ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಕುರಿತಂತೆ ಸಂಬಂಧಪಟ್ಟ ಇಲಾಖೆಗಳ ಸಭೆ ನಡೆಯಿತು.

ಸಭೆಯಲ್ಲಿ ಚರ್ಚಿಸಲ್ಪಟ್ಟ ಪ್ರಮುಖ ಅಂಶಗಳು. 

ಶಕ್ತಿ ಯೋಜನೆ:

ಶಕ್ತಿ ಯೋಜನೆ ಜಾರಿಯಾದಾಗಿನಿಂದ ನವೆಂಬರ್‌ 21ರ ವರೆಗೆ ಒಟ್ಟಾರೆ 99.75 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿರುತ್ತಾರೆ. ಇನ್ನೆರಡು ದಿನಗಳಲ್ಲಿ ನೂರು ಕೋಟಿ ದಾಟಲಿದೆ. ತಿಂಗಳ ಸರಾಸರಿ ಪ್ರಯಾಣಿಕರ ಸಂಖ್ಯೆ ಏಪ್ರಿಲ್‌ 2023 ರಲ್ಲಿ 84.17 ಲಕ್ಷ ಇದ್ದು, ಶಕ್ತಿ ಯೋಜನೆ ಜಾರಿಯ ನಂತರ 1.08 ಕೋಟಿಯಿಂದ 1.15 ಕೋಟಿ ವರೆಗೆ ಹೆಚ್ಚಳವಾಗಿದೆ.

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಒಟ್ಟು 828 ಸಾಮಾನ್ಯ ಹಾಗೂ 145 ವಿದ್ಯುತ್‌ ಚಾಲಿತ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ. ಬಸ್‌ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ವಹಿಸಬೇಕು.

ಅನ್ನಭಾಗ್ಯ:

ಅನ್ನಭಾಗ್ಯ ಯೋಜನೆಯಡಿ ಅಕ್ಟೋಬರ್‌ ತಿಂಗಳಲ್ಲಿ 1,10,96,413 ಕಾರ್ಡುದಾರರಿಗೆ ಡಿಬಿಟಿ ಮಾಡಲಾಗಿದೆ. ಈ ವರೆಗೆ ಒಟ್ಟು 2,444.11 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. 12.95 ಲಕ್ಷ ಚೀಟಿದಾರರ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಮಾಡುವ ಮೂಲಕ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. 2.60 ಲಕ್ಷ ಹೊಸ ಖಾತೆಗಳನ್ನು ಅಂಚೆ ಕಚೇರಿಗಳಲ್ಲಿ ತೆರೆಯಲಾಗಿದೆ.

7.67 ಲಕ್ಷ ಅನರ್ಹ ಪಡಿತರ ಚೀಟಿಗಳ ವಿಷಯದಲ್ಲಿ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕ ಪ್ರಕರಣಗಳಲ್ಲಿ ಯಜಮಾನರು ಊರಿನಲ್ಲಿ ಇಲ್ಲದ ಕಾರಣ ತಾಂತ್ರಿಕ ಸಮಸ್ಯೆ ಆಗಿರುವುದರಿಂದ, ಎರಡನೇ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸುವ ಕುರಿತಂತೆ ಸಚಿವ ಸಂಪುಟದ ಮುಂದೆ ಮಂಡಿಸಲು ಸೂಚಿಸಲಾಗಿದೆ. ಡಿಸೆಂಬರ್‌ 31 ರೊಳಗೆ ಎಲ್ಲ ಅರ್ಹರಿಗೆ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಬೇಕು.

ಗೃಹ ಜ್ಯೋತಿ:

ಗೃಹಜ್ಯೋತಿ ಯೋಜನೆಯಡಿ ಈ ವರೆಗೆ 1.62 ಕೋಟಿ ಜನ ನೋಂದಾಯಿಸಿಕೊಂಡಿದ್ದು, 1.50 ಕೋಟಿ ಕುಟುಂಬಗಳಿಗೆ ಈ ಯೋಜನೆಯ ಸೌಲಭ್ಯ ದೊರೆಯುತ್ತಿದೆ. ಆಗಸ್ಟ್‌ ನಿಂದ ಈ ವರೆಗೆ 2,900 ಕೋಟಿ ರೂ. ಭರಿಸಲಾಗಿದೆ. ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳನ್ನು ಇಲಾಖೆಯ ದತ್ತಾಂಶದಲ್ಲಿಯೇ ಗೃಹಜ್ಯೋತಿ ಯೋಜನೆಯಡಿ ಸೇರ್ಪಡೆಗೊಳಿಸಲಾಗಿದೆ. ಈ ಫಲಾನುಭವಿಗಳು ಯಾರೂ ಗೃಹ ಜ್ಯೋತಿಯಿಂದ ಬಿಟ್ಟು ಹೋಗದಂತೆ ಕ್ರಮ ವಹಿಸಬೇಕು.

ಗೃಹಲಕ್ಷ್ಮಿ ಯೋಜನೆ:

ನವೆಂಬರ್‌ ತನಕ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು, 1.10 ಕೋಟಿ ಫಲಾನುಭವಿಗಳಿಗೆ ನೆರವು ವರ್ಗಾವಣೆ ಮಾಡಲಾಗಿದೆ. 2 ಲಕ್ಷ ಫಲಾನುಭವಿಗಳಿಗೆ ಸಂಬಂಧಿಸಿದ ತೊಡಕು ನಿವಾರಿಸಲಾಗುತ್ತಿದೆ.

ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್‌ ಲಿಂಕ್‌ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಫಲಾನುಭವಿಗಳನ್ನು ಬ್ಯಾಂಕಿಗೇ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ನೀಡಲು ಕ್ರಮ ಕೈಗೊಳ್ಳಬೇಕು.

ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್‌ ಖಾತೆ ಆಧಾರ್‌ ಲಿಂಕ್‌ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್‌ ಆಯೋಜಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು.

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

13 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

1 day ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago