ಗ್ಯಾರಂಟಿ ಅನುಷ್ಠಾನಕ್ಕೆ ಕಚೇರಿ ಆರಂಭಿಸಿದ ಸಚಿವ ಕೆ.ಜೆ.ಜಾರ್ಜ್

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ್ಲಿ ಮೂಲಸೌಕರ್ಯ ಅಭಿವೃದ್ಧಿ ಜತೆಗೆ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಇಂಧನ ಸಚಿವ ಹಾಗೂ ಶಾಸಕ ಕೆ.ಜೆ.ಜಾರ್ಜ್ ನೂತನ ಕಚೇರಿ ಲೋಕಾರ್ಪಣೆಗೊಳಿಸಿದ್ದಾರೆ.

ಸರ್ವಜ್ಞನಗರ ಕ್ಷೇತ್ರದ ಕಾಚರಕನಹಳ್ಳಿಯಲ್ಲಿ ಗುರುವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯನ್ನು ಉದ್ಘಾಟಿಸಿದ ಸಚಿವರು,ಕ್ಷೇತ್ರದಲ್ಲಿ ಗ್ಯಾಂಟಿ ಯೋಜನೆಗಳನ್ನು ಸಮರ್ಪವಾಗಿ ಜನರಿಗೆ ತಲುಪಿಸುವದರ ಜತೆಗೆ ಅನುಷ್ಠಾನವಾಗುತ್ತಿದೆಯೇ ಎಂಬುದನ್ನು ಪರಿಶೀಲಿಸುವ ಉದ್ದೇಶದಿಂದ ಈ ಕಚೇರಿ ಸ್ಥಾಪಿಸುತ್ತಿರುವುದಾಗಿ ಹೇಳಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ರಾಜ್ಯ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಹಾಗೂ ಸಮಿತಿಯ ಸ್ಥಳೀಯ ಅಧ್ಯಕ್ಷ ಮುರಳಿ ಮತ್ತು ಸದಸ್ಯರು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಗಾಂಧೀನಗರ 2ನೇ ಹಂತದಲ್ಲಿ ಕೈಗೊಳ್ಳುತ್ತಿರುವ 300 ಎಂಎಂ ವ್ಯಾಸದ ಒಳಚರಂಡಿ ನೂತನ ಮಾರ್ಗದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಕ್ಷೇತ್ರದ ಜನರು ಸಲ್ಲಿಸಿದ ಅಹವಾಲುಗಳನ್ನು ಸ್ವೀಕರಿಸಿದ ಸಚಿವರು, ತೊಂದರೆಗಳನ್ನು ನಿವಾರಿಸುವ ಭರವಸೆ ನೀಡಿದರು. ಕುಡಿಯುವ ನೀರು ಪೂರೈಕೆಯಲ್ಲಿನ ಸಮಸ್ಯೆಗಳ ಬಗ್ಗೆ ಕ್ಷೇತ್ರದ ಜನರು ವಿವರಿಸಿದಾಗ, ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳಿಂದ ಮಾಹಿತಿ ಪಡೆದು ತಕ್ಷಣವೇ ಸರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.

*ಸ್ವಾವಲಂಬಿ ಜೀವನಕ್ಕೆ ಹೊಲಿಗೆ ಯಂತ್ರ ಕೊಡುಗೆ*

ವಿನೋಭ ನಗರ, ಕೆ.ಜಿ.ಹಳ್ಳಿಯಲ್ಲಿ ಸಾಮಾಜಿಕ ಕಾರ್ಯದಲ್ಲಿ ನಿರತವಾಗಿರುವ ಮೈತ್ರಿ ಸರ್ವ ಸೇವಾ ಸಂಸ್ಥೆ ಮತ್ತು ಯುನೈಟೆಡ್ ವೇ ವತಿಯಿಂದ ಹೊಲಿಗೆ ಯಂತ್ರಗಳನ್ನು ಸಚಿವ ಕೆ.ಜೆ.ಜಾರ್ಜ್ ವಿತರಿಸಿದರು. ಸಂಸ್ಥೆಯು ಆರ್ಥಿಕ ಸಬಲೀಕರಣದ ಭಾಗವಾಗಿ 35 ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳು ಪ್ರದರ್ಶಿಸಿದ ಭರತನಾಟ್ಯ ವೀಕ್ಷಿಸಿದ ಅವರು, ಮಕ್ಕಳಿಗೆ ಶುಭಹಾರೈಸಿದರು.

ಇದಾದ ಬಳಿಕ ಇತ್ತೀಚೆಗೆ ನಿಧನರಾದ ಗಾಂಧೀನಗರ 2ನೇ ಹಂತದ ಹಿರಿಯ ಕಾಂಗ್ರೆಸ್ ಮುಖಂಡ ದಿವಂಗತ ಕೇಶವನ್ ಮತ್ತು ಕಾಡುಗೊಂಡನಹಳ್ಳಿಯ ದಿವಂಗತ ಹಿರಿಯ ಕಾಂಗ್ರೆಸ್ ಮುಖಂಡ ಮುನಿಸ್ವಾಮಿ ಅವರ ಮನೆಗೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಸಚಿವರ ನೆರವಿಗೆ ಕ್ರೀಡಾಪಟುವಿನಿಂದ ಧನ್ಯವಾದ

ಇತ್ತೀಚೆಗೆ ನಡೆದ ಪ್ರಥಮ ಏಷ್ಯನ್ ಪ್ಯಾರಾ ಥ್ರೋಬಾಲ್ ಚಾಂಪಿಯನ್‌ಶಿಪ್ ನಲ್ಲಿ ಭಾರತ ತಂಡ ಪಾಲ್ಗೊಡು ಮೂರನೇ ಸ್ಥಾನ ಗಳಿಸಿದ್ದು, ಈ ತಂಡದ ಸದಸ್ಯರಾಗಿದ್ದ ಸರ್ವಜ್ಞನರ ವಿಧಾನಸಭಾ ಕ್ಷೇತ್ರದ ಜೀವನಹಳ್ಳಿ ನಿವಾಸಿ ಬಲರಾಂ ಬಿ. ಅವರು ತಮ್ಮ ಈ ಸಾಧನೆಗೆ ಸಹಾಯಹಸ್ತ ಚಾಚಿದ್ದ ಸಚಿ ಕೆ.ಜೆ.ಜಾರ್ಜ್ ಅವರಿಗೆ ಧನ್ಯವಾದ ಸಲ್ಲಿಸಿದರು.

ಪ್ರಥಮ ಏಷ್ಯನ್ ಪ್ಯಾರಾ ಥ್ರೋಬಾಲ್ ಚಾಂಪಿಯನ್‌ಶಿಪ್ ಗಾಗಿ ತರಬೇತಿ ಮತ್ತು ಕಾಬೋಡಿಯಾಕ್ಕೆ ತೆರಳಲು ಸಚಿವ ಜಾರ್ಜ್ ಅವರು ಹಣಕಾಸಿನ ಸಹಾಯ ಮಾಡಿದ್ದರಿಂದ ಈ ಸಾಧನೆ ಮಾಡಲು ಸಾಧ್ಯವಾಯಿತು. ಹೀಗಾಗಿ ಅವರಿಗೆ ಅಭಿನಂದನೆ ಸಲ್ಲಿಸುವುದರ ಜತೆಗೆ ಕೃತಜ್ಞತೆ ಹೇಳಲು ಬಂದಿರುವುದಾಗಿ ಬಲರಾಂ ತಿಳಿಸಿದರು. ಈ ವೇಳೆ ಸಚಿವರು ಸಾಧಕ ಕ್ರೀಡಾಪಟುವಿಗೆ ಮೆಡಲ್ ಹಾಕುವುದರ ಮೂಲಕ ಶುಭಕೋರಿದರು. ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಸಚಿವ ಕೆ.ಜೆ.ಜಾರ್ಜ್ ಅಭಿಮಾನಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

2 hours ago

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

8 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

19 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

23 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago