ಗ್ಯಾರಂಟಿ ಅನುಷ್ಠಾನಕ್ಕೆ ಕಚೇರಿ ಆರಂಭಿಸಿದ ಸಚಿವ ಕೆ.ಜೆ.ಜಾರ್ಜ್

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ್ಲಿ ಮೂಲಸೌಕರ್ಯ ಅಭಿವೃದ್ಧಿ ಜತೆಗೆ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಇಂಧನ ಸಚಿವ ಹಾಗೂ ಶಾಸಕ ಕೆ.ಜೆ.ಜಾರ್ಜ್ ನೂತನ ಕಚೇರಿ ಲೋಕಾರ್ಪಣೆಗೊಳಿಸಿದ್ದಾರೆ.

ಸರ್ವಜ್ಞನಗರ ಕ್ಷೇತ್ರದ ಕಾಚರಕನಹಳ್ಳಿಯಲ್ಲಿ ಗುರುವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯನ್ನು ಉದ್ಘಾಟಿಸಿದ ಸಚಿವರು,ಕ್ಷೇತ್ರದಲ್ಲಿ ಗ್ಯಾಂಟಿ ಯೋಜನೆಗಳನ್ನು ಸಮರ್ಪವಾಗಿ ಜನರಿಗೆ ತಲುಪಿಸುವದರ ಜತೆಗೆ ಅನುಷ್ಠಾನವಾಗುತ್ತಿದೆಯೇ ಎಂಬುದನ್ನು ಪರಿಶೀಲಿಸುವ ಉದ್ದೇಶದಿಂದ ಈ ಕಚೇರಿ ಸ್ಥಾಪಿಸುತ್ತಿರುವುದಾಗಿ ಹೇಳಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ರಾಜ್ಯ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಹಾಗೂ ಸಮಿತಿಯ ಸ್ಥಳೀಯ ಅಧ್ಯಕ್ಷ ಮುರಳಿ ಮತ್ತು ಸದಸ್ಯರು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಗಾಂಧೀನಗರ 2ನೇ ಹಂತದಲ್ಲಿ ಕೈಗೊಳ್ಳುತ್ತಿರುವ 300 ಎಂಎಂ ವ್ಯಾಸದ ಒಳಚರಂಡಿ ನೂತನ ಮಾರ್ಗದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಕ್ಷೇತ್ರದ ಜನರು ಸಲ್ಲಿಸಿದ ಅಹವಾಲುಗಳನ್ನು ಸ್ವೀಕರಿಸಿದ ಸಚಿವರು, ತೊಂದರೆಗಳನ್ನು ನಿವಾರಿಸುವ ಭರವಸೆ ನೀಡಿದರು. ಕುಡಿಯುವ ನೀರು ಪೂರೈಕೆಯಲ್ಲಿನ ಸಮಸ್ಯೆಗಳ ಬಗ್ಗೆ ಕ್ಷೇತ್ರದ ಜನರು ವಿವರಿಸಿದಾಗ, ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳಿಂದ ಮಾಹಿತಿ ಪಡೆದು ತಕ್ಷಣವೇ ಸರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.

*ಸ್ವಾವಲಂಬಿ ಜೀವನಕ್ಕೆ ಹೊಲಿಗೆ ಯಂತ್ರ ಕೊಡುಗೆ*

ವಿನೋಭ ನಗರ, ಕೆ.ಜಿ.ಹಳ್ಳಿಯಲ್ಲಿ ಸಾಮಾಜಿಕ ಕಾರ್ಯದಲ್ಲಿ ನಿರತವಾಗಿರುವ ಮೈತ್ರಿ ಸರ್ವ ಸೇವಾ ಸಂಸ್ಥೆ ಮತ್ತು ಯುನೈಟೆಡ್ ವೇ ವತಿಯಿಂದ ಹೊಲಿಗೆ ಯಂತ್ರಗಳನ್ನು ಸಚಿವ ಕೆ.ಜೆ.ಜಾರ್ಜ್ ವಿತರಿಸಿದರು. ಸಂಸ್ಥೆಯು ಆರ್ಥಿಕ ಸಬಲೀಕರಣದ ಭಾಗವಾಗಿ 35 ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳು ಪ್ರದರ್ಶಿಸಿದ ಭರತನಾಟ್ಯ ವೀಕ್ಷಿಸಿದ ಅವರು, ಮಕ್ಕಳಿಗೆ ಶುಭಹಾರೈಸಿದರು.

ಇದಾದ ಬಳಿಕ ಇತ್ತೀಚೆಗೆ ನಿಧನರಾದ ಗಾಂಧೀನಗರ 2ನೇ ಹಂತದ ಹಿರಿಯ ಕಾಂಗ್ರೆಸ್ ಮುಖಂಡ ದಿವಂಗತ ಕೇಶವನ್ ಮತ್ತು ಕಾಡುಗೊಂಡನಹಳ್ಳಿಯ ದಿವಂಗತ ಹಿರಿಯ ಕಾಂಗ್ರೆಸ್ ಮುಖಂಡ ಮುನಿಸ್ವಾಮಿ ಅವರ ಮನೆಗೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಸಚಿವರ ನೆರವಿಗೆ ಕ್ರೀಡಾಪಟುವಿನಿಂದ ಧನ್ಯವಾದ

ಇತ್ತೀಚೆಗೆ ನಡೆದ ಪ್ರಥಮ ಏಷ್ಯನ್ ಪ್ಯಾರಾ ಥ್ರೋಬಾಲ್ ಚಾಂಪಿಯನ್‌ಶಿಪ್ ನಲ್ಲಿ ಭಾರತ ತಂಡ ಪಾಲ್ಗೊಡು ಮೂರನೇ ಸ್ಥಾನ ಗಳಿಸಿದ್ದು, ಈ ತಂಡದ ಸದಸ್ಯರಾಗಿದ್ದ ಸರ್ವಜ್ಞನರ ವಿಧಾನಸಭಾ ಕ್ಷೇತ್ರದ ಜೀವನಹಳ್ಳಿ ನಿವಾಸಿ ಬಲರಾಂ ಬಿ. ಅವರು ತಮ್ಮ ಈ ಸಾಧನೆಗೆ ಸಹಾಯಹಸ್ತ ಚಾಚಿದ್ದ ಸಚಿ ಕೆ.ಜೆ.ಜಾರ್ಜ್ ಅವರಿಗೆ ಧನ್ಯವಾದ ಸಲ್ಲಿಸಿದರು.

ಪ್ರಥಮ ಏಷ್ಯನ್ ಪ್ಯಾರಾ ಥ್ರೋಬಾಲ್ ಚಾಂಪಿಯನ್‌ಶಿಪ್ ಗಾಗಿ ತರಬೇತಿ ಮತ್ತು ಕಾಬೋಡಿಯಾಕ್ಕೆ ತೆರಳಲು ಸಚಿವ ಜಾರ್ಜ್ ಅವರು ಹಣಕಾಸಿನ ಸಹಾಯ ಮಾಡಿದ್ದರಿಂದ ಈ ಸಾಧನೆ ಮಾಡಲು ಸಾಧ್ಯವಾಯಿತು. ಹೀಗಾಗಿ ಅವರಿಗೆ ಅಭಿನಂದನೆ ಸಲ್ಲಿಸುವುದರ ಜತೆಗೆ ಕೃತಜ್ಞತೆ ಹೇಳಲು ಬಂದಿರುವುದಾಗಿ ಬಲರಾಂ ತಿಳಿಸಿದರು. ಈ ವೇಳೆ ಸಚಿವರು ಸಾಧಕ ಕ್ರೀಡಾಪಟುವಿಗೆ ಮೆಡಲ್ ಹಾಕುವುದರ ಮೂಲಕ ಶುಭಕೋರಿದರು. ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಸಚಿವ ಕೆ.ಜೆ.ಜಾರ್ಜ್ ಅಭಿಮಾನಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

15 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago