Categories: ಕೋಲಾರ

ಗ್ಯಾರಂಟಿ ಯೋಜನೆಗಳಿಂದ ಜನತೆಗೆ ನೆಮ್ಮದಿಯ ಬದುಕು- ಎಂಎಲ್ಸಿ ಅನಿಲ್ ಕುಮಾರ್

ಕೋಲಾರ: ರಾಜ್ಯದಲ್ಲಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡವರಿಗೆ ಬಹಳ ನೆರವಾಗಿದ್ದು ಜನ ನೆಮ್ಮದಿಯಿಂದ ಬದುಕುವಂತಾಗಿದೆ ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ತಿಳಿಸಿದರು.

ತಾಲೂಕಿನ ವೇಮಗಲ್ ಗ್ರಾಮದಲ್ಲಿ ಪಟ್ಟಣ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು ಗ್ಯಾರಂಟಿಗಳು ಚುನಾವಣೆಯ ಗಿಮಿಕ್‌ ಎಂದು ವಿರೋಧ ಪಕ್ಷದವರು ಟೀಕಿಸಿದ್ದರು. ಆದರೆ, ರಾಜ್ಯ ಸರ್ಕಾರ ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಇದರಿಂದ ರಾಜ್ಯವೇನೂ ದಿವಾಳಿ ಆಗಿಲ್ಲ. ಅಭಿವೃದ್ಧಿ ಕೆಲಸಗಳು ಮುಂದುವರೆದಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನುಭವಿ ರಾಜಕಾರಣಿ. ಅನೇಕ ಬಜೆಟ್‌ಗಳನ್ನು ಮಂಡಿಸಿದ್ದಾರೆ. ಹಣಕಾಸು ಸಚಿವರೂ ಆಗಿರುವ ಅವರು ರಾಜ್ಯದ ಜನರನ್ನು ಸಂಕಷ್ಟಕ್ಕೆ ದೂಡುವುದಿಲ್ಲ ಎಂದು ಹೇಳಿದರು.

ವೇಮಗಲ್ ಹಿಂದೆ ಗ್ರಾಮ ಪಂಚಾಯತಿಯಾಗಿತ್ತು ಇವತ್ತು ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೆ ಏರಿಸಲಾಗಿದೆ ಈ ಭಾಗದಲ್ಲಿ ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಲಾಗಿದೆ
ಕಾಂಗ್ರೆಸ್ ಪಕ್ಷವು ಎಲ್ಲಾ ಜಾತಿ ಧರ್ಮಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಿದೆ ಕಾಂಗ್ರೆಸ್ ಪಕ್ಷದ ಬಗ್ಗೆ ಅಪಪ್ರಚಾರ ಮಾಡಲು ಜೆಡಿಎಸ್ ಮತ್ತು ಬಿಜೆಪಿ ಹೊರಟಿದ್ದಾರೆ ಸಿಎಂ ಸಿದ್ದರಾಮಯ್ಯ ಆಡಳಿತದ ಬಗ್ಗೆ ಜನಪ್ರಿಯ ಕಾರ್ಯಕ್ಮಗಳ ಬಗ್ಗೆ ಮನೆ ಮನೆಗೆ ಹೋಗಿ ಮನವರಿಕೆ ಮಾಡಿಕೊಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ ಪಟ್ಟಣ ಪಂಚಾಯತಿಯಾಗಿ ಮೊದಲ ಬಾರಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಬೇಕಾಗಿದೆ ಜೊತೆಗೆ ಪಕ್ಕದ ವಾರ್ಡ್ ಗಳಲ್ಲಿರುವ ಸಂಬಂಧಿಕರು ಸ್ನೇಹಿತರಿಗೆ ಮನವರಿಕೆ ಮಾಡಿ ಮತ ಹಾಕಿಸಬೇಕಾಗಿದೆ ಸಿದ್ದರಾಮಯ್ಯ ಅವರು ಏನು ಆಶ್ವಾಸನೆ ನೀಡಿದರು ಅದನ್ನು ನಡೆದುಕೊಂಡಿದ್ದಾರೆ ಗ್ಯಾರಂಟಿ ಮೂಲಕ ಜಾರಿ ಮಾಡಿದ್ದಾರೆ ಜನರ ಪರವಾದ ಸರ್ಕಾರ ಮಾಡಿದ್ದಾರೆ ಕಾಂಗ್ರೆಸ್ ಸರ್ಕಾರ ಇದೆ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಬೇಕಾಗಿದೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ನಾಗನಾಳ ಸೋಮಣ್ಣ, ಕೋಮುಲ್ ನಿರ್ದೇಶಕ ಚಂಜಿಮಲೆ ಬಿ ರಮೇಶ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ.ಶಿವಕುಮಾರ್, ತಾಲೂಕು ಅಧ್ಯಕ್ಷ ಮುನಿಯಪ್ಪ, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಜನಪನಹಳ್ಳಿ ನವೀನ್, ಅಂಬರೀಶ್, ಕುರುಬರಹಳ್ಳಿ ಕುಮಾರ್, ಮೂರ್ತಿ, ಬಿ.ನಾಗರಾಜ್, ಅಭ್ಯರ್ಥಿಗಳಾದ ಮಂಜುಳಾ ಸುರೇಶ್, ದೀಪ, ಅಂಜಲಿ ಪ್ರಕಾಶ್, ಶಶಿಕಲಾ ನಾಗೇಶ್, ವನಿತಾ, ರವಿಚಂದ್ರ, ಮುಂತಾದವರು ಇದ್ದರು,

Ramesh Babu

Journalist

Recent Posts

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

3 minutes ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

28 minutes ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

8 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago