ಕೋಲಾರ: ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರವು ಬಡವರು ಮತ್ತು ಸಾಮಾನ್ಯ ಜನರ ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಐದು ಮಹಾತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಟಾನ ಮತ್ತು ಯಶಸ್ಸಿಗೆ ಅಧಿಕಾರಿಗಳು ಸಹಕರಿಸಬೇಕೆಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್ ಹೇಳಿದರು.
ನಗರದ ಜಿಲ್ಲಾ ಪಂಚಾಯತಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ ಮತ್ತು ಯುವನಿಧಿ ಈ ಐದು ಯೋಜನೆಗಳು ರಾಜ್ಯದಲ್ಲಿ ಇತಿಹಾಸವನ್ನೇ ಸೃಷ್ಟಿಸಿದೆ. ಬಡ ಮತ್ತು ಸಾಮಾನ್ಯ ಜನರ ಬದುಕಿಗೆ ಶಕ್ತಿಯಾಗಿದೆ ಅವರ ಆರ್ಥಿಕ ಸಬಲೀಕರಣಕ್ಕೆ ಕಾರಣವಾಗಿದ್ದು ಇಂತಹ ಯೋಜನೆಗಳ ಅನುಷ್ಟಾನದಲ್ಲಿ ಎದುರಾಗುವ ಸಣ್ಣ ಪುಟ್ಟ ತಾಂತ್ರಿಕ ಮತ್ತು ಇತರೆ ದೋಷಗಳನ್ನು ಅಧಿಕಾರಿಗಳು ಸರಿಪಡಿಸಿಕೊಂಡು ಮತ್ತು ಯೋಜನೆ ಕುರಿತು ಜನರಲ್ಲಿ ಅರಿವು ಮೂಡಿಸಿ ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿನ ಗ್ಯಾರಂಟಿ ಫಲಾನುಭವಿಗಳು ಒಂದು ಕಡೆಯಿಂದ ಮತ್ತೊಂದು ಕಡೆಗೆ ವರ್ಗಾವಣೆಯಾಗಿದ್ದ ಸಂದರ್ಭದಲ್ಲಿ ಮತ್ತೆ ಅವರಿಗೆ ಸೌಲಭ್ಯಗಳನ್ನು ಕೊಡುವ ಕೆಲಸ ಮಾಡಿ ಇದು ಪಕ್ಷಾತೀತವಾಗಿ ಎಲ್ಲ ಅರ್ಹರಿಗೂ ಸಿಗಬೇಕಾದ ಸೌಲಭ್ಯಗಳಾಗಿವೆ ಹೀಗಾಗಿ ಪ್ರಾಧಿಕಾರ ವಿಶೇಷ ಕಾಳಜಿಯಿಂದ ಪ್ರತಿ ತಾಲೂಕಿನಲ್ಲಿರುವ ಸಮಿತಿ ಸದಸ್ಯರಿಗೂ ಮಾಹಿತಿ ನೀಡಿ ಸಾಧ್ಯವಾದಷ್ಟು ಸಮಸ್ಯೆ ಪರಿಹಾರವಾಗುವ ನಿಟ್ಟಿನಲ್ಲಿ ಕ್ರಮ ವಹಿಸಿ ಯೋಜನೆಯ ಪಾಲಾನುಭವಿಗಳಾಗುವಂತೆ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಸಮಿತಿ ಸದಸ್ಯರು ಮಾತನಾಡಿ ಗ್ಯಾರಂಟಿ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಬೇಕು ಯೋಜನೆಯ ಫಲಾನುಭವಿಗಳಾಗಿ ಆಯ್ಕೆ ಮಾಡುವ ಸಂದರ್ಭದಲ್ಲಿ ಏನಾದರೂ ನಿರ್ಲಕ್ಷ್ಯ ತೋರಿದ ಸಂಬಂಧ ಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಬೇಕು ಯಾವುದೇ ಕಾರಣಕ್ಕೂ ತಾರತಮ್ಯವನ್ನು ಮಾಡಬಾರದು ಎಂದು ಸೂಚಿಸಿದರು.
ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಶಿವಕುಮಾರ್, ಸಮಿತಿಯ ಉಪಾಧ್ಯಕ್ಷರಾದ ಹಿದಾಯಿತ್ ಉಲ್ಲಾ ಷರೀಫ್, ನಾಗೇಶ್ವರಿ, ಸದಸ್ಯರಾದ ಮಂಗಳಾ, ಮಮತಾರೆಡ್ಡಿ, ನೀಲಕಂಠೇಗೌಡ, ಮಹಮ್ಮದ್ ಮುನೀರ್, ಉಮಾದೇವಿ, ಪಾರ್ಥಸಾರಥಿ, ಅಶ್ವಥ್ ರೆಡ್ಡಿ, ನಾಗರಾಜ್, ಭಾಗ್ಯಮ್ಮ, ಆಹಾರ ಇಲಾಖೆಯ ಲತಾ, ಬೆಸ್ಕಾಂ ಇಲಾಖೆಯ ಶುಭಾ, ಕೆ.ಎಸ್.ಆರ್.ಟಿ.ಸಿ ಡಿಸಿ ಶ್ರೀನಾಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಂಶಿಕೃಷ್ಣ ಯುವಜನ ಇಲಾಖೆಯ ಮುನಿಕೃಷ್ಣ ಇದ್ದರು,
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…