Categories: ರಾಜ್ಯ

ಗ್ಯಾರಂಟಿಗಳ ಲಾಭವನ್ನು ಯಾರಿಗೆ, ಹೇಗೆ ಕೊಡುತ್ತೇವೆ ಎಂದು ಹೇಳದೆ ಆದೇಶ ನೀಡುವ ನಾಟಕ-ಬಿಜೆಪಿ

ನೀಡಲು ಸಾಧ್ಯವಿಲ್ಲದ ಗ್ಯಾರಂಟಿಗಳನ್ನು ಮುಂದಿಟ್ಟು, ಜನತೆಯನ್ನು ವಂಚಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು ಈಗ ಸಾಬೀತಾಗಿದೆ. ಪ್ರಮಾಣವಚನ ಸ್ವೀಕರಿಸಿದ ಕೂಡಲೇ ಜಾರಿಗೆ ತರುತ್ತೇವೆ ಎಂದಿದ್ದ ಗ್ಯಾರಂಟಿಗಳ ಲಾಭವನ್ನು ಯಾರಿಗೆ ಮತ್ತು ಹೇಗೆ ಕೊಡುತ್ತೇವೆ ಎಂಬ ಯಾವುದೇ ವಿವರ ನೀಡದೆ ಸಿದ್ದರಾಮಯ್ಯ ಸರ್ಕಾರ ಆದೇಶ ನೀಡುವ ನಾಟಕವಾಡಿದೆ.

ಇವು ಕೊಡುವ ಗ್ಯಾರಂಟಿಗಳಲ್ಲ, ಬದಲಾಗಿ ಕೈ ಎತ್ತುವ ಗ್ಯಾರಂಟಿಗಳು ಎಂಬುದನ್ನು ಕಾಂಗ್ರೆಸ್‌ನ ನಾಯಕರ ಹಾವಭಾವಗಳೇ ಸುಸ್ಪಷ್ಟವಾಗಿ ತೋರಿಸಿದೆ.
ಈಡೇರಿಸಲಾಗದ ಗ್ಯಾರಂಟಿಗಳನ್ನು ಕೇಂದ್ರ ಸರ್ಕಾರದ ಮೇಲೆ ಹಾಕುವ ಉದ್ದೇಶದಿಂದ ಈಗ ಸಂಪನ್ಮೂಲ ಕ್ರೋಢೀಕರಣ ಎಂಬ ಸಬೂಬು ಹೇಳಲಾಗುತ್ತಿದೆಯಷ್ಟೆ.

ಗ್ಯಾರಂಟಿಗಳನ್ನು ದಾರಿಯಲ್ಲಿ ಹೋಗುವವರಿಗೆಲ್ಲಾ ಕೊಡಲಾಗುತ್ತದೆಯೇ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಈಗ ಕೇಳುತ್ತಿದ್ದಾರೆ.
ಚುನಾವಣೆಗೂ ಮುನ್ನ ಹಾದಿಯಲ್ಲಿ ಹೋಗುವವರಿಗೆಲ್ಲಾ ಗ್ಯಾರಂಟಿ ಕಾರ್ಡ್‌ ನೀಡಿ ಈಗ ಈ ಧಾಟಿಯಲ್ಲಿ ಮಾತನಾಡುತ್ತಿದ್ದಾರೆ. ಹಾಗಾದರೆ ದಾರಿಯಲ್ಲಿ ಹೋಗುವವರು ಕನ್ನಡಿಗರಲ್ಲವೇ? ಪ್ರಶ್ನೆ ಮಾಡಿದ ಬಿಜೆಪಿ.

ರಾಜ್ಯದ ಇತಿಹಾಸದಲ್ಲೇ ಅತಿಹೆಚ್ಚು ಸಾಲ ಮಾಡಿ ಅದರ ಹೊಣೆಯನ್ನು ಮುಂದಿನ ಸರ್ಕಾರಗಳ ಹೆಗಲಿಗೆ ಹಾಕಿದ ಅಪಕೀರ್ತಿ ಸಿದ್ದರಾಮಯ್ಯನವರದ್ದು.
ಈಗಿನ ಗ್ಯಾರಂಟಿಗಳೂ ಜನರ ಒಂದು ಜೇಬಿನಿಂದ ತೆಗೆದು ಇನ್ನೊಂದು ಜೇಬಿಗೆ ಹಾಕುವ ನಾಟಕ. ಅದರಲ್ಲೂ ಸೋರಿಕೆಯಾಗಿ ಕಾಂಗ್ರೆಸ್ಸಿಗರ ಜೇಬುಗಳು ತುಂಬಿ ತುಳುಕಲಿರುವುದು ಇವರ ಗ್ಯಾರಂಟಿಯ ಅಸಲೀಯತ್ತು ಎಂದು ಬಿಜೆಪಿಯು ತನ್ನ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ವಿಚಾರಕ್ಕೆ ಪ್ರತಿಕ್ರಿಯಿಸಿದೆ.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

9 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

12 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

16 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

1 day ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

1 day ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 day ago