ಗ್ಯಾರಂಟಿ ಅನುಷ್ಠಾನಕ್ಕೆ ಕಚೇರಿ ಆರಂಭಿಸಿದ ಸಚಿವ ಕೆ.ಜೆ.ಜಾರ್ಜ್

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ್ಲಿ ಮೂಲಸೌಕರ್ಯ ಅಭಿವೃದ್ಧಿ ಜತೆಗೆ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಇಂಧನ ಸಚಿವ ಹಾಗೂ ಶಾಸಕ ಕೆ.ಜೆ.ಜಾರ್ಜ್ ನೂತನ ಕಚೇರಿ ಲೋಕಾರ್ಪಣೆಗೊಳಿಸಿದ್ದಾರೆ.

ಸರ್ವಜ್ಞನಗರ ಕ್ಷೇತ್ರದ ಕಾಚರಕನಹಳ್ಳಿಯಲ್ಲಿ ಗುರುವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯನ್ನು ಉದ್ಘಾಟಿಸಿದ ಸಚಿವರು,ಕ್ಷೇತ್ರದಲ್ಲಿ ಗ್ಯಾಂಟಿ ಯೋಜನೆಗಳನ್ನು ಸಮರ್ಪವಾಗಿ ಜನರಿಗೆ ತಲುಪಿಸುವದರ ಜತೆಗೆ ಅನುಷ್ಠಾನವಾಗುತ್ತಿದೆಯೇ ಎಂಬುದನ್ನು ಪರಿಶೀಲಿಸುವ ಉದ್ದೇಶದಿಂದ ಈ ಕಚೇರಿ ಸ್ಥಾಪಿಸುತ್ತಿರುವುದಾಗಿ ಹೇಳಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ರಾಜ್ಯ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಹಾಗೂ ಸಮಿತಿಯ ಸ್ಥಳೀಯ ಅಧ್ಯಕ್ಷ ಮುರಳಿ ಮತ್ತು ಸದಸ್ಯರು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಗಾಂಧೀನಗರ 2ನೇ ಹಂತದಲ್ಲಿ ಕೈಗೊಳ್ಳುತ್ತಿರುವ 300 ಎಂಎಂ ವ್ಯಾಸದ ಒಳಚರಂಡಿ ನೂತನ ಮಾರ್ಗದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಕ್ಷೇತ್ರದ ಜನರು ಸಲ್ಲಿಸಿದ ಅಹವಾಲುಗಳನ್ನು ಸ್ವೀಕರಿಸಿದ ಸಚಿವರು, ತೊಂದರೆಗಳನ್ನು ನಿವಾರಿಸುವ ಭರವಸೆ ನೀಡಿದರು. ಕುಡಿಯುವ ನೀರು ಪೂರೈಕೆಯಲ್ಲಿನ ಸಮಸ್ಯೆಗಳ ಬಗ್ಗೆ ಕ್ಷೇತ್ರದ ಜನರು ವಿವರಿಸಿದಾಗ, ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳಿಂದ ಮಾಹಿತಿ ಪಡೆದು ತಕ್ಷಣವೇ ಸರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.

*ಸ್ವಾವಲಂಬಿ ಜೀವನಕ್ಕೆ ಹೊಲಿಗೆ ಯಂತ್ರ ಕೊಡುಗೆ*

ವಿನೋಭ ನಗರ, ಕೆ.ಜಿ.ಹಳ್ಳಿಯಲ್ಲಿ ಸಾಮಾಜಿಕ ಕಾರ್ಯದಲ್ಲಿ ನಿರತವಾಗಿರುವ ಮೈತ್ರಿ ಸರ್ವ ಸೇವಾ ಸಂಸ್ಥೆ ಮತ್ತು ಯುನೈಟೆಡ್ ವೇ ವತಿಯಿಂದ ಹೊಲಿಗೆ ಯಂತ್ರಗಳನ್ನು ಸಚಿವ ಕೆ.ಜೆ.ಜಾರ್ಜ್ ವಿತರಿಸಿದರು. ಸಂಸ್ಥೆಯು ಆರ್ಥಿಕ ಸಬಲೀಕರಣದ ಭಾಗವಾಗಿ 35 ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳು ಪ್ರದರ್ಶಿಸಿದ ಭರತನಾಟ್ಯ ವೀಕ್ಷಿಸಿದ ಅವರು, ಮಕ್ಕಳಿಗೆ ಶುಭಹಾರೈಸಿದರು.

ಇದಾದ ಬಳಿಕ ಇತ್ತೀಚೆಗೆ ನಿಧನರಾದ ಗಾಂಧೀನಗರ 2ನೇ ಹಂತದ ಹಿರಿಯ ಕಾಂಗ್ರೆಸ್ ಮುಖಂಡ ದಿವಂಗತ ಕೇಶವನ್ ಮತ್ತು ಕಾಡುಗೊಂಡನಹಳ್ಳಿಯ ದಿವಂಗತ ಹಿರಿಯ ಕಾಂಗ್ರೆಸ್ ಮುಖಂಡ ಮುನಿಸ್ವಾಮಿ ಅವರ ಮನೆಗೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಸಚಿವರ ನೆರವಿಗೆ ಕ್ರೀಡಾಪಟುವಿನಿಂದ ಧನ್ಯವಾದ

ಇತ್ತೀಚೆಗೆ ನಡೆದ ಪ್ರಥಮ ಏಷ್ಯನ್ ಪ್ಯಾರಾ ಥ್ರೋಬಾಲ್ ಚಾಂಪಿಯನ್‌ಶಿಪ್ ನಲ್ಲಿ ಭಾರತ ತಂಡ ಪಾಲ್ಗೊಡು ಮೂರನೇ ಸ್ಥಾನ ಗಳಿಸಿದ್ದು, ಈ ತಂಡದ ಸದಸ್ಯರಾಗಿದ್ದ ಸರ್ವಜ್ಞನರ ವಿಧಾನಸಭಾ ಕ್ಷೇತ್ರದ ಜೀವನಹಳ್ಳಿ ನಿವಾಸಿ ಬಲರಾಂ ಬಿ. ಅವರು ತಮ್ಮ ಈ ಸಾಧನೆಗೆ ಸಹಾಯಹಸ್ತ ಚಾಚಿದ್ದ ಸಚಿ ಕೆ.ಜೆ.ಜಾರ್ಜ್ ಅವರಿಗೆ ಧನ್ಯವಾದ ಸಲ್ಲಿಸಿದರು.

ಪ್ರಥಮ ಏಷ್ಯನ್ ಪ್ಯಾರಾ ಥ್ರೋಬಾಲ್ ಚಾಂಪಿಯನ್‌ಶಿಪ್ ಗಾಗಿ ತರಬೇತಿ ಮತ್ತು ಕಾಬೋಡಿಯಾಕ್ಕೆ ತೆರಳಲು ಸಚಿವ ಜಾರ್ಜ್ ಅವರು ಹಣಕಾಸಿನ ಸಹಾಯ ಮಾಡಿದ್ದರಿಂದ ಈ ಸಾಧನೆ ಮಾಡಲು ಸಾಧ್ಯವಾಯಿತು. ಹೀಗಾಗಿ ಅವರಿಗೆ ಅಭಿನಂದನೆ ಸಲ್ಲಿಸುವುದರ ಜತೆಗೆ ಕೃತಜ್ಞತೆ ಹೇಳಲು ಬಂದಿರುವುದಾಗಿ ಬಲರಾಂ ತಿಳಿಸಿದರು. ಈ ವೇಳೆ ಸಚಿವರು ಸಾಧಕ ಕ್ರೀಡಾಪಟುವಿಗೆ ಮೆಡಲ್ ಹಾಕುವುದರ ಮೂಲಕ ಶುಭಕೋರಿದರು. ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಸಚಿವ ಕೆ.ಜೆ.ಜಾರ್ಜ್ ಅಭಿಮಾನಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

8 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

8 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

11 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

12 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

16 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

20 hours ago