಾಧ್ಯವಿಲ್ಲದ ಗ್ಯಾರಂಟಿಗಳನ್ನು ಮುಂದಿಟ್ಟು, ಜನತೆಯನ್ನು ವಂಚಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು ಈಗ ಸಾಬೀತಾಗಿದೆ. ಪ್ರಮಾಣವಚನ ಸ್ವೀಕರಿಸಿದ ಕೂಡಲೇ ಜಾರಿಗೆ ತರುತ್ತೇವೆ ಎಂದಿದ್ದ ಗ್ಯಾರಂಟಿಗಳ ಲಾಭವನ್ನು ಯಾರಿಗೆ ಮತ್ತು ಹೇಗೆ ಕೊಡುತ್ತೇವೆ ಎಂಬ ಯಾವುದೇ ವಿವರ ನೀಡದೆ ಸಿದ್ದರಾಮಯ್ಯ ಸರ್ಕಾರ ಆದೇಶ ನೀಡುವ ನಾಟಕವಾಡಿದೆ.

ಇವು ಕೊಡುವ ಗ್ಯಾರಂಟಿಗಳಲ್ಲ, ಬದಲಾಗಿ ಕೈ ಎತ್ತುವ ಗ್ಯಾರಂಟಿಗಳು ಎಂಬುದನ್ನು ಕಾಂಗ್ರೆಸ್‌ನ ನಾಯಕರ ಹಾವಭಾವಗಳೇ ಸುಸ್ಪಷ್ಟವಾಗಿ ತೋರಿಸಿದೆ.
ಈಡೇರಿಸಲಾಗದ ಗ್ಯಾರಂಟಿಗಳನ್ನು ಕೇಂದ್ರ ಸರ್ಕಾರದ ಮೇಲೆ ಹಾಕುವ ಉದ್ದೇಶದಿಂದ ಈಗ ಸಂಪನ್ಮೂಲ ಕ್ರೋಢೀಕರಣ ಎಂಬ ಸಬೂಬು ಹೇಳಲಾಗುತ್ತಿದೆಯಷ್ಟೆ.

ಗ್ಯಾರಂಟಿಗಳನ್ನು ದಾರಿಯಲ್ಲಿ ಹೋಗುವವರಿಗೆಲ್ಲಾ ಕೊಡಲಾಗುತ್ತದೆಯೇ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಈಗ ಕೇಳುತ್ತಿದ್ದಾರೆ.
ಚುನಾವಣೆಗೂ ಮುನ್ನ ಹಾದಿಯಲ್ಲಿ ಹೋಗುವವರಿಗೆಲ್ಲಾ ಗ್ಯಾರಂಟಿ ಕಾರ್ಡ್‌ ನೀಡಿ ಈಗ ಈ ಧಾಟಿಯಲ್ಲಿ ಮಾತನಾಡುತ್ತಿದ್ದಾರೆ. ಹಾಗಾದರೆ ದಾರಿಯಲ್ಲಿ ಹೋಗುವವರು ಕನ್ನಡಿಗರಲ್ಲವೇ? ಪ್ರಶ್ನೆ ಮಾಡಿದ ಬಿಜೆಪಿ.

ರಾಜ್ಯದ ಇತಿಹಾಸದಲ್ಲೇ ಅತಿಹೆಚ್ಚು ಸಾಲ ಮಾಡಿ ಅದರ ಹೊಣೆಯನ್ನು ಮುಂದಿನ ಸರ್ಕಾರಗಳ ಹೆಗಲಿಗೆ ಹಾಕಿದ ಅಪಕೀರ್ತಿ ಸಿದ್ದರಾಮಯ್ಯನವರದ್ದು.
ಈಗಿನ ಗ್ಯಾರಂಟಿಗಳೂ ಜನರ ಒಂದು ಜೇಬಿನಿಂದ ತೆಗೆದು ಇನ್ನೊಂದು ಜೇಬಿಗೆ ಹಾಕುವ ನಾಟಕ. ಅದರಲ್ಲೂ ಸೋರಿಕೆಯಾಗಿ ಕಾಂಗ್ರೆಸ್ಸಿಗರ ಜೇಬುಗಳು ತುಂಬಿ ತುಳುಕಲಿರುವುದು ಇವರ ಗ್ಯಾರಂಟಿಯ ಅಸಲೀಯತ್ತು ಎಂದು ಬಿಜೆಪಿಯು ತನ್ನ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ವಿಚಾರಕ್ಕೆ ಪ್ರತಿಕ್ರಿಯಿಸಿದೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

14 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

16 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

17 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

21 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

23 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago