ಗ್ಯಾರಂಟಿ ಅನುಷ್ಠಾನಕ್ಕೆ ಕಚೇರಿ ಆರಂಭಿಸಿದ ಸಚಿವ ಕೆ.ಜೆ.ಜಾರ್ಜ್

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ್ಲಿ ಮೂಲಸೌಕರ್ಯ ಅಭಿವೃದ್ಧಿ ಜತೆಗೆ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಇಂಧನ ಸಚಿವ ಹಾಗೂ ಶಾಸಕ ಕೆ.ಜೆ.ಜಾರ್ಜ್ ನೂತನ ಕಚೇರಿ ಲೋಕಾರ್ಪಣೆಗೊಳಿಸಿದ್ದಾರೆ.

ಸರ್ವಜ್ಞನಗರ ಕ್ಷೇತ್ರದ ಕಾಚರಕನಹಳ್ಳಿಯಲ್ಲಿ ಗುರುವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯನ್ನು ಉದ್ಘಾಟಿಸಿದ ಸಚಿವರು,ಕ್ಷೇತ್ರದಲ್ಲಿ ಗ್ಯಾಂಟಿ ಯೋಜನೆಗಳನ್ನು ಸಮರ್ಪವಾಗಿ ಜನರಿಗೆ ತಲುಪಿಸುವದರ ಜತೆಗೆ ಅನುಷ್ಠಾನವಾಗುತ್ತಿದೆಯೇ ಎಂಬುದನ್ನು ಪರಿಶೀಲಿಸುವ ಉದ್ದೇಶದಿಂದ ಈ ಕಚೇರಿ ಸ್ಥಾಪಿಸುತ್ತಿರುವುದಾಗಿ ಹೇಳಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ರಾಜ್ಯ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಹಾಗೂ ಸಮಿತಿಯ ಸ್ಥಳೀಯ ಅಧ್ಯಕ್ಷ ಮುರಳಿ ಮತ್ತು ಸದಸ್ಯರು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಗಾಂಧೀನಗರ 2ನೇ ಹಂತದಲ್ಲಿ ಕೈಗೊಳ್ಳುತ್ತಿರುವ 300 ಎಂಎಂ ವ್ಯಾಸದ ಒಳಚರಂಡಿ ನೂತನ ಮಾರ್ಗದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಕ್ಷೇತ್ರದ ಜನರು ಸಲ್ಲಿಸಿದ ಅಹವಾಲುಗಳನ್ನು ಸ್ವೀಕರಿಸಿದ ಸಚಿವರು, ತೊಂದರೆಗಳನ್ನು ನಿವಾರಿಸುವ ಭರವಸೆ ನೀಡಿದರು. ಕುಡಿಯುವ ನೀರು ಪೂರೈಕೆಯಲ್ಲಿನ ಸಮಸ್ಯೆಗಳ ಬಗ್ಗೆ ಕ್ಷೇತ್ರದ ಜನರು ವಿವರಿಸಿದಾಗ, ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳಿಂದ ಮಾಹಿತಿ ಪಡೆದು ತಕ್ಷಣವೇ ಸರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.

*ಸ್ವಾವಲಂಬಿ ಜೀವನಕ್ಕೆ ಹೊಲಿಗೆ ಯಂತ್ರ ಕೊಡುಗೆ*

ವಿನೋಭ ನಗರ, ಕೆ.ಜಿ.ಹಳ್ಳಿಯಲ್ಲಿ ಸಾಮಾಜಿಕ ಕಾರ್ಯದಲ್ಲಿ ನಿರತವಾಗಿರುವ ಮೈತ್ರಿ ಸರ್ವ ಸೇವಾ ಸಂಸ್ಥೆ ಮತ್ತು ಯುನೈಟೆಡ್ ವೇ ವತಿಯಿಂದ ಹೊಲಿಗೆ ಯಂತ್ರಗಳನ್ನು ಸಚಿವ ಕೆ.ಜೆ.ಜಾರ್ಜ್ ವಿತರಿಸಿದರು. ಸಂಸ್ಥೆಯು ಆರ್ಥಿಕ ಸಬಲೀಕರಣದ ಭಾಗವಾಗಿ 35 ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳು ಪ್ರದರ್ಶಿಸಿದ ಭರತನಾಟ್ಯ ವೀಕ್ಷಿಸಿದ ಅವರು, ಮಕ್ಕಳಿಗೆ ಶುಭಹಾರೈಸಿದರು.

ಇದಾದ ಬಳಿಕ ಇತ್ತೀಚೆಗೆ ನಿಧನರಾದ ಗಾಂಧೀನಗರ 2ನೇ ಹಂತದ ಹಿರಿಯ ಕಾಂಗ್ರೆಸ್ ಮುಖಂಡ ದಿವಂಗತ ಕೇಶವನ್ ಮತ್ತು ಕಾಡುಗೊಂಡನಹಳ್ಳಿಯ ದಿವಂಗತ ಹಿರಿಯ ಕಾಂಗ್ರೆಸ್ ಮುಖಂಡ ಮುನಿಸ್ವಾಮಿ ಅವರ ಮನೆಗೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಸಚಿವರ ನೆರವಿಗೆ ಕ್ರೀಡಾಪಟುವಿನಿಂದ ಧನ್ಯವಾದ

ಇತ್ತೀಚೆಗೆ ನಡೆದ ಪ್ರಥಮ ಏಷ್ಯನ್ ಪ್ಯಾರಾ ಥ್ರೋಬಾಲ್ ಚಾಂಪಿಯನ್‌ಶಿಪ್ ನಲ್ಲಿ ಭಾರತ ತಂಡ ಪಾಲ್ಗೊಡು ಮೂರನೇ ಸ್ಥಾನ ಗಳಿಸಿದ್ದು, ಈ ತಂಡದ ಸದಸ್ಯರಾಗಿದ್ದ ಸರ್ವಜ್ಞನರ ವಿಧಾನಸಭಾ ಕ್ಷೇತ್ರದ ಜೀವನಹಳ್ಳಿ ನಿವಾಸಿ ಬಲರಾಂ ಬಿ. ಅವರು ತಮ್ಮ ಈ ಸಾಧನೆಗೆ ಸಹಾಯಹಸ್ತ ಚಾಚಿದ್ದ ಸಚಿ ಕೆ.ಜೆ.ಜಾರ್ಜ್ ಅವರಿಗೆ ಧನ್ಯವಾದ ಸಲ್ಲಿಸಿದರು.

ಪ್ರಥಮ ಏಷ್ಯನ್ ಪ್ಯಾರಾ ಥ್ರೋಬಾಲ್ ಚಾಂಪಿಯನ್‌ಶಿಪ್ ಗಾಗಿ ತರಬೇತಿ ಮತ್ತು ಕಾಬೋಡಿಯಾಕ್ಕೆ ತೆರಳಲು ಸಚಿವ ಜಾರ್ಜ್ ಅವರು ಹಣಕಾಸಿನ ಸಹಾಯ ಮಾಡಿದ್ದರಿಂದ ಈ ಸಾಧನೆ ಮಾಡಲು ಸಾಧ್ಯವಾಯಿತು. ಹೀಗಾಗಿ ಅವರಿಗೆ ಅಭಿನಂದನೆ ಸಲ್ಲಿಸುವುದರ ಜತೆಗೆ ಕೃತಜ್ಞತೆ ಹೇಳಲು ಬಂದಿರುವುದಾಗಿ ಬಲರಾಂ ತಿಳಿಸಿದರು. ಈ ವೇಳೆ ಸಚಿವರು ಸಾಧಕ ಕ್ರೀಡಾಪಟುವಿಗೆ ಮೆಡಲ್ ಹಾಕುವುದರ ಮೂಲಕ ಶುಭಕೋರಿದರು. ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಸಚಿವ ಕೆ.ಜೆ.ಜಾರ್ಜ್ ಅಭಿಮಾನಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

8 hours ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

18 hours ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

18 hours ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

1 day ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

1 day ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

1 day ago