ಕೋಲಾರ: ರಾಜ್ಯದಲ್ಲಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡವರಿಗೆ ಬಹಳ ನೆರವಾಗಿದ್ದು ಜನ ನೆಮ್ಮದಿಯಿಂದ ಬದುಕುವಂತಾಗಿದೆ ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ತಿಳಿಸಿದರು.
ತಾಲೂಕಿನ ವೇಮಗಲ್ ಗ್ರಾಮದಲ್ಲಿ ಪಟ್ಟಣ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು ಗ್ಯಾರಂಟಿಗಳು ಚುನಾವಣೆಯ ಗಿಮಿಕ್ ಎಂದು ವಿರೋಧ ಪಕ್ಷದವರು ಟೀಕಿಸಿದ್ದರು. ಆದರೆ, ರಾಜ್ಯ ಸರ್ಕಾರ ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಇದರಿಂದ ರಾಜ್ಯವೇನೂ ದಿವಾಳಿ ಆಗಿಲ್ಲ. ಅಭಿವೃದ್ಧಿ ಕೆಲಸಗಳು ಮುಂದುವರೆದಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನುಭವಿ ರಾಜಕಾರಣಿ. ಅನೇಕ ಬಜೆಟ್ಗಳನ್ನು ಮಂಡಿಸಿದ್ದಾರೆ. ಹಣಕಾಸು ಸಚಿವರೂ ಆಗಿರುವ ಅವರು ರಾಜ್ಯದ ಜನರನ್ನು ಸಂಕಷ್ಟಕ್ಕೆ ದೂಡುವುದಿಲ್ಲ ಎಂದು ಹೇಳಿದರು.
ವೇಮಗಲ್ ಹಿಂದೆ ಗ್ರಾಮ ಪಂಚಾಯತಿಯಾಗಿತ್ತು ಇವತ್ತು ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೆ ಏರಿಸಲಾಗಿದೆ ಈ ಭಾಗದಲ್ಲಿ ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಲಾಗಿದೆ
ಕಾಂಗ್ರೆಸ್ ಪಕ್ಷವು ಎಲ್ಲಾ ಜಾತಿ ಧರ್ಮಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಿದೆ ಕಾಂಗ್ರೆಸ್ ಪಕ್ಷದ ಬಗ್ಗೆ ಅಪಪ್ರಚಾರ ಮಾಡಲು ಜೆಡಿಎಸ್ ಮತ್ತು ಬಿಜೆಪಿ ಹೊರಟಿದ್ದಾರೆ ಸಿಎಂ ಸಿದ್ದರಾಮಯ್ಯ ಆಡಳಿತದ ಬಗ್ಗೆ ಜನಪ್ರಿಯ ಕಾರ್ಯಕ್ಮಗಳ ಬಗ್ಗೆ ಮನೆ ಮನೆಗೆ ಹೋಗಿ ಮನವರಿಕೆ ಮಾಡಿಕೊಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ ಪಟ್ಟಣ ಪಂಚಾಯತಿಯಾಗಿ ಮೊದಲ ಬಾರಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಬೇಕಾಗಿದೆ ಜೊತೆಗೆ ಪಕ್ಕದ ವಾರ್ಡ್ ಗಳಲ್ಲಿರುವ ಸಂಬಂಧಿಕರು ಸ್ನೇಹಿತರಿಗೆ ಮನವರಿಕೆ ಮಾಡಿ ಮತ ಹಾಕಿಸಬೇಕಾಗಿದೆ ಸಿದ್ದರಾಮಯ್ಯ ಅವರು ಏನು ಆಶ್ವಾಸನೆ ನೀಡಿದರು ಅದನ್ನು ನಡೆದುಕೊಂಡಿದ್ದಾರೆ ಗ್ಯಾರಂಟಿ ಮೂಲಕ ಜಾರಿ ಮಾಡಿದ್ದಾರೆ ಜನರ ಪರವಾದ ಸರ್ಕಾರ ಮಾಡಿದ್ದಾರೆ ಕಾಂಗ್ರೆಸ್ ಸರ್ಕಾರ ಇದೆ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಬೇಕಾಗಿದೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ನಾಗನಾಳ ಸೋಮಣ್ಣ, ಕೋಮುಲ್ ನಿರ್ದೇಶಕ ಚಂಜಿಮಲೆ ಬಿ ರಮೇಶ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ.ಶಿವಕುಮಾರ್, ತಾಲೂಕು ಅಧ್ಯಕ್ಷ ಮುನಿಯಪ್ಪ, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಜನಪನಹಳ್ಳಿ ನವೀನ್, ಅಂಬರೀಶ್, ಕುರುಬರಹಳ್ಳಿ ಕುಮಾರ್, ಮೂರ್ತಿ, ಬಿ.ನಾಗರಾಜ್, ಅಭ್ಯರ್ಥಿಗಳಾದ ಮಂಜುಳಾ ಸುರೇಶ್, ದೀಪ, ಅಂಜಲಿ ಪ್ರಕಾಶ್, ಶಶಿಕಲಾ ನಾಗೇಶ್, ವನಿತಾ, ರವಿಚಂದ್ರ, ಮುಂತಾದವರು ಇದ್ದರು,
ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…
ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…