ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಕುರಿತಂತೆ ಸಂಬಂಧಪಟ್ಟ ಇಲಾಖೆಗಳ ಸಭೆ ನಡೆಯಿತು.

ಸಭೆಯಲ್ಲಿ ಚರ್ಚಿಸಲ್ಪಟ್ಟ ಪ್ರಮುಖ ಅಂಶಗಳು. 

ಶಕ್ತಿ ಯೋಜನೆ:

ಶಕ್ತಿ ಯೋಜನೆ ಜಾರಿಯಾದಾಗಿನಿಂದ ನವೆಂಬರ್‌ 21ರ ವರೆಗೆ ಒಟ್ಟಾರೆ 99.75 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿರುತ್ತಾರೆ. ಇನ್ನೆರಡು ದಿನಗಳಲ್ಲಿ ನೂರು ಕೋಟಿ ದಾಟಲಿದೆ. ತಿಂಗಳ ಸರಾಸರಿ ಪ್ರಯಾಣಿಕರ ಸಂಖ್ಯೆ ಏಪ್ರಿಲ್‌ 2023 ರಲ್ಲಿ 84.17 ಲಕ್ಷ ಇದ್ದು, ಶಕ್ತಿ ಯೋಜನೆ ಜಾರಿಯ ನಂತರ 1.08 ಕೋಟಿಯಿಂದ 1.15 ಕೋಟಿ ವರೆಗೆ ಹೆಚ್ಚಳವಾಗಿದೆ.

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಒಟ್ಟು 828 ಸಾಮಾನ್ಯ ಹಾಗೂ 145 ವಿದ್ಯುತ್‌ ಚಾಲಿತ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ. ಬಸ್‌ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ವಹಿಸಬೇಕು.

ಅನ್ನಭಾಗ್ಯ:

ಅನ್ನಭಾಗ್ಯ ಯೋಜನೆಯಡಿ ಅಕ್ಟೋಬರ್‌ ತಿಂಗಳಲ್ಲಿ 1,10,96,413 ಕಾರ್ಡುದಾರರಿಗೆ ಡಿಬಿಟಿ ಮಾಡಲಾಗಿದೆ. ಈ ವರೆಗೆ ಒಟ್ಟು 2,444.11 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. 12.95 ಲಕ್ಷ ಚೀಟಿದಾರರ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಮಾಡುವ ಮೂಲಕ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. 2.60 ಲಕ್ಷ ಹೊಸ ಖಾತೆಗಳನ್ನು ಅಂಚೆ ಕಚೇರಿಗಳಲ್ಲಿ ತೆರೆಯಲಾಗಿದೆ.

7.67 ಲಕ್ಷ ಅನರ್ಹ ಪಡಿತರ ಚೀಟಿಗಳ ವಿಷಯದಲ್ಲಿ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕ ಪ್ರಕರಣಗಳಲ್ಲಿ ಯಜಮಾನರು ಊರಿನಲ್ಲಿ ಇಲ್ಲದ ಕಾರಣ ತಾಂತ್ರಿಕ ಸಮಸ್ಯೆ ಆಗಿರುವುದರಿಂದ, ಎರಡನೇ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸುವ ಕುರಿತಂತೆ ಸಚಿವ ಸಂಪುಟದ ಮುಂದೆ ಮಂಡಿಸಲು ಸೂಚಿಸಲಾಗಿದೆ. ಡಿಸೆಂಬರ್‌ 31 ರೊಳಗೆ ಎಲ್ಲ ಅರ್ಹರಿಗೆ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಬೇಕು.

ಗೃಹ ಜ್ಯೋತಿ:

ಗೃಹಜ್ಯೋತಿ ಯೋಜನೆಯಡಿ ಈ ವರೆಗೆ 1.62 ಕೋಟಿ ಜನ ನೋಂದಾಯಿಸಿಕೊಂಡಿದ್ದು, 1.50 ಕೋಟಿ ಕುಟುಂಬಗಳಿಗೆ ಈ ಯೋಜನೆಯ ಸೌಲಭ್ಯ ದೊರೆಯುತ್ತಿದೆ. ಆಗಸ್ಟ್‌ ನಿಂದ ಈ ವರೆಗೆ 2,900 ಕೋಟಿ ರೂ. ಭರಿಸಲಾಗಿದೆ. ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳನ್ನು ಇಲಾಖೆಯ ದತ್ತಾಂಶದಲ್ಲಿಯೇ ಗೃಹಜ್ಯೋತಿ ಯೋಜನೆಯಡಿ ಸೇರ್ಪಡೆಗೊಳಿಸಲಾಗಿದೆ. ಈ ಫಲಾನುಭವಿಗಳು ಯಾರೂ ಗೃಹ ಜ್ಯೋತಿಯಿಂದ ಬಿಟ್ಟು ಹೋಗದಂತೆ ಕ್ರಮ ವಹಿಸಬೇಕು.

ಗೃಹಲಕ್ಷ್ಮಿ ಯೋಜನೆ:

ನವೆಂಬರ್‌ ತನಕ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು, 1.10 ಕೋಟಿ ಫಲಾನುಭವಿಗಳಿಗೆ ನೆರವು ವರ್ಗಾವಣೆ ಮಾಡಲಾಗಿದೆ. 2 ಲಕ್ಷ ಫಲಾನುಭವಿಗಳಿಗೆ ಸಂಬಂಧಿಸಿದ ತೊಡಕು ನಿವಾರಿಸಲಾಗುತ್ತಿದೆ.

ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್‌ ಲಿಂಕ್‌ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಫಲಾನುಭವಿಗಳನ್ನು ಬ್ಯಾಂಕಿಗೇ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ನೀಡಲು ಕ್ರಮ ಕೈಗೊಳ್ಳಬೇಕು.

ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್‌ ಖಾತೆ ಆಧಾರ್‌ ಲಿಂಕ್‌ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್‌ ಆಯೋಜಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

1 hour ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

5 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

6 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

14 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago