Categories: ರಾಜ್ಯ

ಗ್ಯಾರಂಟಿಗಳ ಲಾಭವನ್ನು ಯಾರಿಗೆ, ಹೇಗೆ ಕೊಡುತ್ತೇವೆ ಎಂದು ಹೇಳದೆ ಆದೇಶ ನೀಡುವ ನಾಟಕ-ಬಿಜೆಪಿ

ನೀಡಲು ಸಾಧ್ಯವಿಲ್ಲದ ಗ್ಯಾರಂಟಿಗಳನ್ನು ಮುಂದಿಟ್ಟು, ಜನತೆಯನ್ನು ವಂಚಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು ಈಗ ಸಾಬೀತಾಗಿದೆ. ಪ್ರಮಾಣವಚನ ಸ್ವೀಕರಿಸಿದ ಕೂಡಲೇ ಜಾರಿಗೆ ತರುತ್ತೇವೆ ಎಂದಿದ್ದ ಗ್ಯಾರಂಟಿಗಳ ಲಾಭವನ್ನು ಯಾರಿಗೆ ಮತ್ತು ಹೇಗೆ ಕೊಡುತ್ತೇವೆ ಎಂಬ ಯಾವುದೇ ವಿವರ ನೀಡದೆ ಸಿದ್ದರಾಮಯ್ಯ ಸರ್ಕಾರ ಆದೇಶ ನೀಡುವ ನಾಟಕವಾಡಿದೆ.

ಇವು ಕೊಡುವ ಗ್ಯಾರಂಟಿಗಳಲ್ಲ, ಬದಲಾಗಿ ಕೈ ಎತ್ತುವ ಗ್ಯಾರಂಟಿಗಳು ಎಂಬುದನ್ನು ಕಾಂಗ್ರೆಸ್‌ನ ನಾಯಕರ ಹಾವಭಾವಗಳೇ ಸುಸ್ಪಷ್ಟವಾಗಿ ತೋರಿಸಿದೆ.
ಈಡೇರಿಸಲಾಗದ ಗ್ಯಾರಂಟಿಗಳನ್ನು ಕೇಂದ್ರ ಸರ್ಕಾರದ ಮೇಲೆ ಹಾಕುವ ಉದ್ದೇಶದಿಂದ ಈಗ ಸಂಪನ್ಮೂಲ ಕ್ರೋಢೀಕರಣ ಎಂಬ ಸಬೂಬು ಹೇಳಲಾಗುತ್ತಿದೆಯಷ್ಟೆ.

ಗ್ಯಾರಂಟಿಗಳನ್ನು ದಾರಿಯಲ್ಲಿ ಹೋಗುವವರಿಗೆಲ್ಲಾ ಕೊಡಲಾಗುತ್ತದೆಯೇ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಈಗ ಕೇಳುತ್ತಿದ್ದಾರೆ.
ಚುನಾವಣೆಗೂ ಮುನ್ನ ಹಾದಿಯಲ್ಲಿ ಹೋಗುವವರಿಗೆಲ್ಲಾ ಗ್ಯಾರಂಟಿ ಕಾರ್ಡ್‌ ನೀಡಿ ಈಗ ಈ ಧಾಟಿಯಲ್ಲಿ ಮಾತನಾಡುತ್ತಿದ್ದಾರೆ. ಹಾಗಾದರೆ ದಾರಿಯಲ್ಲಿ ಹೋಗುವವರು ಕನ್ನಡಿಗರಲ್ಲವೇ? ಪ್ರಶ್ನೆ ಮಾಡಿದ ಬಿಜೆಪಿ.

ರಾಜ್ಯದ ಇತಿಹಾಸದಲ್ಲೇ ಅತಿಹೆಚ್ಚು ಸಾಲ ಮಾಡಿ ಅದರ ಹೊಣೆಯನ್ನು ಮುಂದಿನ ಸರ್ಕಾರಗಳ ಹೆಗಲಿಗೆ ಹಾಕಿದ ಅಪಕೀರ್ತಿ ಸಿದ್ದರಾಮಯ್ಯನವರದ್ದು.
ಈಗಿನ ಗ್ಯಾರಂಟಿಗಳೂ ಜನರ ಒಂದು ಜೇಬಿನಿಂದ ತೆಗೆದು ಇನ್ನೊಂದು ಜೇಬಿಗೆ ಹಾಕುವ ನಾಟಕ. ಅದರಲ್ಲೂ ಸೋರಿಕೆಯಾಗಿ ಕಾಂಗ್ರೆಸ್ಸಿಗರ ಜೇಬುಗಳು ತುಂಬಿ ತುಳುಕಲಿರುವುದು ಇವರ ಗ್ಯಾರಂಟಿಯ ಅಸಲೀಯತ್ತು ಎಂದು ಬಿಜೆಪಿಯು ತನ್ನ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ವಿಚಾರಕ್ಕೆ ಪ್ರತಿಕ್ರಿಯಿಸಿದೆ.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

19 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago